Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:23 - ಕನ್ನಡ ಸತ್ಯವೇದವು J.V. (BSI)

23 ಎರಡು ವರುಷಗಳಾದನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀವಿುನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಯಿಮನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವ ವ್ಯವಸ್ಥೆಮಾಡಿದನು. ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಆಮಂತ್ರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಎರಡು ವರ್ಷಗಳ ನಂತರ, ಅಬ್ಷಾಲೋಮನ ಕುರಿಗಳ ತುಪ್ಪಟವನ್ನು ಕತ್ತರಿಸುವುದಕ್ಕಾಗಿ ಕೆಲವು ಜನರು ಬಾಳ್‌ಹಾಚೋರಿಗೆ ಬಂದರು. ಇದನ್ನು ಬಂದು ನೋಡುವಂತೆ ರಾಜನ ಮಕ್ಕಳಿಗೆಲ್ಲ ಅಬ್ಷಾಲೋಮನು ಆಹ್ವಾನವನ್ನು ನೀಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಎರಡು ವರ್ಷ ಪೂರ್ಣ ಮುಗಿದ ತರುವಾಯ, ಅಬ್ಷಾಲೋಮನಿಗೆ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವಾಗ, ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:23
13 ತಿಳಿವುಗಳ ಹೋಲಿಕೆ  

ನಾಬಾಲನು ಉಣ್ಣೆಕತ್ತರಿಸುತ್ತಿದ್ದಾನೆಂಬ ವರ್ತಮಾನವು ಅಲ್ಲಿ ಅರಣ್ಯದಲ್ಲಿದ್ದ ದಾವೀದನಿಗೆ ಮುಟ್ಟಿದಾಗ ಅವನು


ಅವನಿಗೆ ಇಳಕಲಿನ ಪ್ರದೇಶದಲ್ಲಿಯೂ ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳಿದ್ದದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದದರಿಂದ ಗುಡ್ಡ, ಫಲವತ್ತಾದ ಬೈಲು ಇವುಗಳಲ್ಲಿ ಹೊಲ ದ್ರಾಕ್ಷೇತೋಟಗಳ ಕೆಲಸಮಾಡುವವರನ್ನು ನೇವಿುಸಿದನು.


ಅನೇಕ ಕುರಿಹಿಂಡುಗಳುಳ್ಳವನಾಗಿದ್ದ ಮೋವಾಬ್ಯರ ಅರಸನಾದ ಮೇಷನೆಂಬವನು ಇಸ್ರಾಯೇಲ್ಯರ ಅರಸನಿಗೆ ಲಕ್ಷ ಕುರಿಗಳ ಮತ್ತು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.


ಅವನು ಗಟ್ಟಾ ಇಳಿದು ಹೋಗಿ ಹೋರಿಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಎಲ್ಲಾ ರಾಜಪುತ್ರರನ್ನೂ ಸೇನಾಪತಿಗಳನ್ನೂ ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ ಎಂದು ಕೂಗುತ್ತಿರುತ್ತಾರೆ.


ರಾಜನಾಗಿ ಹೋರಿಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ ಯಾಜಕನಾದ ಎಬ್ಯಾತಾರನನ್ನೂ ಸೇನಾಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ.


ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಲ್ಲಿರುವ ಚೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ಪ್ರವಾದಿಯಾದ ನಾತಾನ್, ಬೆನಾಯ, ಯುದ್ಧಭಟರು, ತಮ್ಮನಾದ ಸೊಲೊಮೋನ್ ಇವರನ್ನು ಬಿಟ್ಟು


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದಿದ್ದ ಕಾರಣ ಈಕೆಯು ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸವು ನಡೆಯುತ್ತದೆಂಬ ವರ್ತಮಾನವನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ; ಅವರಿಗೇನೂ ನಷ್ಟವಾಗಲಿಲ್ಲ.


ಕರ್ಮೆಲಿನಲ್ಲಿ ಸ್ವಾಸ್ತ್ಯವಿದ್ದಂಥ ಒಬ್ಬ ಮನುಷ್ಯನು ಮಾವೋನಿನಲ್ಲಿ ವಾಸಿಸುತ್ತಿದ್ದನು; ಅವನ ಹೆಸರು ನಾಬಾಲ;


ಅವನು ಅರಸನ ಬಳಿಗೂ ಹೋಗಿ ಅವನನ್ನು - ಸ್ವಾಮೀ, ನಿನ್ನ ಸೇವಕನು ಕುರಿಗಳ ಉಣ್ಣೆ ಕತ್ತರಿಸುವವರನ್ನು ಕರಿಸಿದ್ದಾನೆ. ಅರಸನು ತನ್ನ ಸೇವಕರೊಡನೆ ಅವನ ಬಳಿಗೆ ಚಿತ್ತಯಿಸೋಣವಾಗಲಿ ಎಂದು ಬೇಡಿಕೊಂಡನು.


ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವದಕ್ಕೋಸ್ಕರ ಹೋಗಿದ್ದನು. ಹೀಗಿರುವಲ್ಲಿ ರಾಹೇಲಳು ತನ್ನ ತಂದೆಯ ಮನೆಯಲ್ಲಿದ್ದ ವಿಗ್ರಹಗಳನ್ನು ಕದ್ದುಕೊಂಡಳು.


ನೋಬ್, ಅನನ್ಯ, ಹಾಚೋರ್, ರಾಮಾ, ಗಿತ್ತಯಿಮ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು