Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:28 - ಕನ್ನಡ ಸತ್ಯವೇದವು J.V. (BSI)

28 ಅಹೀಮಾಚನು ಹತ್ತಿರ ಬಂದು ಅರಸನಿಗೆ ಶುಭವಾಗಲಿ ಎಂದು ಹೇಳಿ ಸಾಷ್ಟಾಂಗನಮಸ್ಕಾರಮಾಡಿ - ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ!” ಎಂದು ಹೇಳಿ ಸಾಷ್ಟಾಂಗ ನಮಸ್ಕಾರ ಮಾಡಿದನು. “ಅರಸನಿಗೆ ವಿರುದ್ಧ ಬಂಡೆದ್ದವರನ್ನು ಅಧೀನಪಡಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಹೀಮಾಚನು ರಾಜನ ಬಳಿಗೆ ಬಂದು, “ಎಲ್ಲವೂ ಶುಭಕರವಾಗಿದೆ” ಎಂದು ಹೇಳಿ ರಾಜನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಅಹೀಮಾಚನು, “ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ! ರಾಜನಾದ ಒಡೆಯನೇ, ನಿನ್ನ ವಿರುದ್ಧವಾಗಿದ್ದ ಜನರನ್ನು ಯೆಹೋವನು ಸೋಲಿಸಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆಗ ಅಹೀಮಾಚನು ಕೂಗಿ ಅರಸನಿಗೆ, “ಎಲ್ಲವೂ ಕ್ಷೇಮ,” ಎಂದು ಹೇಳಿ ಅರಸನ ಮುಂದೆ ಮೋರೆ ಕೆಳಗಾಗಿ, ನೆಲಕ್ಕೆ ಅಡ್ಡಬಿದ್ದು, “ಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಮನುಷ್ಯರನ್ನು ಒಪ್ಪಿಸಿಕೊಟ್ಟ ನಿಮ್ಮ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:28
16 ತಿಳಿವುಗಳ ಹೋಲಿಕೆ  

ತೆಕೋವದ ಸ್ತ್ರೀಯು ಅರಸನ ಹತ್ತಿರ ಹೋಗಿ ಅವನ ಮುಂದೆ ನೆಲಕ್ಕೆ ಬಿದ್ದು - ಅರಸೇ, ರಕ್ಷಿಸು ಎಂದು ಕೂಗಿದಳು.


ಪರಾತ್ಪರನಾದ ದೇವರು ನಿನ್ನ ಶತೃಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಅವನಿಗೆ ಕೊಟ್ಟನು.


ಯೆಹೋವನಿಗೆ ಕೊಂಡಾಟವಾಗಲಿ; ಆತನು ನಮ್ಮನ್ನು ಅವರ ಹಲ್ಲುಗಳಿಗೆ ಕೊಳ್ಳೆಕೊಡಲಿಲ್ಲ.


ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿಸತ್ಯತೆಗಳ ನಿವಿುತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.


ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; ನಿರಾತಂಕಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.


ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.


ಶುದ್ಧನಿಗೆ ಪರಿಶುದ್ಧನೂ ಮೂರ್ಖನಿಗೆ ವಕ್ರನೂ ಆಗಿರುವಿ.


ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.


ಅಬೀಷೈಯು ದಾವೀದನಿಗೆ - ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ; ಅಪ್ಪಣೆಯಾಗಲಿ, ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು; ಎರಡನೆಯ ಸಾರಿ ಹೊಡೆಯುವದು ಅವಶ್ಯವಿಲ್ಲ ಎಂದು ಹೇಳಿದನು.


ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ; ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬದು ಈ ಹೊತ್ತು ಪ್ರಕಟವಾಯಿತು.


ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಪ್ರೀತಿಯನ್ನೂ ಸತ್ಯತೆಯನ್ನೂ ನನ್ನ ದಣಿಯಿಂದ ತೆಗೆಯಲಿಲ್ಲ; ನನ್ನನ್ನು ನನ್ನ ದಣಿಯ ಬಂಧುಗಳ ಮನೆಗೆ ನೀಟಾದ ದಾರಿಯಿಂದಲೇ ಕರಕೊಂಡು ಬಂದಿದ್ದಾನೆ ಅಂದನು.


ಐಗುಪ್ತ್ಯರ ಕೈಯಿಂದಲೂ ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆಮಾಡಿದ ಯೆಹೋವನಿಗೆ ಸ್ತೋತ್ರವಾಗಲಿ.


ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು; ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದುಹಾಕಿ ಫಿಲಿಷ್ಟಿಯಸೈನ್ಯದ ಶವಗಳನ್ನು ಮೃಗಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲ್ಯರೊಳಗೆ ದೇವರಿರುತ್ತಾನೆಂಬದು ಭೂಲೋಕದವರಿಗೆಲ್ಲಾ ತಿಳಿದು ಬರುವದು;


ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದಿಳಿದು ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು