Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:4 - ಕನ್ನಡ ಸತ್ಯವೇದವು J.V. (BSI)

4 ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದಿನವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದಿನವರೇ ಎಂಬ ಸಂಗತಿ ದಾವೀದನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದದ ಜನರು ಬಂದು ದಾವೀದನನ್ನು ಯೆಹೂದದ ರಾಜನನ್ನಾಗಿ ಅಭಿಷೇಕಿಸಿದರು. ಬಳಿಕ ಅವರು ದಾವೀದನಿಗೆ, “ಸೌಲನ ಸಮಾಧಿ ಮಾಡಿದವರು ಯಾಬೇಷ್ ಗಿಲ್ಯಾದಿನವರೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೂದನ ಮನುಷ್ಯರು ಹೆಬ್ರೋನಿಗೆ ಬಂದು ಅಲ್ಲಿ ದಾವೀದನನ್ನು ಯೆಹೂದದವರ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿಸಿದರು. ಯಾಬೇಷ್ ಗಿಲ್ಯಾದಿನವರು ಸೌಲನನ್ನು ಸಮಾಧಿಮಾಡಿದರೆಂದು ದಾವೀದನಿಗೆ ತಿಳಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:4
16 ತಿಳಿವುಗಳ ಹೋಲಿಕೆ  

ಅವನು ಹೆಬ್ರೋನಿನಲ್ಲಿದ್ದುಕೊಂಡು ಯೆಹೂದಕುಲವೊಂದನ್ನೇ ಆಳಿದ್ದು ಏಳು ವರುಷವೂ ಆರು ತಿಂಗಳೂ; ಯೆರೂಸಲೇವಿುನಲ್ಲಿದ್ದುಕೊಂಡು ಯೆಹೂದ್ಯರನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಆಳಿದ್ದು ಮೂವತ್ತುಮೂರು ವರುಷ.


ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲ್ಯರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದರು.


ಆಗ ಅರಸನಾದ ದಾವೀದನು ತನ್ನ ಹತ್ತಿರ ಹೆಬ್ರೋನಿಗೆ ಬಂದಿದ್ದ ಇಸ್ರಾಯೇಲ್ಯರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ಸಮುವೇಲನಿಗೆ ಯೆಹೋವನಿಂದಾದ ಆಜ್ಞೆಗನುಸಾರವಾಗಿ ದಾವೀದನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದರು.


ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟು ಹೋದನು.


ಅದಕ್ಕೆ ಯೆಹೂದ್ಯರೆಲ್ಲರೂ - ಅರಸನು ನಮಗೆ ಸಮೀಪಬಂಧು; ನೀವು ಅದಕ್ಕಾಗಿ ಉರಿಗೊಳ್ಳುವದೇಕೆ? ನಾವೇನು ಅರಸನ ಖರ್ಚಿನಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಎಂದು ಉತ್ತರಕೊಟ್ಟರು.


ಇಸ್ರಾಯೇಲ್ಯರು ಈ ಪ್ರಕಾರ ಮಾತಾಡಿಕೊಂಡ ವರ್ತಮಾನವು ದಾವೀದನಿಗೆ ಮುಟ್ಟಲು ಅವನು ಯಾಜಕರಾದ ಚಾದೋಕ್ ಎಬ್ಯಾತಾರರಿಗೆ - ನೀವು ನನ್ನ ಹೆಸರಿನಲ್ಲಿ ಯೆಹೂದ ಕುಲದ ಹಿರಿಯರಿಗೆ - ಅರಸನಾದ ನನ್ನನ್ನು ತಿರಿಗಿ ಅರಮನೆಗೆ ಕರಕೊಂಡು ಹೋಗುವದರಲ್ಲಿ ನೀವು ಹಿಂದುಳಿದಿರುವದೇಕೆ?


ಇಸ್ರಾಯೇಲ್ಯರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ಮುಟ್ಟಿದಾಗ ಅವರು ಅವನನ್ನು ಹಿಡಿಯುವದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.


ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿದ್ದದ್ದು ಏಳು ವರುಷವೂ ಆರು ತಿಂಗಳೂ.


ಯೆಹೂದ್ಯರು ನನ್ನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡಿರುವದರಿಂದ ಸೌಲನು ಸತ್ತು ಹೋದರೂ ಶೂರರಾಗಿರ್ರಿ, ನಿಮ್ಮ ಕೈಗಳು ಜೋಲು ಬೀಳದಿರಲಿ ಎಂದು ಹೇಳಿಸಿದನು.


ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪು ಗುಂಪುಗಳಾಗಿ ಬಂದ ಯುದ್ಧಸನ್ನದ್ಧರ ಲೆಕ್ಕ -


ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ತಿಳಿಸಲ್ಪಟ್ಟಿತು.


ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವದಕ್ಕೋಸ್ಕರ ಯಾಬೇಷ್‍ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ಷೆಯಾನಿನ ಬೀದಿಗಳಲ್ಲಿ ತೂಗಹಾಕಿದ್ದರು. ಯಾಬೇಷ್‍ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.


ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು ಅವನಿಗೆ ರಾಜ್ಯಾಭಿಷೇಕಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು ಅರಸನು ಚಿರಂಜೀವಿಯಾಗಿರಲಿ ಎಂದು ಕೂಗಿದರು.


ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರ್ತಮಾನವು ಯಾಬೇಷ್ ಗಿಲ್ಯಾದಿನವರಿಗೆ ಮುಟ್ಟಿದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು