Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 11:25 - ಕನ್ನಡ ಸತ್ಯವೇದವು J.V. (BSI)

25 ಆಗ ದಾವೀದನು ದೂತನಿಗೆ ನೀನು ಹೋಗಿ - ಇದಕ್ಕೋಸ್ಕರವಾಗಿ ವ್ಯಸನ ಪಡಬೇಡ; ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುವದು. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬದಾಗಿ ಅರಸನು ಆಜ್ಞಾಪಿಸುತ್ತಾನೆಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದಕ್ಕೆ ದಾವೀದನು ದೂತನಿಗೆ, “ನೀನು ಹೋಗು, ಇದಕ್ಕೋಸ್ಕರ ವ್ಯಸನಪಡಬೇಡ. ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ, ನಾಳೆ ಇನ್ನೊಬ್ಬನನ್ನು ನುಂಗುವುದು, ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬುದಾಗಿ ಅರಸನು ಆಜ್ಞಾಪಿಸುತ್ತಾನೆ ಎಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ದಾವೀದನು ಆ ದೂತನಿಗೆ, “ನೀನು ಹೋಗಿ ಯೋವಾಬನಿಗೆ, ‘ವ್ಯಸನಪಡಬೇಕಾಗಿಲ್ಲ; ಕತ್ತಿ ಈ ದಿನ ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುತ್ತದೆ. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿ, ಎಂಬುದಾಗಿ ಅರಸರು ಆಜ್ಞಾಪಿಸುತ್ತಾರೆ’ ಎಂದು ಹೇಳಿ ಅವನನ್ನು ಧೈರ್ಯಪಡಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದಾವೀದನು ಸಂದೇಶಕನಿಗೆ, “ನೀನು ಹೋಗಿ ಯೋವಾಬನಿಗೆ: ‘ಇದರಿಂದ ನೀನು ತಳಮಳಗೊಳ್ಳಬೇಡ. ಒಂದೇ ಖಡ್ಗವು ಈ ಹೊತ್ತು ಒಬ್ಬನನ್ನು ಕೊಂದರೆ, ಇನ್ನೊಂದು ದಿನ ಇನ್ನೊಬ್ಬನನ್ನು ಕೊಲ್ಲುವುದು. ರಬ್ಬ ನಗರದ ಮೇಲೆ ಧೈರ್ಯವಾಗಿ ಆಕ್ರಮಣಮಾಡು. ಆಗ ನೀನು ನಗರವನ್ನು ಗೆಲ್ಲುವೆ!’ ಈ ಮಾತುಗಳಿಂದ ಯೋವಾಬನನ್ನು ಹುರಿದುಂಬಿಸು” ಎಂಬುದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ದಾವೀದನು ಆ ದೂತನಿಗೆ, “ನೀನು ಯೋವಾಬನಿಗೆ, ‘ಇದು ನಿನ್ನನ್ನು ಕದಲಿಸದಿರಲಿ. ಖಡ್ಗವು ಇವನನ್ನಾದರೂ ಸರಿ, ಅವನನ್ನಾದರೂ ಸರಿ ತಿಂದುಬಿಡುವುದು. ನೀನು ಪಟ್ಟಣವನ್ನು ನಿರ್ಮೂಲ ಮಾಡುವ ಹಾಗೆ, ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ,’ ಎಂದು ಹೇಳಿ, ಅವನನ್ನು ಬಲಪಡಿಸು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 11:25
8 ತಿಳಿವುಗಳ ಹೋಲಿಕೆ  

ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡು


ಅದು ತಾನಾಗಿ ಸ್ವದೇಶದ ದಾರಿ ಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ ಆ ಮಾರ್ಗ ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ನಮ್ಮ ಅದೃಷ್ಟವೇ ಎಂದೂ ತಿಳಿದುಕೊಳ್ಳಿರಿ ಅಂದರು.


ಆಗ ಬಿಲ್ಲುಗಾರರು ಗೋಡೆಯ ಮೇಲಣಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಮಡಿದನು ಎಂಬದೇ.


ಊರೀಯನ ಮರಣವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು.


ಇಸ್ರಾಯೇಲ್ಯರು ತಿರಿಗಿ ಧೈರ್ಯ ತಂದುಕೊಂಡು ಮೊದಲನೆಯ ದಿನದಲ್ಲಿ ವ್ಯೂಹ ಕಟ್ಟಿದ ಸ್ಥಳದಲ್ಲೇ ತಿರಿಗಿ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು