Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:12 - ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಅವನು ಸಮಾಧಾನಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಕರೇಕಳುಹಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದರಿಂದ ಒಳಸಂಚು ಬಲವಾಗುತ್ತಾ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಲ್ಲದೆ ಅವನು ಶಾಂತಿಸಮಾಧಾನದ ಬಲಿದಾನ ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಬರಮಾಡಿಸಿದ್ದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದುದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಹೀತೋಫೆಲನೆಂಬವನು ದಾವೀದನ ಸಲಹೆಗಾರರಲ್ಲಿ ಒಬ್ಬನಾಗಿದ್ದನು. ಅಹೀತೋಫೆಲನು ಗೀಲೋವ ಎಂಬ ಪಟ್ಟಣದವನು. ಅಬ್ಷಾಲೋಮನು ಯಜ್ಞಗಳನ್ನು ಅರ್ಪಿಸುತ್ತಿರುವಾಗ ಅಹೀತೋಫೆಲನನ್ನು ಅವನ ಪಟ್ಟಣವಾದ ಗೀಲೋವದಿಂದ ಕರೆಯಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಅವನು ಮಾಡಿದ ಒಳಸಂಚು ಸಫಲವಾಗತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:12
26 ತಿಳಿವುಗಳ ಹೋಲಿಕೆ  

ನಾನು ಯಾವನನ್ನು ನಂಬಿದ್ದೆನೋ ಯಾವನು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ ಅಂಥ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.


ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು.


ಅನಾಬ್, ಎಷ್ಟೆಮೋ, ಆನೀಮ್, ಗೋಷೆನ್,


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದು ಕತ್ತೆಗೆ ತಡಿಹಾಕಿಸಿ ಕೂತುಕೊಂಡು ತನ್ನ ಊರಿಗೆ ಹೋಗಿ ಮನೆಯಲ್ಲಿ ವ್ಯವಸ್ಥೆಮಾಡಿ ಉರ್ಲುಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ಯರೂ ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೇದಾಗಿದೆ ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟು ಮಾಡಬೇಕೆಂದು ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದನು.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯರೂ ಸತ್ಕಾರ್ಯಗಳಿಗೆಲ್ಲಾ ಅಪ್ರಯೋಜಕರೂ ಆಗಿರುವದರಿಂದ ದೇವರನ್ನು ಅರಿಯೆವೆಂದು ತಮ್ಮ ಕಾರ್ಯಗಳಿಂದಲೇ ಹೇಳಿದಂತಾಯಿತು.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ; ನಾನು ಆದುಕೊಂಡವರನ್ನು ನಾನು ಬಲ್ಲೆನು; ಆದರೆ - ನನ್ನ ಕೂಡ ಊಟಮಾಡುವವನೇ ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ.


ಅಹೀತೋಫೆಲನು ಅರಸನ ಮಂತ್ರಿಯು; ಅರ್ಕೀಯನಾದ ಹೂಷೈಯು ಅವನ ವಿುತ್ರನು;


ಅವರು ಉಪವಾಸವನ್ನು ಪ್ರಕಟಿಸಿ ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು.


ಅದರಲ್ಲಿ - ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿ ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ


ಬಾಲಾಕನು ಅವನ ಅಪ್ಪಣೆಯ ಮೇರೆಗೆ ಮಾಡಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.


ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸಬೇಕು ಎಂದು ಹೇಳಿ ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬೈಲು ಎಂಬ ಸ್ಥಳಕ್ಕೆ ಕರಕೊಂಡುಹೋಗಿ ಅಲ್ಲಿಯೂ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.


ಆಗ ಬಿಳಾಮನು - ಇಲ್ಲಿ ನೀನು ಏಳು ಯಜ್ಞಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಪಡಿಸಬೇಕೆಂದು ಬಾಲಾಕನಿಗೆ ಹೇಳಿದನು.


ಅಷ್ಟರಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರೊಡನೆ ಯೆರೂಸಲೇವಿುಗೆ ಬಂದನು. ಅಹೀತೋಫೆಲನೂ ಅವನ ಸಂಗಡ ಇದ್ದನು.


ಮಾಕಾ ಊರಿನ ಅಹಸ್ಬೈ ಎಂಬವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ್ ಎಂಬವನ ಮಗನಾದ ಎಲೀಯಾಮ್,


ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು