Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:10 - ಕನ್ನಡ ಸತ್ಯವೇದವು J.V. (BSI)

10 ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನನ್ನು ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರುಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ; ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವದಕ್ಕೋಸ್ಕರ ಮುಂದೆ ನಡೆದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯೊಳಗೆ ತಿವಿದನು. ಅದರಿಂದ ಅವನ ಕರಳುಗಳೆಲ್ಲಾ ಹೊರಗೆ ಬಂದವು. ಎರಡನೆಯ ಸಾರಿ ತಿವಿಯಲಿಲ್ಲ. ಅಷ್ಟಕ್ಕೆ ಅವನು ಸತ್ತನು. ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಮತ್ತು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೋಸ್ಕರ ಮುಂದೆ ನಡೆದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವನ ಕರುಳೆಲ್ಲಾ ಹೊರಗೆ ಬಂದುವು. ಎರಡನೆಯ ಸಾರಿ ಇರಿಯಬೇಕಾಗಿರಲಿಲ್ಲ; ಅಷ್ಟಕ್ಕೆ ಅವನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವನ ಕೈಯಲ್ಲಿದ್ದ ಖಡ್ಗವನ್ನು ಅಮಾಸನು ಗಮನಿಸಲಿಲ್ಲ. ಅಮಾಸನ ಹೊಟ್ಟೆಯಲ್ಲಿದ್ದದ್ದೆಲ್ಲ ಹೊರಚೆಲ್ಲಿ ನೆಲದ ಮೇಲೆ ಬೀಳುವಂತೆ ಯೋವಾಬನು ಅವನ ಹೊಟ್ಟೆಗೆ ಖಡ್ಗದಿಂದ ತಿವಿದನು. ಅಮಾಸನು ಆಗಲೇ ಸತ್ತದ್ದರಿಂದ ಯೋವಾಬನು ಮತ್ತೆ ತಿವಿಯಲಿಲ್ಲ. ನಂತರ ಯೋವಾಬನು ತನ್ನ ಸೋದರನಾದ ಅಬೀಷೈಯನೊಂದಿಗೆ ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಅಮಾಸನು ಯೋವಾಬನ ಕೈಯಲ್ಲಿ ಕಠಾರಿ ಇದ್ದುದರಿಂದ ಎಚ್ಚರಿಕೆ ತೆಗೆದುಕೊಳ್ಳದಿರುವಾಗ, ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಹೊಟ್ಟೆಯಲ್ಲಿ ತಿವಿದನು. ಎರಡನೆಯ ಸಾರಿ ಹೊಡೆಯಲಿಲ್ಲ. ಅವನು ಸತ್ತನು. ಯೋವಾಬನೂ, ಅವನ ಸಹೋದರನಾದ ಅಬೀಷೈಯನೂ ಬಿಕ್ರಿಯ ಮಗ ಶೆಬನನ್ನು ಹಿಂದಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:10
13 ತಿಳಿವುಗಳ ಹೋಲಿಕೆ  

ಅಸಾಹೇಲನು ಬಿಟ್ಟುಹೋಗುವದಕ್ಕೆ ಒಪ್ಪದ್ದರಿಂದ ಅಬ್ನೇರನು ಬರ್ಜಿಯನ್ನು ಹಿಂಗಡೆಯಿಂದ ಅವನ ಹೊಟ್ಟೆಯೊಳಗೆ ತಿವಿದನು. ಬರ್ಜಿಯು ಅವನ ಬೆನ್ನಿನಿಂದ ಹಾಯ್ದು ಬಂದಿತು. ಅವನು ಕೂಡಲೆ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತುಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತ ಸಂಭಾಷಣೆಗಾಗಿಯೋ ಎಂಬಂತೆ ಊರು ಬಾಗಲಿನೊಳಗೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಆಗ ಏಹೂದನು ಎಡಗೈ ಚಾಚಿ ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯಲ್ಲಿ ತಿವಿದನು.


ಬಿಲ್ಲುಗಾರರೂ ಎಡಬಲ ಕೈಗಳಿಂದ ಕಲ್ಲುಗಳನ್ನೂ ಬಾಣಗಳನ್ನೂ ಎಸೆಯಬಲ್ಲವರೂ ಆಗಿದ್ದು ಯುದ್ಧದಲ್ಲಿ ಸಹಾಯಮಾಡುವದಕ್ಕಾಗಿ ಅವನ ಬಳಿಗೆ ಬಂದ ರಣವೀರರ ಪಟ್ಟಿ.


ಅವನು ಅಮಾಸನನ್ನು - ಸಹೋದರನೇ, ಕ್ಷೇಮವೋ ಎಂದು ಕೇಳಿ ಮುದ್ದಿಡುವದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು


ಅಬೀಷೈಯು ದಾವೀದನಿಗೆ - ದೇವರು ಈ ಹೊತ್ತು ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾನೆ; ಅಪ್ಪಣೆಯಾಗಲಿ, ನಾನು ಬರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಹತ್ತಿಕೊಳ್ಳುವಂತೆ ತಿವಿಯುವೆನು; ಎರಡನೆಯ ಸಾರಿ ಹೊಡೆಯುವದು ಅವಶ್ಯವಿಲ್ಲ ಎಂದು ಹೇಳಿದನು.


ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ - ಅಡವಿಗೆ ಹೋಗೋಣ ಬಾ ಎಂದನು. ಅಡವಿಗೆ ಬಂದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.


ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವದರಿಂದಾಗಲಿ ಸಮಯನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವದರಿಂದಾಗಲಿ


ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇವಿುಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.


ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲ್ಯರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು