Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 17:3 - ಕನ್ನಡ ಸತ್ಯವೇದವು J.V. (BSI)

3 ಅರಸನೊಬ್ಬನನ್ನೇ ಕೊಂದು ಎಲ್ಲಾ ಜನರನ್ನು ತಿರಿಗಿ ನಿನ್ನ ಬಳಿಗೆ ಬರಮಾಡುವೆನು. ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರೂ ಹಿಂದಿರುಗಿ ಬಂದ ಮೇಲೆ ದೇಶದಲ್ಲೆಲ್ಲಾ ಸಮಾಧಾನವುಂಟಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಅರಸನೊಬ್ಬನನ್ನೇ ಕೊಂದು, ನಿನ್ನ ಅಪೇಕ್ಷೆಯಂತೆ ಎಲ್ಲಾ ಜನರನ್ನು ನಿನ್ನ ಬಳಿಗೆ ತಿರುಗಿ ಬರಮಾಡುವೆನು. ನಿನ್ನ ದೇಶದಲ್ಲೆಲ್ಲಾ ಸಮಾಧಾನವುಂಟಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅರಸನೊಬ್ಬನನ್ನೇ ಕೊಂದು ಎಲ್ಲಾ ಜನರನ್ನು ತಿರುಗಿ ನಿಮ್ಮ ಬಳಿಗೆ ಬರಮಾಡುವೆನು. ನಿಮ್ಮ ಅಪೇಕ್ಷೆಯಂತೆ ಎಲ್ಲಾ ಜನರೂ ಹಿಂದಿರುಗಿ ಬಂದ ಮೇಲೆ ನಾಡಿನಲ್ಲಿ ಎಲ್ಲಾ ಸಮಾಧಾನವುಂಟಾಗುವುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅನಂತರ ನಾನು ಜನರೆಲ್ಲರನ್ನೂ ಹಿಂದಕ್ಕೆ ನಿನ್ನ ಬಳಿಗೆ ಕರೆತರುತ್ತೇನೆ. ದಾವೀದನು ಸತ್ತರೆ, ಜನರೆಲ್ಲರೂ ಸಮಾಧಾನದಿಂದ ಹಿಂದಕ್ಕೆ ಬರುತ್ತಾರೆ” ಎಂದು ಅಬ್ಷಾಲೋಮನಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ನಾನು ಅರಸನನ್ನು ಮಾತ್ರ ಹೊಡೆದು, ಜನರೆಲ್ಲರನ್ನು ತಿರುಗಿ ನಿನ್ನ ಬಳಿಗೆ ತೆಗೆದುಕೊಂಡು ಬರುವೆನು. ನೀನು ಹುಡುಕುವವನು ಸಿಕ್ಕಿದರೆ, ಜನರೆಲ್ಲರು ಹಿಂದಿರುಗಿದ ಹಾಗೆ ಆಗುವುದು. ಜನರೆಲ್ಲರು ಸಮಾಧಾನವಾಗಿರುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 17:3
6 ತಿಳಿವುಗಳ ಹೋಲಿಕೆ  

ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ನುಡಿಯುತ್ತಾನೆ.


ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಅಬ್ನೇರನು ದಾವೀದನಿಗೆ - ನಾನು ಹೊರಟುಹೋಗಿ ಇಸ್ರಾಯೇಲ್ಯರನ್ನೆಲ್ಲಾ ಕೂಡಿಸಿ ನನ್ನ ಒಡೆಯನಾದ ಅರಸನ ಬಳಿಗೆ ಕರಕೊಂಡುಬರುವೆನು; ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು; ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು ಎಂದು ಹೇಳಲು ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟನು.


ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲ್ಯರ ಎಲ್ಲಾ ಹಿರಿಯರಿಗೂ ಸರಿಯಾಗಿ ಕಂಡಿತು.


ಮೇಲಾಗದಿದ್ದರೂ ಮೇಲು ಮೇಲು ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು