Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:5 - ಕನ್ನಡ ಸತ್ಯವೇದವು J.V. (BSI)

5 ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ - ನೀವು ಕರುಣೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಅಶೀರ್ವಾದವುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ದಾವೀದನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ನಿಷ್ಠೆಯಿಂದ ನಿಮ್ಮ ಒಡೆಯನಾದ ಸೌಲನ ಶವವನ್ನು ಸಮಾಧಿ ಮಾಡಿದ್ದಕ್ಕಾಗಿ ನಿಮಗೆ ಯೆಹೋವನ ಆಶೀರ್ವಾದವುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ರಾಜನಿಷ್ಠೆಯಿಂದ ನಿಮ್ಮ ಒಡೆಯ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ಸರ್ವೇಶ್ವರನ ಆಶೀರ್ವಾದ ನಿಮಗೆ ಲಭಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯಾಬೇಷ್ ಗಿಲ್ಯಾದಿನ ಜನರಿಗೆ ದಾವೀದನು ಸಂದೇಶಕರನ್ನು ಕಳುಹಿಸಿ, “ಸೌಲನ ದೇಹದ ಬೂದಿಯನ್ನು ಸಮಾಧಿಮಾಡುವುದರ ಮೂಲಕ ನೀವು ನಿಮ್ಮ ಒಡೆಯನಾದ ಸೌಲನಿಗೆ ಕರುಣೆ ತೋರಿದ್ದೀರಿ. ಅದಕ್ಕಾಗಿ ಯೆಹೋವನು ನಿಮ್ಮನ್ನು ಆಶೀರ್ವದಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಾವೀದನು ಯಾಬೇಷ್ ಗಿಲ್ಯಾದಿನವರಿಗೆ ದೂತರನ್ನು ಕಳುಹಿಸಿ, “ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ, ಅವನನ್ನು ಸಮಾಧಿಮಾಡಿದ ಕಾರಣ, ಯೆಹೋವ ದೇವರಿಂದ ನಿಮಗೆ ಆಶೀರ್ವಾದವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:5
16 ತಿಳಿವುಗಳ ಹೋಲಿಕೆ  

ಆಗ ಸೌಲನು ಅವರಿಗೆ - ನೀವು ನನ್ನ ಮೇಲೆ ಕನಿಕರಪಟ್ಟದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.


ಯೆಹೋವನಿಂದ ನಿಮಗೆ ಆಶೀರ್ವಾದವಾಗಲಿ. ಆತನು ಭೂಪರಲೋಕಗಳನ್ನು ಉಂಟುಮಾಡಿದ್ದಾನೆ.


ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುವನೋ? ನೀನು ಈಹೊತ್ತು ನನಗೆ ಉಪಕಾರಮಾಡಿದ್ದಕ್ಕಾಗಿ ಯೆಹೋವನು ನಿನಗೆ ಉಪಕಾರಮಾಡಲಿ.


ಆಗ ನೊವೊವಿುಯು - ಸತ್ತವರಿಗೂ ಬದುಕುವವರಿಗೂ ಬಿಡದೆ ದಯೆತೋರಿಸುತ್ತಿರುವ ಇವನು ಯೆಹೋವನಿಂದ ಆಶೀರ್ವಾದ ಹೊಂದಲಿ ಎಂದು ಹೇಳಿ, ಆ ಮನುಷ್ಯನು ತಮ್ಮ ಸಂಬಂಧಿಕನೆಂದೂ ಸಮೀಪಬಂಧುಗಳಲ್ಲೊಬ್ಬನೆಂದೂ ರೂತಳಿಗೆ ತಿಳಿಸಿದಳು.


ಆಗ ಅವನು - ನನ್ನ ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರನ್ನು ನೋಡಿ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮುಂಚಿಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.


ತಿರಿಗಿ ನಿಮ್ಮ ನಿಮ್ಮ ತೌರಮನೆಗೆ ಹೋಗಿರಿ; ನೀವು ನನ್ನನ್ನೂ ಮರಣಹೊಂದಿದ ನನ್ನ ಮಕ್ಕಳನ್ನೂ ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆಮಾಡಲಿ.


ವಿುಚ್ಪೆಯಲ್ಲಿ ಯೆಹೋವನ ಮುಂದೆ ಸಭೆನೆರೆದಾಗ ಅದಕ್ಕೆ ಬಾರದಿದ್ದ ಇಸ್ರಾಯೇಲ್ಯರು ಯಾರಾದರೂ ಇದ್ದಾರೋ ಎಂದು ವಿಚಾರಿಸುವಲ್ಲಿ ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.


ಸೌಲನು ಅವನನ್ನು ಕಂಡು - ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು ಅಂದನು.


ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ಆಗಲಿ;


ಆಸ್ತಿಯನ್ನು ನೀನೇ ತಕ್ಕೋ ಎಂದು ಹೇಳಲು ಅಬ್ರಾಮನು ಅವನಿಗೆ - ಒಂದು ದಾರವನ್ನಾಗಲಿ ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವದನ್ನೂ ತೆಗೆದುಕೊಳ್ಳುವದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರದೇವರಾಗಿರುವ ಯೆಹೋವನ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಬ್ರಾಮನು ನನ್ನ ಸೊತ್ತಿನಿಂದಲೇ ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.


ಆಗ ಆ ಮನುಷ್ಯರು - ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುವೆವು; ಯೆಹೋವನು ಈ ದೇಶವನ್ನು ನಮಗೆ ಅನುಗ್ರಹಿಸಿದ ಮೇಲೆ ನಮ್ಮ ಮಾತಿನಂತೆ ನಿನ್ನಲ್ಲಿ ದಯದಿಂದ ನಡೆದುಕೊಳ್ಳುವೆವು ಅಂದರು.


ಅಮ್ಮೋನಿಯನಾದ ನಾಹಾಷನು ಹೊರಟುಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆಹಾಕಲು ಯಾಬೇಷಿನವರು ಅವನನ್ನು - ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನ ಸೇವಕರಾಗಿರುವೆವು ಎಂದು ಬೇಡಿಕೊಂಡರು.


ಇವರು ಬಂದಿದ್ದ ದೂತರಿಗೆ - ನಾಳೆ ಮಧ್ಯಾಹ್ನದಲ್ಲಿ ನಿಮಗೆ ಸಹಾಯಸಿಕ್ಕುವದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ ಎಂದು ಹೇಳಿ ಅವರನ್ನು ಕಳುಹಿಸಿದರು.


ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವದು; ಹೀಗಿರುವದರಿಂದ ನಿನ್ನೆ ಬಂದಂಥ ನಿನ್ನನ್ನು ಕರಕೊಂಡು ಹೋಗಿ ಸುಮ್ಮನೆ ಯಾಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರರನ್ನು ಕರಕೊಂಡು ಹಿಂದಿರುಗಿಹೋಗು; ಕೃಪಾಸತ್ಯತೆಗಳು ನಿನ್ನ ಸಂಗಡ ಇರಲಿ ಎಂದು ಹೇಳಿದನು.


ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವದಕ್ಕೋಸ್ಕರ ಯಾಬೇಷ್‍ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ಷೆಯಾನಿನ ಬೀದಿಗಳಲ್ಲಿ ತೂಗಹಾಕಿದ್ದರು. ಯಾಬೇಷ್‍ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು