Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 19:28 - ಕನ್ನಡ ಸತ್ಯವೇದವು J.V. (BSI)

28 ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವದಕ್ಕೆ ನಾನೇನು ಯೋಗ್ಯನೋ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನನ್ನ ತಂದೆಯ ಮನೆಯವರೆಲ್ಲರೂ ಅರಸರಾದ ನನ್ನ ಒಡೆಯರ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ತಮ್ಮ ಸೇವಕನಾದ ನನ್ನನ್ನು ಭೋಜನಕ್ಕೆ ತಮ್ಮ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡಿರಿ. ಅರಸರಿಗೆ ಹೆಚ್ಚಾಗಿ ಮೊರೆ ಇಡುವುದಕ್ಕೆ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀನು ನನ್ನ ತಾತನ ಕುಟುಂಬವನ್ನೆಲ್ಲ ಕೊಲ್ಲಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ. ನೀನು ನಿನ್ನ ಪಂಕ್ತಿಯಲ್ಲಿ ಊಟಮಾಡುವ ಜನರ ಜೊತೆಯಲ್ಲಿ ನನ್ನನ್ನೂ ಸೇರಿಸಿದೆ. ಆದ್ದರಿಂದ ರಾಜನ ಬಗ್ಗೆ ದೂರು ಹೇಳಲು ನನಗೆ ಯಾವ ಹಕ್ಕಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಏಕೆಂದರೆ ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರೂ ಸತ್ತವರಾಗಿ ಇದ್ದರೂ, ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವುದಕ್ಕೆ ಯೋಗ್ಯನೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 19:28
12 ತಿಳಿವುಗಳ ಹೋಲಿಕೆ  

ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದದರಿಂದ ಅವನು ಯೆರೂಸಲೇವಿುನಲ್ಲೇ ವಾಸಿಸಿದನು. ಅವನ ಎರಡು ಕಾಲುಗಳೂ ಕುಂಟಾಗಿದ್ದವು.


ನೀನೂ ನಿನ್ನ ಮಕ್ಕಳೂ ದಾಸರೂ ನಿನ್ನ ಯಜಮಾನನ ಮೊಮ್ಮಗನಿಗೋಸ್ಕರ ಆ ಭೂವಿುಯನ್ನು ವ್ಯವಸಾಯ ಮಾಡಿ ಅದರ ಬೆಳೆಯನ್ನು ಇವನ ಮನೆಯವರ ಅಶನಾರ್ಥವಾಗಿ ತಂದುಕೊಡಬೇಕು. ಇವನಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವದು ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡುಮಕ್ಕಳೂ ಇಪ್ಪತ್ತು ಮಂದಿ ಸೇವಕರೂ ಇದ್ದರು.


ಏಳು ವರುಷಗಳಾದನಂತರ ಆಕೆಯು ಅಲ್ಲಿಂದ ಸ್ವದೇಶಕ್ಕೆ ಬಂದು ಪರಾಧೀನವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡುವದಕ್ಕೋಸ್ಕರ ಅರಸನ ಬಳಿಗೆ ಹೋದಳು.


ನೀನು ಹೀಗೆ ಮಾಡುವದು ಸರಿಯಲ್ಲ. ಯೆಹೋವನಾಣೆ, ಆತನ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೇ ಹೌದು. ಅರಸನ ತಲೆಯ ಬಳಿಯಲ್ಲಿದ್ದ ಬರ್ಜಿಯೂ ತಂಬಿಗೆಯೂ ಏನಾದವೋ ನೋಡು ಎಂದು ಕೂಗಿ ಹೇಳಿದನು.


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಪಾತ್ರನಾಗಿದ್ದೇನೆ. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಪಾಳೆಯಗಳಿಗೆ ಒಡೆಯನಾಗಿದ್ದೇನೆ.


ಆಗ ಅರಸನು ಅವನಿಗೆ - ಹೆಚ್ಚು ಮಾತು ಯಾಕೆ? ನೀನೂ ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬದೇ ನನ್ನ ತೀರ್ಪು ಎಂದು ಹೇಳಿದನು.


ನನ್ನ ಒಡೆಯನಾದ ಅರಸನ ಮಾತು ಸಮಾಧಾನಕ್ಕೆ ಕಾರಣವಾಗುವದೆಂದು ನೆನಸಿ ನಿನ್ನ ದಾಸಿಯಾದ ನಾನು ಬಂದೆನು. ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದರಲ್ಲಿ ನನ್ನ ಒಡೆಯನಾದ ಅರಸನು ದೇವದೂತನಂತಿರುತ್ತಾನೆ; ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರಲಿ ಅಂದಳು.


ಅಬ್ಷಾಲೋಮನ ವಿಷಯವನ್ನು ರೂಪಾಂತರಪಡಿಸುವದಕ್ಕೋಸ್ಕರ ನಿನ್ನ ಸೇವಕನಾದ ಯೋವಾಬನೇ ಇದನ್ನು ಮಾಡಿದನು. ನನ್ನ ಒಡೆಯನು ದೇವದೂತನಂಥ ಜ್ಞಾನಿಯು; ಅವನು ಭೂಲೋಕದಲ್ಲಿ ನಡೆಯುವದನ್ನೆಲ್ಲಾ ತಿಳುಕೊಳ್ಳುವನು ಎಂದು ಉತ್ತರಕೊಟ್ಟಳು.


ಆತನು - ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ತೋರಿಸಿದರೆ ತನಗೆ ಸರಿಕಂಡಂತೆ ಮಾಡಲಿ, ಆತನ ಚಿತ್ತ ಅಂದನು.


ಅರಸನು ತಿರಿಗಿ ಅವನನ್ನು - ನಿನ್ನ ಯಜಮಾನನ ಮಗನು ಎಲ್ಲಿದ್ದಾನೆಂದು ಕೇಳಲು ಅವನು - ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲ್ಯರು ಈಹೊತ್ತು ತನಗೆ ತಿರಿಗಿ ಕೊಡುವರೆಂದು ಹೇಳಿ ಅವನು ಯೆರೂಸಲೇವಿುನಲ್ಲೇ ಉಳುಕೊಂಡನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು