Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 15:2 - ಕನ್ನಡ ಸತ್ಯವೇದವು J.V. (BSI)

2 ಅವನು ಹೊತ್ತಾರೆಯಲ್ಲೆದ್ದು ಊರುಬಾಗಲ ಬಳಿಯಲ್ಲಿ ನಿಂತುಕೊಳ್ಳುವನು. ಯಾವನಾದರೂ ತನ್ನ ವ್ಯಾಜ್ಯತೀರಿಸಿಕೊಳ್ಳುವದಕ್ಕಾಗಿ ಅರಸನ ಬಳಿಗೆ ಹೋಗುವದನ್ನು ಅಬ್ಷಾಲೋಮನು ಕಂಡರೆ ಅಂಥವನನ್ನು ತನ್ನ ಬಳಿಗೆ ಕರೆದು ನೀನು ಯಾವ ಊರಿನವನು ಎಂದು ಕೇಳುವನು. ಅವನು - ನಿನ್ನ ಸೇವಕನಾದ ನಾನು ಇಸ್ರಾಯೇಲ್ಯರ ಇಂಥ ಕುಲಕ್ಕೆ ಸೇರಿದವನು ಎಂದು ಉತ್ತರ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಹೊತ್ತಾರೆಯಲ್ಲಿ ಎದ್ದು ಊರ ಬಾಗಿಲಿನ ಬಳಿಯಲ್ಲಿ ನಿಂತುಕೊಳ್ಳುವನು. ಯಾರಾದರೂ ತಮ್ಮ ವ್ಯಾಜ್ಯವನ್ನು ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋಮನು ಕಂಡರೆ ಅಂಥವರನ್ನು ತನ್ನ ಬಳಿಗೆ ಕರೆದು, “ನೀವು ಯಾವ ಊರಿನರವರು?” ಎಂದು ಕೇಳುವನು. ಅವರು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಒಂದು ಕುಲಕ್ಕೆ ಸೇರಿದವರು” ಎಂದು ಉತ್ತರ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ಮುಂಜಾನೆಯೇ ಎದ್ದು ಊರುಬಾಗಿಲ ಬಳಿಯಲ್ಲಿ ನಿಂತುಕೊಳ್ಳುತ್ತಿದ್ದನು. ಯಾರಾದರೂ ತಮ್ಮ ವ್ಯಾಜ್ಯ ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋ‍ಮನು ಕಂಡರೆ ಅಂಥವನನ್ನು ತನ್ನ ಬಳಿಗೆ ಕರೆದು, “ನೀನು ಯಾವ ಊರಿನವನು?” ಎಂದು ವಿಚಾರಿಸುತ್ತಿದ್ದನು. ಅವರು, “ನಿನ್ನ ಸೇವಕರಾದ ನಾವು ಇಸ್ರಯೇಲರ ಇಂಥ ಕುಲಕ್ಕೆ ಸೇರಿದವರು,” ಎಂದು ಉತ್ತರಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಬ್ಷಾಲೋಮನು ಹೊತ್ತಾರೆಯಲ್ಲಿಯೇ ಎದ್ದು ದ್ವಾರದ ಹತ್ತಿರದಲ್ಲಿ ನಿಂತುಕೊಳ್ಳುತ್ತಿದ್ದನು. ತೊಂದರೆಯಲ್ಲಿ ಸಿಕ್ಕಿಕೊಂಡಿರುವ ಯಾವನಾದರೂ ತೀರ್ಪಿಗಾಗಿ ರಾಜನಾದ ದಾವೀದನ ಬಳಿಗೆ ಹೋಗುತ್ತಿರುವುದನ್ನು ಅಬ್ಷಾಲೋಮನು ಕಂಡರೆ ಅವನನ್ನು ತನ್ನ ಬಳಿಗೆ ಕರೆಯುತ್ತಿದ್ದನು. ಅಬ್ಷಾಲೋಮನು, “ನೀನು ಯಾವ ನಗರದಿಂದ ಬಂದೆ?” ಎಂದು ಕೇಳುತ್ತಿದ್ದನು. ಆ ಮನುಷ್ಯನು, “ನಾನು ಇಸ್ರೇಲಿನ ಇಂಥ ಕುಲಕ್ಕೆ ಸೇರಿದವನು” ಎಂದು ಉತ್ತರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಿಲ ಬಳಿಯಲ್ಲಿ ನಿಂತುಕೊಂಡು, ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು, “ನೀನು ಯಾವ ಪಟ್ಟಣದವನು?” ಎಂದು ಕೇಳಿದನು. ಅದಕ್ಕವನು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಇಂಥ ಕುಲಕ್ಕೆ ಸೇರಿದವರು,” ಎಂದು ಉತ್ತರ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 15:2
13 ತಿಳಿವುಗಳ ಹೋಲಿಕೆ  

ಬೆಳಗಾಗಲು ಎಲ್ಲಾ ಮಹಾಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಆಲೋಚನೆ ಮಾಡಿಕೊಂಡು


ಕೇಡುಮಾಡದಿದ್ದರೆ ಅವರಿಗೆ ನಿದ್ರೆಹತ್ತದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವದು.


ಕೊಲೆಪಾತಕನು ಮುಂಜಾನೆ ಎದ್ದು ದಿಕ್ಕಿಲ್ಲದ ಬಡವರನ್ನು ಕೊಂದು ರಾತ್ರಿಯಲ್ಲಿ ಕಳ್ಳನಂತಿರುವನು.


ಆಗ ಅರಸನು ಎದ್ದು ಬಂದು ಊರುಬಾಗಲಲ್ಲಿ ಕೂತುಕೊಂಡನು. ಇಗೋ, ಅರಸನು ಬಂದು ಊರುಬಾಗಲಲ್ಲಿ ಕೂತುಕೊಂಡಿದ್ದಾನೆಂಬ ಸುದ್ದಿಯು ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಅವನ ಮುಂದೆ ಕೂಡಿಬಂದರು.


ಬೋವಜನು ಹೋಗಿ ಊರುಬಾಗಲಲ್ಲಿ ಕೂತನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿರುವದನ್ನು ಕಂಡು ಅವನನ್ನು - ಎಲಾ, ಅಪ್ಪಾ, ಇತ್ತ ಬಂದು ಕೂತುಕೋ ಎಂದು ಕರೆಯಲು ಅವನು ಬಂದು ಕೂತುಕೊಂಡನು.


ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ ಸುಲಭ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.


ಅವರೊಳಗೆ ವ್ಯಾಜ್ಯವೇನಾದರೂ ಉಂಟಾಗಿದ್ದರೆ ನನ್ನ ಬಳಿಗೆ ಬರುತ್ತಾರೆ; ನಾನು ವಿಚಾರಣೆಮಾಡಿ ಅವರಿಗೆ ನ್ಯಾಯತೀರಿಸಿ ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ ಎಂದು ಹೇಳಿದನು.


ಮೋಶೆಯು ಜನರಿಗೋಸ್ಕರ ಮಾಡಿದ್ದೆಲ್ಲವನ್ನೂ ಅವನ ಮಾವನು ನೋಡಿ ಅವನಿಗೆ - ನೀನು ಯಾತಕ್ಕೆ ಜನರಿಗೊಸ್ಕರ ಇಷ್ಟು ಪ್ರಯಾಸಪಡುತ್ತಿ? ಪ್ರಾತಃಕಾಲ ಮೊದಲುಗೊಂಡು ಸಾಯಂಕಾಲದವರೆಗೂ ಜನರು ನಿನ್ನ ಹತ್ತಿರ ನಿಲ್ಲುತ್ತಾರಲ್ಲಾ;


ಹಮೋರನೂ ಅವನ ಮಗನಾದ ಶೆಕೆಮನೂ ಊರುಬಾಗಿಲಿಗೆ ಹೋಗಿ ಊರಿನವರೆಲ್ಲರ ಸಂಗಡ ಮಾತಾಡಿ -


ವಿಧವಿಧವಾದ ಜೀವಹತ್ಯ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಚರ್ಚೆಗಳು ನಿಮ್ಮ ಊರಲ್ಲಿ ಉಂಟಾದಾಗ, ಸರಿಯಾಗಿ ವಿವೇಚಿಸುವದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆದುಕೊಳ್ಳುವ ಸ್ಥಳಕ್ಕೆ


ಅವರು ಅವನಿಗೆ - ನೀನು ಈ ಜನರಿಗೆ ದಯತೋರಿಸಿ ಅವರನ್ನು ಮೆಚ್ಚಿಸುವ ಒಳ್ಳೇ ಉತ್ತರ ಕೊಡುವದಾದರೆ ಅವರು ಯಾವಾಗಲೂ ನಿನಗೆ ಒಳಗಾಗಿರುವರು ಅಂದರು.


ಅವನ ಸ್ಥಾನದಲ್ಲಿ ರಾಜ್ಯಪದವಿಗೆ ಹಕ್ಕುದಾರನಲ್ಲದ ಒಬ್ಬ ನೀಚನು ಎದ್ದು ನೆಮ್ಮದಿಯ ಕಾಲದಲ್ಲಿ ಬಂದು ನಯನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು