Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:13 - ಕನ್ನಡ ಸತ್ಯವೇದವು J.V. (BSI)

13 ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ ಇವರು ಕೆರೆಯ ಈಚೆಯಲ್ಲಿಯೂ ಅವರು ಆಚೆಯಲ್ಲಿಯೂ ಕೂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಚೆರೂಯಳ ಮಗನಾದ ಯೋವಾಬನೂ ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿ, ಒಂದು ಗುಂಪು ಕೆರೆಯ ಈಚೆಯಲ್ಲಿಯೂ ಇನ್ನೊಂದು ಗುಂಪು ಆಚೆಯಲ್ಲಿಯೂ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಚೆರೂಯಳ ಮಗ ಯೋವಾಬನು ಮತ್ತು ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಇವರು ಕೆರೆಯ ಈಚೆ, ಅವರು ಕೆರೆಯ ಆಚೆ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಚೆರೂಯಳ ಮಗನಾದ ಯೋವಾಬನು ಮತ್ತು ದಾವೀದನ ಸೈನಿಕರು ಸಹ ಗಿಬ್ಯೋನಿಗೆ ಹೋದರು. ಅವರು ಅಬ್ನೇರನನ್ನು ಮತ್ತು ಈಷ್ಬೋಶೆತನ ಸೇವಕರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಅಬ್ನೇರನ ಗುಂಪಿನವರು ಕೆರೆಯ ಒಂದು ಕಡೆ ಕುಳಿತರು. ಯೋವಾಬನ ಗುಂಪಿನವರು ಕೆರೆಯ ಮತ್ತೊಂದು ಕಡೆ ಕುಳಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಚೆರೂಯಳ ಮಗ ಯೋವಾಬನೂ, ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಕೊಂಡರು. ಅವರು ಕೊಳದ ಆಚೆಯಲ್ಲಿಯೂ, ಇವರು ಕೊಳದ ಈಚೆಯಲ್ಲಿಯೂ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:13
13 ತಿಳಿವುಗಳ ಹೋಲಿಕೆ  

ಚೆರೂಯ ಅಬೀಗೈಲರು ಅವರ ಸಹೋದರಿಯರು. ಅಬ್ಷೈ, ಯೋವಾಬ್, ಅಸಾಹೇಲ್ ಎಂಬ ಮೂವರು ಚೆರೂಯಳ ಮಕ್ಕಳು.


ಚೆರೂಯಳ ಮಗನಾದ ಯೋವಾಬನು ಅವನ ಸೇನಾಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.


ತಮ್ಮ ಸೈನಿಕರನ್ನೆಲ್ಲಾ ಕರಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಕಂಡರು.


ಆ ದಿವಸ ದಾವೀದನು - ಯೆಬೂಸಿಯರನ್ನು ಯಾವನು ಮೊದಲು ಸೋಲಿಸುವನೋ ಅವನು ಪ್ರಮುಖನೂ ದಳಪತಿಯೂ ಆಗುವನು ಎಂದು ಹೇಳಲು ಚೆರೂಯಳ ಮಗನಾದ ಯೋವಾಬನು ಮೊದಲು ಹತ್ತಿದ್ದರಿಂದ ಅವನೇ ಪ್ರಮುಖನಾದನು.


ಅವನು ಚೆರೂಯಳ ಮಗನಾದ ಯೋವಾಬನನ್ನೂ ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನಿಗೆ ಸಹಾಯಕರಾದರು.


ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾಪತಿ; ಯೆಹೋಯಾದಾವನ ಮಗನಾದ ಬೆನಾಯಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.


ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.


ಅವರು ಗಿಬ್ಯೋನಿನಲ್ಲಿದ್ದ ದೊಡ್ಡ ಕಲ್ಲನ್ನು ಸಮೀಪಿಸಿದಾಗ ಅಮಾಸನು ಅವರೆದುರಿಗೆ ಬಂದನು. ಯುದ್ಧ ವಸ್ತ್ರಗಳನ್ನು ಧರಿಸಿಕೊಂಡಿದ್ದ ಯೋವಾಬನು ಅವನನ್ನು ವಂದಿಸುವದಕ್ಕೆ ಹೋಗುತ್ತಿರುವಾಗ ಅವನ ಸೊಂಟಕ್ಕೆ ಕಟ್ಟಿದ್ದ ಕತ್ತಿಯು ಒರೆಯಿಂದ ಕೆಳಗೆ ಬಿದ್ದಿತು.


ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವದನ್ನು ಬಲ್ಲೆಯಲ್ಲಾ; ಅವನು ಇಬ್ಬರು ಇಸ್ರಾಯೇಲ್ ಸೇನಾಪತಿಗಳಾದ ನೇರನ ಮಗ ಅಬ್ನೇರನನ್ನೂ ಯೆತೆರನ ಮಗ ಅಮಾಸನನ್ನೂ ಕೊಂದುಹಾಕಿದನು. ಯುದ್ಧಕಾಲದಲ್ಲಿಯೋ ಎಂಬಂತೆ ಸಮಾಧಾನಕಾಲದಲ್ಲಿಯೂ ರಕ್ತ ಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನೂ ಕುರಿತು - ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ ಎಂದು ಕೇಳಿದ್ದಕ್ಕೆ ಅಬೀಷೈಯು - ನಾನು ಬರುತ್ತೇನೆ ಎಂದು ಉತ್ತರಕೊಟ್ಟನು.


ಮೂವತ್ತು ಮಂದಿ ರಣವೀರರ ಪಟ್ಟಿ - ಯೋವಾಬನ ತಮ್ಮನಾದ ಅಸಾಹೇಲನು, ಬೇತ್ಲೆಹೇವಿುನ ದೋದೋವಿನ ಮಗನಾದ ಎಲ್ಹಾನಾನ್,


ಯೋವಾಬನ ತಮ್ಮನಾದ ಅಸಾಹೇಲನೂ ಅವನು ಸತ್ತನಂತರ ಅವನ ಮಗನಾದ ಜೆಬದ್ಯನೂ ನಾಲ್ಕನೆಯ ವರ್ಗದ ನಾಯಕರು; ನಾಲ್ಕನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವರ ವರ್ಗದವರ ಸಂಖ್ಯೆಯು ಇಪ್ಪತ್ತನಾಲ್ಕು ಸಾವಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು