Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:18 - ಕನ್ನಡ ಸತ್ಯವೇದವು J.V. (BSI)

18 ಅರಸನ ಮನೆಯವರನ್ನು ದಾಟಿಸುವದಕ್ಕೋಸ್ಕರವೂ ಅವರಿಗೆ ಬೇಕಾದ ಸಹಾಯ ಮಾಡುವದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ ಬರುತ್ತಾ ಇದ್ದನು. ಅರಸನು ಯೊರ್ದನ್ ಹೊಳೆಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿವ್ಮಿುಯು ಸಾಷ್ಟಾಂಗನಮಸ್ಕಾರ ಮಾಡಿ ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅರಸನ ಮನೆಯವರನ್ನು ದಾಟಿಸುವುದಕ್ಕೋಸ್ಕರವೂ, ಅವರಿಗೆ ಬೇಕಾದ ಸಹಾಯ ಮಾಡುವುದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ, ಬರುತ್ತಾ ಇದ್ದನು. ಅರಸನು ಯೊರ್ದನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿ ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅರಸನ ಮುಂದೆಯೇ ಪೂರ್ಣಾಸಕ್ತಿಯಿಂದ ಜೋರ್ಡನ್ ನದಿಯಲ್ಲಿಳಿದು ಅರಸನ ಮನೆಯವರನ್ನು ದಾಟಿಸುವುದಕ್ಕೂ ಅವರಿಗೆ ಬೇಕಾದ ಸಹಾಯಮಾಡುವುದಕ್ಕೂ ದಡದಿಂದ ದಡಕ್ಕೆ ಹೋಗುತ್ತಾ ಬರುತ್ತಾ ಇದ್ದನು. ಅರಸನು ಜೋರ್ಡನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ರಾಜನ ಕುಟುಂಬವನ್ನು ಯೆಹೂದಕ್ಕೆ ಕರೆತರಲು ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿ ಹೋದರು. ರಾಜನು ಅಪೇಕ್ಷೆಪಟ್ಟಿದ್ದನ್ನು ಜನರು ಮಾಡಿದರು. ರಾಜನು ನದಿಯನ್ನು ದಾಟುತ್ತಿರುವಾಗ, ಗೇರನ ಮಗನಾದ ಶಿಮ್ಮಿಯು ಅವನನ್ನು ಸಂಧಿಸಲು ಬಂದನು. ರಾಜನ ಎದುರಿನಲ್ಲಿ ಶಿಮ್ಮಿಯು ನೆಲಕ್ಕೆ ಬಾಗಿ ನಮಸ್ಕರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅರಸನ ಮನೆಯವರನ್ನು ಈಚೆ ದಡಕ್ಕೆ ತರುವುದಕ್ಕೂ, ಅವನ ದೃಷ್ಟಿಗೆ ಒಳ್ಳೆಯದಾಗಿ ತೋರಿಸಿದ್ದನ್ನು ಮಾಡುವುದಕ್ಕೂ ಯೊರ್ದನನ್ನು ದಾಟಿ ಬಂದರು. ಆಗ ಗೇರನ ಮಗ ಶಿಮ್ಮಿಯು ಯೊರ್ದನನ್ನು ದಾಟುತ್ತಲೇ, ಅರಸನ ಮುಂದೆ ಬಿದ್ದು ಅರಸನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:18
10 ತಿಳಿವುಗಳ ಹೋಲಿಕೆ  

ನಾನು ನಿನಗೆ ಅನುಗ್ರಹಿಸುವದೇನಂದರೆ ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಸೈತಾನನ ಸಮಾಜದವರಲ್ಲಿ ಕೆಲವರು ಬಂದು ನಿನ್ನ ಪಾದಗಳ ಮುಂದೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳುಕೊಳ್ಳುವಂತೆಯೂ ಮಾಡುವೆನು.


ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.


ನೀವು ದೇವರಿಗೆ - ನಿನ್ನ ಕೃತ್ಯಗಳು ಎಷ್ಟೋ ಭಯಂಕರವಾಗಿವೆ; ನಿನ್ನ ಪರಾಕ್ರಮದ ಮಹತ್ತಿನ ದೆಸೆಯಿಂದ ನಿನ್ನ ಶತ್ರುಗಳು ನಿನ್ನ ಮುಂದೆ ಮುದುರಿಕೊಳ್ಳುವರು;


ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ; ಅರಸನು ತನ್ನ ಸೇವಕನ ಮೇಲೆಯೂ ಅವನ ಮನೆಯವರ ಮೇಲೆಯೂ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ ಎಂದು ಉತ್ತರಕೊಟ್ಟನು.


ಅವನ ಜೊತೆಯಲ್ಲಿ ಸಾವಿರ ಮಂದಿ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ ಇಪ್ಪತ್ತುಮಂದಿ ಸೇವಕರನ್ನೂ ಕರಕೊಂಡು ಅರಸನ ಮುಂದೆಯೇ ಪೂರ್ಣಾಸಕ್ತಿಯಿಂದ ಯೊರ್ದನ್ ಹೊಳೆಯಲ್ಲಿಳಿದು


ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ; ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಅವನು ನೆನಸದಿರಲಿ, ಲಕ್ಷಿಸದಿರಲಿ.


ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮಿಯು ನಿನ್ನ ಬಳಿಯಲ್ಲಿರುತ್ತಾನಲ್ಲಾ; ನಾನು ಮಹನಯಿವಿುಗೆ ಹೋದಾಗ ಅವನು ನನ್ನನ್ನು ಬಹುಕ್ರೂರವಾಗಿ ಶಪಿಸಿದನು; ಅವನು ನನ್ನನ್ನು ಎದುರುಗೊಳ್ಳುವದಕ್ಕೆ ಯೊರ್ದನಿಗೆ ಬಂದಾಗ ನಾನು ಅವನಿಗೆ - ನಿನ್ನನ್ನು ಕೊಲ್ಲುವದಿಲ್ಲ ಎಂಬದಾಗಿ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡಿದೆನು.


ಸೌಲನ ಮನೆಯಲ್ಲಿ ದಾಸನಾಗಿದ್ದ ಚೀಬನೆಂಬ ಒಬ್ಬ ಮನುಷ್ಯನನ್ನು ಕರಕೊಂಡುಬಂದರು. ಅರಸನು ಅವನನ್ನು - ನೀನು ಚೀಬನೋ ಎಂದು ಕೇಳಲು ಅವನು - ನಿನ್ನ ಸೇವಕನಾದ ನಾನು ಚೀಬನೇ ಎಂದು ಉತ್ತರಕೊಟ್ಟನು.


ನೀನೂ ನಿನ್ನ ಮಕ್ಕಳೂ ದಾಸರೂ ನಿನ್ನ ಯಜಮಾನನ ಮೊಮ್ಮಗನಿಗೋಸ್ಕರ ಆ ಭೂವಿುಯನ್ನು ವ್ಯವಸಾಯ ಮಾಡಿ ಅದರ ಬೆಳೆಯನ್ನು ಇವನ ಮನೆಯವರ ಅಶನಾರ್ಥವಾಗಿ ತಂದುಕೊಡಬೇಕು. ಇವನಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವದು ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡುಮಕ್ಕಳೂ ಇಪ್ಪತ್ತು ಮಂದಿ ಸೇವಕರೂ ಇದ್ದರು.


ಅದಕ್ಕೆ ಮೆಫೀಬೋಶೆತನು - ಚೀಬನು ಎಲ್ಲವನ್ನು ತಾನೇ ತೆಗೆದುಕೊಂಡರೂ ತೆಗೆದುಕೊಳ್ಳಲಿ, ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತವಾಗಿ ಬಂದದ್ದೇ ಸಾಕು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು