Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:19 - ಕನ್ನಡ ಸತ್ಯವೇದವು J.V. (BSI)

19 ಅರಸನು - ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದಲ್ಲವೋ ಎಂದು ಕೇಳಿದನು. ಅದಕ್ಕೆ ಸ್ತ್ರೀಯು - ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವದಕ್ಕೆ ಆಗುವದಿಲ್ಲ; ನಿನ್ನ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈವಾಡ ಇದೆಯೇ?” ಎಂದು ಕೇಳಿದನು. ಅದಕ್ಕೆ ಆ ಸ್ತ್ರೀಯು, “ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ, ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ. ನಿನ್ನ ದಾಸಿಯಾದ ನನ್ನನ್ನು ಪ್ರೇರೇಪಿಸಿ, ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿ ಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದೆ ಅಲ್ಲವೇ?’ ಎಂದು ಕೇಳಿದನು. ಅದಕ್ಕೆ ಆ ಸ್ತ್ರೀ, “ಅರಸರ ಜೀವದಾಣೆ, ಅರಸರು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ನಿಮ್ಮ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವರು ನಿಮ್ಮ ಸೇವಕನಾದ ಯೋವಾಬನೇ ಹೌದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ರಾಜನು, “ಈ ವಿಚಾರಗಳನ್ನೆಲ್ಲ ಹೇಳಲು ಯೋವಾಬನು ನಿನಗೆ ತಿಳಿಸಿದನಲ್ಲವೇ?” ಎಂದನು. ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ನಿಮ್ಮ ಆಣೆಯಾಗಿಯೂ, ನೀವು ಹೇಳಿದ್ದು ಸರಿ! ನಿಮ್ಮ ಸೇವಕನಾದ ಯೋವಾಬನು ಈ ವಿಷಯಗಳನ್ನು ಹೇಳಲು ನನಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಅರಸನು, “ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ?” ಎಂದು ಕೇಳಿದನು. ಆ ಸ್ತ್ರೀಯು ಉತ್ತರವಾಗಿ, “ನಿನ್ನ ಜೀವದಾಣೆ, ಅರಸನಾದ ನನ್ನ ಒಡೆಯನೇ, ನೀನು ಒಂದು ಮಾತು ಹೇಳಿದರೆ, ನಾವು ಅದನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ಏಕೆಂದರೆ ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ, ಈ ಎಲ್ಲಾ ಮಾತುಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:19
22 ತಿಳಿವುಗಳ ಹೋಲಿಕೆ  

ಎಣ್ಣೆ ಹಚ್ಚಿಕೊಳ್ಳದೆ ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು ಎಂದು ಆಜ್ಞಾಪಿಸಿ ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.


ಹನ್ನಳು ಏಲಿಗೆ - ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಎಡಕ್ಕಾಗಲಿ ಬಲಕ್ಕಾಗಲಿ ತಿರುಗಬೇಡ; ನಿನ್ನ ಕಾಲನ್ನು ಕೇಡಿಗೆ ದೂರಮಾಡು.


ಆಗ ಎಲೀಯನು ಎಲೀಷನಿಗೆ - ದಯವಿಟ್ಟು ನೀನು ಇಲ್ಲೇ ಇರು; ಯೆಹೋವನು ನನಗೆ ಬೇತೇಲಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ ಅನ್ನಲು ಎಲೀಷನು - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವದಿಲ್ಲ ಎಂದು ಉತ್ತರಕೊಟ್ಟನು.


ಅದಕ್ಕೆ ಊರೀಯನು - ಒಡಂಬಡಿಕೆಯ ಮಂಜೂಷವೂ ಇಸ್ರಾಯೇಲ್ಯರೂ ಯೆಹೂದ್ಯರೂ ಗುಡಾರಗಳಲ್ಲಿ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬೈಲಿನಲ್ಲಿ ಪಾಳೆಯ ಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ ನಾನು ನನ್ನ ಮನೆಗೆ ಹೋಗಿ ಉಂಡು ಕುಡಿದು ಹೆಂಡತಿಯೊಡನೆ ಮಲಗಿಕೊಳ್ಳುವದು ಹೇಗೆ? ನಿನ್ನಾಣೆ, ನಿನ್ನ ಜೀವದ ಆಣೆ, ನಾನು ಇಂಥದನ್ನು ಮಾಡುವದೇ ಇಲ್ಲ ಎಂದು ಉತ್ತರಕೊಟ್ಟನು.


ನಿನ್ನ ಕೈಗಳು ಕಟ್ಟಲ್ಪಡಲಿಲ್ಲ, ನಿನ್ನ ಕಾಲಿಗೆ ಬೇಡಿಗಳು ಬರಲಿಲ್ಲ; ನೀನು ದುಷ್ಟರಿಂದಲೋ ಎಂಬಂತೆ ಹತನಾದಿ ಎಂದು ಶೋಕಗೀತವನ್ನು ಹಾಡಲು ಜನರು ತಿರಿಗಿ ಅತ್ತರು.


ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರೆಲ್ಲರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ ಕುಷ್ಠರೋಗಿಗಳೂ ಕುಂಟರೂ ಕತ್ತಿಯಿಂದ ಹತರಾಗುವವರೂ ಭಿಕ್ಷೆ ಬೇಡುವವರೂ ಇದ್ದೇ ಇರಲಿ ಅಂದನು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತ ಸಂಭಾಷಣೆಗಾಗಿಯೋ ಎಂಬಂತೆ ಊರು ಬಾಗಲಿನೊಳಗೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆ, ನಿನ್ನ ಜೀವದಾಣೆ, ನಿನ್ನ ವಿರೋಧಿಗಳೂ ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.


ಅದಕ್ಕೆ ದಾವೀದನು - ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕುತ್ತದೆಂಬದನ್ನು ನಿನ್ನ ತಂದೆಯು ಬಲ್ಲನು. ಆದದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನಾಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರವಿದೆ ಎಂದು ಖಂಡಿತವಾಗಿ ಹೇಳಿದನು.


ದಾವೀದನು ಫಿಲಿಷ್ಟಿಯನೊಡನೆ ಯುದ್ಧಮಾಡುವದಕ್ಕೆ ಹೊರಟದ್ದನ್ನು ಸೌಲನು ಕಂಡು ತನ್ನ ಸೇನಾಪತಿಯಾದ ಅಬ್ನೇರನನ್ನು - ಅಬ್ನೇರನೇ, ಈ ಹುಡುಗನು ಯಾರ ಮಗನು ಎಂದು ಕೇಳಿದ್ದಕ್ಕೆ ಅವನು ಸೌಲನಿಗೆ - ಅರಸನೇ, ನಿನ್ನ ಜೀವದಾಣೆ ನನಗೆ ಗೊತ್ತಿಲ್ಲ ಎಂದು ಉತ್ತರಕೊಟ್ಟನು.


ನನ್ನ ಸೇವಕನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ಹೋಗಬೇಡ. ಆಗ ನೀನು ಎಲ್ಲಿ ಹೋದರೂ ಕೃತಾರ್ಥನಾಗುವಿ.


ಆದದರಿಂದ ನೀವು ಸ್ವಲ್ಪವಾದರೂ ತಪ್ಪದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.


ತಮ್ಮ ದೇಶವನ್ನು ದಾಟಿಹೋಗುವದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲಗಳಲ್ಲಿ ಯಾದರೂ ದ್ರಾಕ್ಷೇತೋಟಗಳಲ್ಲಿಯಾದರೂ ಹೋಗುವದಿಲ್ಲ; ಬಾವಿಗಳ ನೀರನ್ನು ಕುಡಿಯುವದಿಲ್ಲ; ರಾಜ ಮಾರ್ಗದಲ್ಲಿಯೇ ನಡೆದು ತಮ್ಮ ದೇಶದ ಮೇರೆಗಳನ್ನು ದಾಟಿದ ತನಕ ಬಲಕ್ಕೂ ಎಡಕ್ಕೂ ತಿರುಗುವದಿಲ್ಲ ಎಂದು ಹೇಳಿಸಿದನು.


ನೀನು ಅವನ ಸಂಗಡ ಮಾತಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.


ಆಗ ಅರಸನು ಆ ಸ್ತ್ರೀಗೆ - ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ; ನೀನು ಅದನ್ನು ಮರೆಮಾಡದೆ ತಿಳಿಸಬೇಕು ಎಂದು ಹೇಳಲು ಆಕೆಯು - ಅರಸನ ಅಪ್ಪಣೆಯಾಗಲಿ ಎಂದು ಉತ್ತರಕೊಟ್ಟಳು.


ನಾನು ಅವನ ಪ್ರಾಣಕ್ಕೆ ಅಪಾಯವನ್ನುಂಟುಮಾಡಿದರೆ ಅದು ಅರಸನಿಗೆ ಮರೆಯಾಗುವದಿಲ್ಲ; ನೀನೂ ನನ್ನನ್ನು ಕೈಬಿಟ್ಟು ದೂರ ನಿಲ್ಲುವಿ ಎಂದು ಉತ್ತರಕೊಟ್ಟನು.


ವಿಷಯವನ್ನು ರಹಸ್ಯಮಾಡುವದು ದೇವರ ಪ್ರಭಾವ; ವಿಷಯವನ್ನು ವಿಮರ್ಶೆಮಾಡುವದು ರಾಜರ ಪ್ರಭಾವ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು