Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 16:10 - ಕನ್ನಡ ಸತ್ಯವೇದವು J.V. (BSI)

10 ಅದಕ್ಕೆ ಅರಸನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿರಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ನೀನು ಹೀಗೇಕೆ ಮಾಡಿದಿ ಎಂದು ಅವನನ್ನು ಯಾರು ಕೇಳಬಹುದು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನಾನು ನಿಮಗೇನು ಮಾಡಿದೆ? ಬಹುಶಃ ಅವನು ನನ್ನನ್ನು ಶಪಿಸಿದ್ದಾನೆ, ಏಕೆಂದರೆ, ‘ದಾವೀದನನ್ನು ಶಪಿಸು’ ಎಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದಿ?’ ಎಂದು ಅವನನ್ನು ಕೇಳುವವರು ಯಾರು?” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ರಾಜನು, “ಚೆರೂಯಳ ಗಂಡುಮಕ್ಕಳೇ, ಈಗ ನಾನೇನು ಮಾಡಲಿ? ಶಿಮ್ಮಿಯು ನನ್ನನ್ನು ಶಪಿಸುತ್ತಿರುವುದು ನಿಜ. ಆದರೆ ನನ್ನನ್ನು ಶಪಿಸಲು ಯೆಹೋವನೇ ಅವನಿಗೆ ಹೇಳಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಅರಸನು, “ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ. ಏಕೆಂದರೆ, ‘ದಾವೀದನನ್ನು ದೂಷಿಸು,’ ಎಂದು ಯೆಹೋವ ದೇವರು ಅವನಿಗೆ ಹೇಳಿದ್ದಾರೆ. ಹಾಗಾದರೆ, ‘ಏಕೆ ಹೀಗೆ ಮಾಡುತ್ತೀ?’ ಎಂದು ಹೇಳುವವನ್ಯಾರು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 16:10
21 ತಿಳಿವುಗಳ ಹೋಲಿಕೆ  

ಅದಕ್ಕೆ ದಾವೀದನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈಹೊತ್ತು ನನ್ನನ್ನು ಅಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿವಸದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವದು ಸರಿಯೋ? ನಾನು ಇಸ್ರಾಯೇಲ್ಯರ ಅರಸನೆಂಬದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು ಎಂದು ನುಡಿದನು.


ಎಲೋ ಮನುಷ್ಯನೇ, ಹಾಗನ್ನಬೇಡ; ದೇವರಿಗೆ ಎದುರುಮಾತಾಡುವದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ - ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?


ಆಗ ಯೇಸು ಪೇತ್ರನಿಗೆ - ಕತ್ತಿಯನ್ನು ಒರೆಯಲ್ಲಿ ಹಾಕು; ತಂದೆ ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ ಎಂದು ಹೇಳಿದನು.


ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.


ಆತನು ತಿರುಗಿಕೊಂಡು ಪೇತ್ರನಿಗೆ - ಸೈತಾನನೇ, ನನ್ನ ಮುಂದೆ ನಿಲ್ಲಬೇಡ, ನಡೆ, ನನಗೆ ನೀನು ವಿಘ್ನವಾಗಿದ್ದೀ; ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ ಎಂದು ಹೇಳಿದನು.


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಯೆಹೋವನೇ ಕೆಡುಕರಿಗೆ ಮುಯ್ಯಿತೀರಿಸಲಿ ಎಂದು ಹೇಳಿದನು.


ಆದರೆ ದೇವರು ಮೇಲಾಗಬೇಕೆಂದು ಸಂಕಲ್ಪಿಸಿದನು. ಈಗ ಅನುಭವಕ್ಕೆ ಬಂದ ಪ್ರಕಾರವೇ ಅನೇಕ ಪ್ರಾಣಿಗಳಿಗೆ ಸಂರಕ್ಷಣೆಯುಂಟಾಗುವಂತೆ ಮಾಡಿದನು.


ರಾಜನ ಮಾತಿಗೆ ಅಧಿಕಾರವುಂಟು; ಏನು ಮಾಡುತ್ತೀ ಎಂದು ಅವನನ್ನು ಯಾರು ತಾನೇ ಕೇಳಬಹುದು?


ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? ನೀನು ಏನು ಮಾಡುತ್ತಿ ಎಂದು ಆತನನ್ನು ಕೇಳುವವರಾರು?


ಈ ದೇಶವನ್ನು ಹಾಳುಮಾಡುವದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಅನ್ನುತ್ತಾನೆ ಎಂದನು.


ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವದನ್ನು ಬಲ್ಲೆಯಲ್ಲಾ; ಅವನು ಇಬ್ಬರು ಇಸ್ರಾಯೇಲ್ ಸೇನಾಪತಿಗಳಾದ ನೇರನ ಮಗ ಅಬ್ನೇರನನ್ನೂ ಯೆತೆರನ ಮಗ ಅಮಾಸನನ್ನೂ ಕೊಂದುಹಾಕಿದನು. ಯುದ್ಧಕಾಲದಲ್ಲಿಯೋ ಎಂಬಂತೆ ಸಮಾಧಾನಕಾಲದಲ್ಲಿಯೂ ರಕ್ತ ಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.


ಅವರು - ದೇವರ ಮಗನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವದಕ್ಕಿಂತ ಮುಂಚೆ ನಮ್ಮನ್ನು ಕಾಡುವದಕ್ಕೆ ಇಲ್ಲಿಗೆ ಬಂದಿಯಾ ಎಂದು ಕೂಗಿದರು.


ಆಗ ಆ ಸ್ತ್ರೀಯು ಎಲೀಯನಿಗೆ - ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು [ದೇವರ] ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವದಕ್ಕೆ ಬಂದಿಯೋ ಎನ್ನಲು ಅವನು ಆಕೆಗೆ -


ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.


ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.


ಅನಂತರ ಅರಸನು ಶಿಮ್ಮಿಗೆ - ನಿನಗೆ ಮರಣ ಶಿಕ್ಷೆಯಾಗುವದಿಲ್ಲ ಎಂದು ಪ್ರಮಾಣಮಾಡಿ ಹೇಳಿದನು.


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು