Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 12:23 - ಕನ್ನಡ ಸತ್ಯವೇದವು J.V. (BSI)

23 ಈಗ ಸತ್ತಿದ್ದಾನಲ್ಲಾ, ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವದು ನನ್ನಿಂದಾದೀತೇ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವದಿಲ್ಲ ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಈಗ ಸತ್ತುಹೋದನಲ್ಲಾ. ನಾನೇಕೆ ಉಪವಾಸಮಾಡಬೇಕು? ಅವನನ್ನು ಹಿಂದಕ್ಕೆ ತರುವುದು ನನ್ನಿಂದಾದೀತೆ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಈಗ ಸತ್ತಿದ್ದಾನೆ ಅಲ್ಲವೆ? ನಾನೇಕೆ ಉಪವಾಸ ಮಾಡಬೇಕು? ಅವನನ್ನು ಹಿಂದಕ್ಕೆ ತರಲು ನನ್ನಿಂದಾದೀತೇ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಈಗ ಮಗು ಸತ್ತುಹೋಗಿದೆ. ಆದ್ದರಿಂದ ಈಗ ನಾನೇಕೆ ಉಪವಾಸಮಾಡಬೇಕು? ಆ ಮಗುವಿಗೆ ಮತ್ತೆ ನಾನು ಜೀವವನ್ನು ಕೊಡಲು ಸಾಧ್ಯವೇ? ಇಲ್ಲ! ಎಂದಾದರೂ ಒಂದು ದಿನ ನಾನು ಅವನ ಬಳಿಗೆ ಹೋಗುತ್ತೇನೆ. ಆದರೆ ಅವನು ನನ್ನ ಬಳಿಗೆ ಹಿಂದಿರುಗುವುದಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಈಗ ಸತ್ತಿದೆಯಲ್ಲಾ. ನಾನು ಉಪವಾಸ ಮಾಡುವುದು ಏಕೆ? ನಾನು ಅದನ್ನು ತಿರುಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು. ಆದರೆ ಅದು ನನ್ನ ಬಳಿಗೆ ತಿರುಗಿ ಬರುವುದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 12:23
6 ತಿಳಿವುಗಳ ಹೋಲಿಕೆ  

ಅವನ ಗಂಡುಮಕ್ಕಳೂ ಹೆಣ್ಣು ಮಕ್ಕಳೂ ಎಲ್ಲರೂ ದುಃಖಶಮನ ಮಾಡುವದಕ್ಕೆ ಪ್ರಯತ್ನಿಸಿದಾಗ್ಯೂ ಅವನು ಶಾಂತಿಯನ್ನು ಹೊಂದಲೊಲ್ಲದೆ - ನಾನು ಹೀಗೇ ಹಂಬಲಿಸುತ್ತಾ ನನ್ನ ಮಗನಿರುವ ಪಾತಾಳವನ್ನು ಸೇರುವೆನು ಅಂದನು. ಹೀಗೆ ತಂದೆಯು ಮಗನಿಗೋಸ್ಕರ ಅಳುತ್ತಿದ್ದನು.


ಅದಕ್ಕೆ ಯೇಸು - ಈಹೊತ್ತೇ ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ ಎಂದು ಉತ್ತರಕೊಟ್ಟನು.


ನೀನು ನನ್ನನ್ನು ಮರಣಕ್ಕೆ ಗುರಿಮಾಡಿ ಸಮಸ್ತಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.


ನಾನು ಅಂಧಕಾರದಿಂದಲೂ ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರಿಗಿ ಬರಲಾರೆನು.


ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು, ನಿನ್ನ ಪೌರುಷವನ್ನು ತೋರಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು