Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 13:29 - ಕನ್ನಡ ಸತ್ಯವೇದವು J.V. (BSI)

29 ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮತಮ್ಮ ಹೇಸರಕತ್ತೆಗಳನ್ನು ಹತ್ತಿ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅಬ್ಷಾಲೋಮನ ಸೇವಕರು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದುಬಿಟ್ಟರು. ಆದರೆ ದಾವೀದನ ಇತರ ಗಂಡುಮಕ್ಕಳೆಲ್ಲರೂ ತಮ್ಮತಮ್ಮ ಹೇಸರಕತ್ತೆಗಳನ್ನೇರಿ ತಪ್ಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅಬ್ಷಾಲೋಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆಲ್ಲರೂ ಎದ್ದು, ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 13:29
13 ತಿಳಿವುಗಳ ಹೋಲಿಕೆ  

ಅವರು ಅರಸನ ಸನ್ನಿಧಿಗೆ ಬರಲು ಅರಸನು ಅವರಿಗೆ - ನೀವು ನನ್ನ ಸೇವಕರನ್ನು ಕರಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ.


ಅಬ್ಷಾಲೋಮನು ದಾವೀದನ ಸೇವಕರಿಗೆ ಸಿಕ್ಕಿದನು; ಹೇಗಂದರೆ - ಅವನು ಹತ್ತಿದ ಹೇಸರಕತ್ತೆಯು ಒಂದು ದೊಡ್ಡ ಏಲಾಮರದ ಕೆಳಗೆ ಹಾದುಹೋಗುವಾಗ ಅವನ ತಲೆಯು ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಹೇಸರಕತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂವಿುಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.


ಕೆಟ್ಟ ಕೆಲಸಕ್ಕೆ ಎರಡು ಕೈಗಳನ್ನು ಹಾಕಿ ಚೆನ್ನಾಗಿ ಮಾಡುತ್ತಾರೆ; ಪ್ರಭುವು [ಧನವನ್ನು] ಕೇಳುತ್ತಾನೆ, ನ್ಯಾಯಾಧಿಪತಿಯು ಲಂಚಕ್ಕೆ [ಕೈಯೊಡ್ಡುತ್ತಾನೆ], ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ; ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.


ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ಪಶುಗಳಿಗೆ ಬೇರೆ ಜಾತಿಯ ಪಶುಗಳನ್ನು ಹಾರಿಸಬಾರದು; ನಿಮ್ಮ ಹೊಲಗಳಲ್ಲಿ ವಿುಶ್ರಬೀಜಗಳನ್ನು ಬಿತ್ತಬಾರದು; ನಾರೂ ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.


ಸಿಬೆಯೋನನ ಮಕ್ಕಳು - ಅಯ್ಯಾ, ಅನಾಹ. ಈ ಅನಾಹನೇ ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನು.


ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ - ಅಬ್ಷಾಲೋಮನು ರಾಜಪುತ್ರರೆಲ್ಲರನ್ನೂ ಕೊಂದುಹಾಕಿದನು, ಒಬ್ಬನನ್ನೂ ಉಳಿಸಲಿಲ್ಲ ಎಂಬ ಸುದ್ದಿ ಮುಟ್ಟಿತು.


ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ ಗೀಹೋನಿಗೆ ಕರಕೊಂಡು ಹೋದರು.


ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದದರಿಂದಲೂ ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡದರಿಂದಲೂ ಕತ್ತಿಯು ನಿನ್ನ ಮನೆಯನ್ನು ಬಿಟ್ಟು ಹೋಗುವದಿಲ್ಲ.


ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿವಸ ಅವರಿಬ್ಬರೂ ಹೊಲದಲ್ಲಿ ಜಗಳವಾಡಿದರು; ಅಲ್ಲಿ ಬಿಡಿಸುವವರಾರೂ ಇರಲಿಲ್ಲವಾದದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು