Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:16 - ಕನ್ನಡ ಸತ್ಯವೇದವು J.V. (BSI)

16 ಆಗ ಅರಸನು ಮನೆಕಾಯುವದಕ್ಕಾಗಿ ಹತ್ತು ಮಂದಿ ಉಪ ಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅರಸನು ತನ್ನ ಅರಮನೆ ಕಾಯುವುದಕ್ಕಾಗಿ ಹತ್ತು ಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಅರಸನು ಮನೆಕಾಯುವುದಕ್ಕಾಗಿ ಹತ್ತುಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ರಾಜನಾದ ದಾವೀದನು ತನ್ನ ಮನೆಯಲ್ಲಿದ್ದ ಎಲ್ಲಾ ಜನರೊಂದಿಗೆ ಹೊರಟನು. ಮನೆಯ ಉಸ್ತುವಾರಿಯನ್ನು ನೋಡಿಕೊಳ್ಳುವುದಕ್ಕಾಗಿ ರಾಜನು ತನ್ನ ಹತ್ತು ಮಂದಿ ಪತ್ನಿಯರನ್ನು ಅಲ್ಲಿಯೇ ಬಿಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು, ಅವನೂ, ಅವನ ಮನೆಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:16
12 ತಿಳಿವುಗಳ ಹೋಲಿಕೆ  

ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತವರು ಬಹಳ ಮಂದಿ.


ಅರಸನಾದ ದಾವೀದನು ಯೆರೂಸಲೇವಿುಗೆ ಬಂದ ಮೇಲೆ ತಾನು ಮನೆಕಾಯುವದಕ್ಕೋಸ್ಕರ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾದ ಒಂದು ಮನೆಯಲ್ಲಿಟ್ಟು ಅವರಿಗೆ ಅನ್ನವಸ್ತ್ರಕೊಡುತ್ತಿದ್ದನು; ಆದರೆ ಅವರನ್ನು ತಿರಿಗಿ ಕೂಡಲಿಲ್ಲ. ಅವರು ಜೀವದಿಂದಿರುವವರೆಗೂ ವಿಧವೆಯರಂತಿದ್ದು ಕಾವಲಲ್ಲಿರಬೇಕಾಯಿತು.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತಕ್ಕನುಸಾರವಾದದ್ದು ಅಂದರೆ ಉತ್ತಮವಾದದ್ದೂ ಮೆಚ್ಚಿಕೆಯಾದದ್ದೂ ದೋಷವಿಲ್ಲದ್ದೂ ಯಾವ ಯಾವದೆಂದು ವಿವೇಚಿಸಿ ತಿಳುಕೊಳ್ಳುವಿರಿ.


ಯೆಹೋವನಾದ ನನ್ನ ಮಾತನ್ನು ಕೇಳು - ನಾನು ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ತೆಗೆದು ನಿನ್ನೆದುರಿನಲ್ಲಿಯೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಕೂಡ ಮಲಗುವನು. ನೀನು ಅದನ್ನು ಗುಪ್ತವಾಗಿ ಮಾಡಿದಿ;


ಬೇಗನೆ ಒಂದು ಕತ್ತೆಯನ್ನು ಹತ್ತಿ ತನ್ನ ಐದು ಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲಿ ಹೊರಟುಹೋಗಿ ಅವನ ಹೆಂಡತಿಯಾದಳು.


ನಿನ್ನ ದಾಸಿಯು ತಂದ ಈ ಕಾಣಿಕೆಯು ಸ್ವಾವಿುಯ ಸೇವಕರಿಗೆ ಸಲ್ಲಲಿ.


ಮತ್ತು ಬಾರಾಕನು ಜೆಬೂಲೂನ್ಯರನ್ನೂ ನಫ್ತಾಲ್ಯರನ್ನೂ ಕೆದೆಷಿಗೆ ಕರಿಸಿದನು; ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು; ದೆಬೋರಳೂ ಹೋದಳು.


ಸೇವಕರು ಅರಸನಿಗೆ - ನಮ್ಮ ಒಡೆಯನಾದ ಅರಸನಿಗೆ ಸರಿತೋಚಿದ್ದನ್ನು ಮಾಡಸಿದ್ಧರಾಗಿದ್ದೇವೆ ಎಂದು ಉತ್ತರಕೊಟ್ಟರು.


ಅರಸನೂ ಅವನ ಜೊತೆಯಲ್ಲಿ ಹೋದ ಜನರೆಲ್ಲರೂ ಪಟ್ಟಣದ ಕಡೇ ಮನೆಯ ಬಳಿಯಲ್ಲಿ ತುಸು ಹೊತ್ತು ನಿಂತರು.


ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು.


ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರಿಗಿ ಕರಕೊಂಡು ಬರಬಾರದೇ? ಸುಮ್ಮನೆ ಕೂತಿರುವದೇಕೆ ಎಂದು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು