Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 14:22 - ಕನ್ನಡ ಸತ್ಯವೇದವು J.V. (BSI)

22 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ ಅರಸನನ್ನು ಹರಸಿ - ಅರಸನೇ, ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂದು ಈಗ ಗೊತ್ತಾಯಿತು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ, ಅರಸನನ್ನು ಹರಸಿ, “ಅರಸನೇ ನನ್ನ ಒಡೆಯನೇ, ನೀನು ನಿನ್ನ ಸೇವಕನಾದ ನನ್ನ ಬಿನ್ನಹವನ್ನು ಲಾಲಿಸಿದ್ದರಿಂದ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂದು ಈಗ ಗೊತ್ತಾಯಿತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ ಅರಸನನ್ನು ಹರಸಿ, “ಅರಸರೇ, ನನ್ನ ಒಡೆಯರೇ, ನೀವು ನಿಮ್ಮ ಸೇವಕನಾದ ನನ್ನ ಬಿನ್ನಹವನ್ನು ಆಲಿಸಿದ್ದರಿಂದ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂದು ಈಗ ಗೊತ್ತಾಯಿಸು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೋವಾಬನು ಅರಸನಾದ ದಾವೀದನಿಗೆ ಸಾಷ್ಟಾಂಗನಮಸ್ಕಾರಮಾಡಿ, “ನಾನು ಕೇಳಿಕೊಂಡದ್ದನ್ನು ನೀನು ನೆರವೇರಿಸಿದ್ದರಿಂದ, ನೀನು ನನ್ನ ವಿಷಯದಲ್ಲಿ ಸಂತೋಷದಿಂದಿರುವೆ ಎಂಬುದು ಇಂದು ನನಗೆ ಗೊತ್ತಾಯಿತು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಯೋವಾಬನು ಮೋರೆ ಕೆಳಗಾಗಿ ನೆಲದ ಮೇಲೆ ಬಿದ್ದು ವಂದಿಸಿದನು. ಯೋವಾಬನು, “ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ, ನನ್ನ ಒಡೆಯನಾದ ಅರಸನೇ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂಬುದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 14:22
13 ತಿಳಿವುಗಳ ಹೋಲಿಕೆ  

ಮಕ್ಕಳು ಎದ್ದುನಿಂತು ಆಕೆಯನ್ನು ಧನ್ಯಳು ಎಂದು ಹೇಳುವರು;


ಅವರ ಸೊಂಟವು ನನ್ನ ಕುರಿಗಳ ಉಣ್ಣೆಯಿಂದ ಬೆಚ್ಚಗಾಗಿ ನಾನು ಹರಸಲ್ಪಡಲಿಲ್ಲವೋ?


ಕೇಳಿದ ಕಿವಿಯು ನನ್ನನ್ನು ಹರಸಿತು, ನೋಡಿದ ಕಣ್ಣು ಸಾಕ್ಷಿಕೊಟ್ಟಿತು.


ಮತ್ತು ಸ್ವೇಚ್ಫೆಯಿಂದ ಯೆರೂಸಲೇವಿುನಲ್ಲಿ ವಾಸಿಸುವದಕ್ಕೆ ಮನಸ್ಸುಮಾಡಿದಂಥವರನ್ನು ಜನರು ಆಶೀರ್ವದಿಸಿದರು.


ಎಲ್ಲಾ ಜನರೂ ಹೊಳೆದಾಟಿದರು. ಅರಸನು ಹೊಳೆದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.


ಅದಕ್ಕೆ ದಾವೀದನು - ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕುತ್ತದೆಂಬದನ್ನು ನಿನ್ನ ತಂದೆಯು ಬಲ್ಲನು. ಆದದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನಾಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರವಿದೆ ಎಂದು ಖಂಡಿತವಾಗಿ ಹೇಳಿದನು.


ಮೋವಾಬ್ಯಳಾದ ರೂತಳು ನೊವೊವಿುಗೆ - ನಾನು ಹೋಗಿ ಯಾವನು ನನಗೆ ದಯೆತೋರಿಸುವನೋ ಅವನ ಹೊಲದಲ್ಲಿ ಹಕ್ಕಲತೆನೆಗಳನ್ನು ಕೂಡಿಸಿಕೊಂಡು ಬರುವೆನು ಅಂದಳು.


ಆದರೆ ನೋಹನಿಗೆ ಯೆಹೋವನ ದಯವು ದೊರಕಿತು.


ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು ಯಾಕೋಬನು ಫರೋಹನನ್ನು ಆಶೀರ್ವದಿಸಿದನು.


ಅನಂತರ ಅರಸನು ಯೋವಾಬನಿಗೆ - ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ; ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರಕೊಂಡು ಬಾ ಅಂದನು.


ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇವಿುಗೆ ಕರಕೊಂಡು ಬಂದನು.


ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು - ಅರಸೇ, ರಕ್ಷಿಸು ಎಂದು ಕೂಗಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು