Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 18:8 - ಕನ್ನಡ ಸತ್ಯವೇದವು J.V. (BSI)

8 ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿವಸ ಕತ್ತಿಗಿಂತ ಕಾಡೇ ಹೆಚ್ಚಿನ ಸಂಹಾರಕ್ಕೆ ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಯುದ್ಧವು ಸುತ್ತಣ ಪ್ರದೇಶಗಳಿಗೆ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಸತ್ತವರಿಗಿಂತ, ಮರುಳುಗಾಡಿನಲ್ಲಿ ಸತ್ತವರ ಸಂಖ್ಯೆಯೇ ಹೆಚ್ಚಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯುದ್ಧವು ದೇಶವನ್ನೆಲ್ಲ ವ್ಯಾಪಿಸಿತು. ಆದರೆ ಅಂದು ಕತ್ತಿಯಿಂದ ಸತ್ತ ಜನರಿಗಿಂತ ಹೆಚ್ಚು ಜನರು ಕಾಡಿನಲ್ಲಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು. ಇಪ್ಪತ್ತು ಸಾವಿರ ಸೈನಿಕರು ಸತ್ತರು. ಅಲ್ಲಿನ ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಸೈನಿಕರಲ್ಲಿ ಖಡ್ಗದಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 18:8
10 ತಿಳಿವುಗಳ ಹೋಲಿಕೆ  

ಆದರೆ ನೀನು ಉಸುರುಗಾಳಿಯಿಂದ ಊದಲು ಸಮುದ್ರವು ಅವರನ್ನು ಮುಚ್ಚಿತು, ಅವರು ಮಹಾಸಾಗರದೊಳಗೆ ಸೀಸದ ಗುಂಡಿನಂತೆ ಮುಳುಗಿಹೋದರು.


ದೇವರೇ, ನ್ಯಾಯವನ್ನು ನಿರ್ಣಯಿಸು; ನನಗೋಸ್ಕರ ವ್ಯಾಜ್ಯವನ್ನು ನಡಿಸಿ ನಿರ್ದಯವಾದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯ ಮೇಲೆ ಬಡಿದು ಅವರ ಹಲ್ಲುಗಳನ್ನು ಉದುರಿಸಿ ಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.


ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು; ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದದರಿಂದ ಅವರೂ ಸತ್ತರು. ಬೆನ್ಹದದನೂ ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಅಡಗಿಕೊಂಡನು.


ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್‍ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಯೆಹೋವನು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿ ಅನೇಕರನ್ನು ಸಾಯಿಸಿದನು. ಇಸ್ರಾಯೇಲ್ಯರ ಕತ್ತಿಯಿಂದ ಸಂಹೃತರಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿ.


ಇಸ್ರಾಯೇಲ್ಯರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿವಸ ಇಪ್ಪತ್ತುಸಾವಿರ ಜನರು ಹತರಾದರು.


ಅಬ್ಷಾಲೋಮನು ದಾವೀದನ ಸೇವಕರಿಗೆ ಸಿಕ್ಕಿದನು; ಹೇಗಂದರೆ - ಅವನು ಹತ್ತಿದ ಹೇಸರಕತ್ತೆಯು ಒಂದು ದೊಡ್ಡ ಏಲಾಮರದ ಕೆಳಗೆ ಹಾದುಹೋಗುವಾಗ ಅವನ ತಲೆಯು ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಹೇಸರಕತ್ತೆಯು ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂವಿುಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.


ಮಗನೇ, ಯೆಹೋವನಿಗೂ ರಾಜನಿಗೂ ಭಯಪಡು; ತಿರುಗಿಬೀಳುವವರ ಗೊಡವೆಗೆ ಹೋಗಬೇಡ.


ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು