Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:19 - ಕನ್ನಡ ಸತ್ಯವೇದವು J.V. (BSI)

19 ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ; ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಅವನು ನೆನಸದಿರಲಿ, ಲಕ್ಷಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 :ಒಡೆಯರು ನನ್ನನ್ನು ಅಪರಾಧಿಯೆಂದೆಣಿಸದಿರಲಿ; ನನ್ನ ಒಡೆಯರು ಜೆರುಸಲೇಮನ್ನು ಬಿಟ್ಟುಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಅವರು ನೆನಸದಿರಲಿ, ಲಕ್ಷಿಸದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಶಿಮ್ಮಿಯು ರಾಜನಿಗೆ, “ನನ್ನ ಒಡಯನೇ, ನಾನು ಮಾಡಿದ ಕೆಟ್ಟಕಾರ್ಯಗಳನ್ನು ಲಕ್ಷ್ಯಕ್ಕೆ ತಂದುಕೊಳ್ಳದಿರು. ನನ್ನ ರಾಜನಾದ ಒಡೆಯನೇ, ನೀನು ಜೆರುಸಲೇಮನ್ನು ಬಿಟ್ಟುಹೋದಾಗ ನಾನು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿಗೆ ತಂದುಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ನನ್ನ ಒಡೆಯನೇ, ನನ್ನ ಅಕ್ರಮವನ್ನು ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖತನದಿಂದ ಮಾಡಿದ ಕಾರ್ಯವನ್ನು ನೆನಸದೆ, ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:19
17 ತಿಳಿವುಗಳ ಹೋಲಿಕೆ  

ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ; ಅರಸನು ತನ್ನ ಸೇವಕನ ಮೇಲೆಯೂ ಅವನ ಮನೆಯವರ ಮೇಲೆಯೂ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ ಎಂದು ಉತ್ತರಕೊಟ್ಟನು.


ಆ ಸಮಾಧಾನವಾಕ್ಯವೇನಂದರೆ ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿಕೊಳ್ಳುತ್ತಿದ್ದನೆಂಬದೇ. ಅದನ್ನು ಸಾರುವ ಸೇವೆಗೆ ನಮ್ಮನ್ನು ನೇವಿುಸಿದ್ದಾನೆ.


ತಪ್ಪಿಲ್ಲದವನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ಪಾಪಮಾಡಿದೆನು ಅಂದನು. ಅದಕ್ಕವರು - ಅದು ನಮಗೇನು? ನೀನೇ ನೋಡಿಕೋ ಅಂದರು.


ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ, ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ; ತಾಳ್ಮೆಯು ದೊಡ್ಡ ದೋಷಗಳನ್ನು ಅಡಗಿಸುತ್ತದಲ್ಲವೆ.


ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹುವಾಗಿ ಕುಗ್ಗಿಹೋಗಿದ್ದೇವೆ.


ಯೆಹೋವನು ಯಾವನ ಲೆಕ್ಕಕ್ಕೆ ಅಪರಾಧವನ್ನು ಎಣಿಸುವದಿಲ್ಲವೋ ಯಾವನ ಹೃದಯದಲ್ಲಿ ಕಪಟವಿರುವದಿಲ್ಲವೋ ಅವನು ಧನ್ಯನು.


ಆದದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸನು ಲಕ್ಷ್ಯಕೊಡದಿರಲಿ; ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ ಎಂದು ಹೇಳಿ ಸಂತೈಸಿದನು.


ಆಕೆಯ ಸಹೋದರನಾದ ಅಬ್ಷಾಲೋಮನು ಆಕೆಯನ್ನು ಕಂಡು - ನಿನ್ನ ಅಣ್ಣನಾದ ಅಮ್ನೋನನು ನಿನ್ನನ್ನು ಕೂಡಿದನೇನು? ನನ್ನ ತಂಗಿಯೇ, ಈಗ ಸುಮ್ಮನಿರು; ಅವನು ನಿನ್ನ ಅಣ್ಣನಲ್ಲವೋ? ಈ ಸಂಗತಿಯನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ ಎಂದು ಹೇಳಿದನು. ತಾಮಾರಳು ಒಂಟಿಗಳಾಗಿ ತನ್ನ ಅಣ್ಣನಾದ ಅಬ್ಷಾಲೋಮನ ಮನೆಯಲ್ಲೇ ವಾಸಿಸಿದಳು.


ಆಗ ಸೌಲನು ಅವನಿಗೆ - ನಾನು ಪಾಪಮಾಡಿದೆನು; ದಾವೀದನೇ, ನನ್ನ ಮಗನೇ, ಹಿಂದಿರುಗಿ ಬಾ; ಈಹೊತ್ತು ನನ್ನ ಜೀವವು ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದ್ದೆಂದು ಎಣಿಸಲ್ಪಟ್ಟಿತು. ಆದದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವದಿಲ್ಲ.


ಸ್ವಾವಿುಯು ಮೂರ್ಖನಾದ ಆ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ್; ಅದಕ್ಕೆ ತಕ್ಕಂತೆ ಅವನು ಮೂರ್ಖನೇ ಆಗಿರುತ್ತಾನೆ. ನಿನ್ನ ದಾಸಿಯಾದ ನಾನು ಸ್ವಾವಿುಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.


ಆಗ ಆರೋನನು ಮೋಶೆಗೆ - ಅಯ್ಯಾ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದರೂ ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ;


ಅರಸನ ಮನೆಯವರನ್ನು ದಾಟಿಸುವದಕ್ಕೋಸ್ಕರವೂ ಅವರಿಗೆ ಬೇಕಾದ ಸಹಾಯ ಮಾಡುವದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ ಬರುತ್ತಾ ಇದ್ದನು. ಅರಸನು ಯೊರ್ದನ್ ಹೊಳೆಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿವ್ಮಿುಯು ಸಾಷ್ಟಾಂಗನಮಸ್ಕಾರ ಮಾಡಿ ಅವನಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು