Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:20 - ಕನ್ನಡ ಸತ್ಯವೇದವು J.V. (BSI)

20 ಒಡೆಯನೇ, ನಿನ್ನ ಸೇವಕನಾದ ನಾನು ಪಾಪ ಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದದರಿಂದಲೇ ನಾನು ಈಹೊತ್ತು ಅರಸನನ್ನು ಎದುರುಗೊಳ್ಳುವದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಾಗಿ ಬಂದಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಈ ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಒಡೆಯರೇ, ತಮ್ಮ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದುದರಿಂದಲೇ ನಾನು ಈ ದಿನ ಅರಸನನ್ನು ಸ್ವಾಗತಿಸುವುದಕ್ಕೆ ಎಲ್ಲಾ ಜೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಪಾಪಮಾಡಿದ್ದೇನೆಂದು ಒಪ್ಪಿಕೊಳ್ಳುತ್ತೇನೆ. ಆದ ಕಾರಣವೇ, ನನ್ನ ರಾಜನಾದ ಒಡೆಯನೇ, ನಿನ್ನನ್ನು ಭೇಟಿಮಾಡಲು ಬಂದ ಯೋಸೇಫ್ಯರ ಕುಲದಲ್ಲಿ ನಾನೇ ಮೊದಲಿಗನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಏಕೆಂದರೆ ಪಾಪ ಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದ್ದರಿಂದ ಇಗೋ, ನಾನು ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫ್ಯರಲ್ಲಿ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:20
12 ತಿಳಿವುಗಳ ಹೋಲಿಕೆ  

ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ ನನ್ನ ಪ್ರಸನ್ನತೆಯನ್ನು ಬೇಡಿಕೊಳ್ಳುವ ತನಕ ನಾನು ನನ್ನ ವಾಸಸ್ಥಾನಕ್ಕೆ ಹಿಂದಿರುಗಿ ಹೋಗಿರುವೆನು; ಅವರು ಇಕ್ಕಟ್ಟಿಗೆ ಸಿಕ್ಕಿದ ಕೂಡಲೇ ನನ್ನನ್ನು ಆಶ್ರಯಿಸುವರು.


ಎಫ್ರಾಯೀಮನ್ನು ಬಲ್ಲೆ, ಇಸ್ರಾಯೇಲು ನನಗೆ ಮರೆಯಲ್ಲ; ಎಫ್ರಾಯೀಮೇ, ನೀನೀಗ ಸೂಳೆತನಮಾಡಿದ್ದೀ, ಇಸ್ರಾಯೇಲು ಹೊಲೆಯಾಗಿದೆ.


ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವದು!


ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್‍ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು;


ಯಾರೊಬ್ಬಾಮನು ಹಿಂದಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲ್ಯರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರಿಸಿ ತಮ್ಮ ಅರಸನನ್ನಾಗಿ ನೇವಿುಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.


ಇಸ್ರಾಯೇಲ್ಯರೆಲ್ಲರೂ ತಮ್ಮತಮ್ಮ ನಿವಾಸಗಳಿಗೆ ಓಡಿಹೋಗಿದ್ದರು. ಇಸ್ರಾಯೆಲ್‍ಕುಲಗಳಲ್ಲೆಲ್ಲಾ ಜನರು ತಮ್ಮ ತಮ್ಮೊಳಗೆ ಜಗಳವಾಡಿ - ಅರಸನಾದ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ವೈರಿಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡಿದನು. ಆದರೆ ಅವನು ಅಬ್ಷಾಲೋಮನ ದೆಸೆಯಿಂದ ದೇಶವನ್ನು ಬಿಟ್ಟು ಓಡಿಹೋಗಬೇಕಾಯಿತು.


ಅರಸನಾದ ದಾವೀದನು ಬಹುರೀವಿುಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮೀ ಎಂಬವನು ದಾವೀದನನ್ನು ಶಪಿಸುತ್ತಾ ಆ ಊರಿನಿಂದ ಹೊರಗೆ ಬಂದನು.


ಆ ಕಾಲದಲ್ಲಿ ಅವನು ಅವರನ್ನು ಆಶೀರ್ವದಿಸಿ - ಇಸ್ರಾಯೇಲ್ಯರು ಯಾರನ್ನಾದರೂ ಆಶೀರ್ವದಿಸುವಾಗ - ಎಫ್ರಾಯೀಮನಿಗೂ ಮನಸ್ಸೆಗೂ ಉಂಟಾದ ಸಂತತಿಯಂತೆ ದೇವರು ನಿನಗೂ ಸಂತಾನವನ್ನು ಅನುಗ್ರಹಿಸಲಿ ಎಂದು ನಿಮ್ಮನ್ನು ದೃಷ್ಟಾಂತಮಾಡಿ ಹೇಳುವರು ಅಂದನು. ಹೀಗೆ ಹೇಳಿದ್ದರಿಂದ ಎಫ್ರಾಯೀಮನನ್ನು ಮನಸ್ಸೆಗೆ ಮುಂದಾಗಿ ಇಟ್ಟನು.


ಮನಸ್ಸೆಯು ಚೊಚ್ಚಲುಮಗನಾಗಿದ್ದರೂ ಇಸ್ರಾಯೇಲನು ತನ್ನ ಕೈಗಳನ್ನು ಅಡ್ಡವಾಗಿ ಚಾಚಿ ಕಿರಿಯವನಾದ ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನೂ ಮನಸ್ಸೆಯ ತಲೆಯ ಮೇಲೆ ಎಡಗೈಯನ್ನೂ ಇಟ್ಟು ಯೋಸೇಫನನ್ನು ಆಶೀರ್ವದಿಸಿ -


ಚೆರೂಯಳ ಮಗನಾದ ಅಬೀಷೈಯು - ಯೆಹೋವನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು