Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:19 - ಕನ್ನಡ ಸತ್ಯವೇದವು J.V. (BSI)

19 ನಮ್ಮ ಪಟ್ಟಣವು ಇಸ್ರಾಯೇಲ್ಯರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲ್ಯರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದೀ; ನೀನು ಯೆಹೋವನ ಸ್ವಾಸ್ತ್ಯವನ್ನು ನುಂಗಿಬಿಡುವದೇಕೆ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಮ್ಮ ಪಟ್ಟಣವು ಇಸ್ರಾಯೇಲರಲ್ಲಿ ಸಮಾಧಾನವುಳ್ಳದ್ದೂ, ರಾಜನಿಷ್ಠೆಯುಳ್ಳದ್ದೂ ಆಗಿದೆ. ನೀನು ಇಸ್ರಾಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ಹಾಳುಮಾಡಬೇಕೆಂದಿರುವೆ. ನೀನು ಯೆಹೋವನ ಸ್ವತ್ತನ್ನು ನುಂಗಿಬಿಡುವುದೇಕೆ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನಮ್ಮ ಪಟ್ಟಣ, ಇಸ್ರಯೇಲರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ಇಸ್ರಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ನೀವು ಹಾಳುಮಾಡಬೇಕೆಂದಿದ್ದೀರಿ. ನೀವು ಸರ್ವೇಶ್ವರನ ಸೊತ್ತನ್ನು ಕಬಳಿಸಬೇಡಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಮ್ಮ ಪಟ್ಟಣವು ಇಸ್ರೇಲರಲ್ಲಿ ಶಾಂತಿಯಿಂದಲೂ ರಾಜನಿಷ್ಠೆಯಿಂದಲೂ ಇದೆ. ಈ ಕಾರಣದಿಂದ ಈ ಪಟ್ಟಣವು ಇಸ್ರೇಲ್ ಪಟ್ಟಣಗಳಲ್ಲಿ ತಾಯಿ ಎನಿಸಿಕೊಂಡಿದೆ. ಇಂಥ ಪಟ್ಟಣವನ್ನು ನೀನು ನಾಶಮಾಡುವುದು ಸರಿಯೋ?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಹಾಗೆ ನಾವು ಇಸ್ರಾಯೇಲಿನಲ್ಲಿ ಸಮಾಧಾನವುಳ್ಳವರೂ, ನಂಬಿಗಸ್ತರೂ ಆಗಿದ್ದೇವೆ. ಇಸ್ರಾಯೇಲಿನ ತಾಯಿಯಂತಿರುವ ನಮ್ಮ ಪಟ್ಟಣವನ್ನು ಹಾಳುಮಾಡಲು ಯೆಹೋವ ದೇವರ ಸೊತ್ತನ್ನು ಕಬಳಿಸುವುದಕ್ಕೆ ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:19
29 ತಿಳಿವುಗಳ ಹೋಲಿಕೆ  

ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ ಆತನಿಗೆ ಗಮಗವಿುಸುವ ನೈವೇದ್ಯವನ್ನು ಸಮರ್ಪಿಸಬೇಕು; ಮನುಷ್ಯರಾಗಿದ್ದರೆ ಈಗ ಅವರು ನನಗೆ ಯೆಹೋವನ ಸ್ವಾಸ್ತ್ಯದಲ್ಲಿ ಪಾಲುಸಿಕ್ಕದಂತೆ - ಹೋಗಿ ಅನ್ಯದೇವತೆಗಳನ್ನು ಸೇವಿಸು ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರಾದದರಿಂದ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ.


ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು - ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವದನ್ನು ಕೊಟ್ಟರೆ ನೀವು ಯೆಹೋವನ ಸ್ವಾಸ್ತ್ಯವನ್ನು ಆಶೀರ್ವದಿಸುವಿರಿ ಎಂದು ಕೇಳಿದನು.


ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಕಾಲಕ್ಷೇಪ ಮಾಡುವಂತೆ ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.


ಆದದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ - ನೀನು ಈ ರಾತ್ರಿ ಅಡವಿಯಲ್ಲಿ ಹೊಳೆದಾಟುವ ಸ್ಥಳದ ಹತ್ತಿರ ಇಳುಕೊಳ್ಳಬೇಡ; ಶೀಘ್ರವಾಗಿ ಹೊಳೆದಾಟಿ ಮುಂದೆ ಹೋಗಿಬಿಡು; ಇಲ್ಲವಾದರೆ ನೀನೂ ನಿನ್ನ ಜನರೂ ನಾಶವಾಗುವಿರಿ ಎಂದು ಹೇಳಿಕಳುಹಿಸಿರಿ ಅಂದನು.


ಈ ಗುಡಾರದಲ್ಲಿರುವವರಾದ ನಾವು ಭಾರ ಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿ ಹೋಗಬೇಕೆಂದು ನಮ್ಮ ಇಷ್ಟವಲ್ಲ; ಮರ್ತ್ಯವಾದದ್ದು ನುಂಗಿಹೋಗಿ ಜೀವವೊಂದೇ ಉಳಿಯುವಂತೆ ಈ ಗುಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಬೇಕೆಂಬದೇ ನಮ್ಮ ಇಷ್ಟ.


ಲಯವಾಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವದು. ಆ ಮಾತು ಏನಂದರೆ - ಮರಣವು ನುಂಗಿಯೇ ಹೋಯಿತು, ಜಯವಾಯಿತು ಎಂಬದೇ.


ನಿನ್ನ ಶತ್ರುಗಳೆಲ್ಲಾ ನಿನ್ನನ್ನು ನೋಡಿ ಬಾಯಿ ಕಿಸಿದು ಛೀಗುಟ್ಟಿ ಹಲ್ಲು ಕಡಿಯುತ್ತಾರೆ; ಆಹಾ, ಆಕೆಯನ್ನು ನುಂಗಿಬಿಟ್ಟಿದ್ದೇವೆ, ನಾವು ನಿರೀಕ್ಷಿಸುತ್ತಿದ್ದ ದಿನವು ಇದೇ ಇದು, ಬಂದೊದಗಿತು, ಕಣ್ಣಾರೆ ಕಂಡೆವು ಅಂದುಕೊಳ್ಳುತ್ತಾರೆ.


ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಅರಿಚಾಟಕಿರಿಚಾಟವನ್ನು ಹೆಚ್ಚಿಸಿದ್ದಾನೆ.


ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ ರಾಜ್ಯವನ್ನೂ ಅಲ್ಲಿನ ಸರದಾರರನ್ನೂ ನೀಚಸ್ಥಿತಿಗೆ ತಂದಿದ್ದಾನೆ.


ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹ ಪ್ರವಾಹವಾಗಿ ಬಾಬೆಲಿಗೆ ಬರುತ್ತಿದ್ದ ಸಕಲದೇಶೀಯರು ಇನ್ನು ಮೇಲೆ ಬಾರರು; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವದು.


[ಯೆಹೂದವು ಹೀಗೆ ಪ್ರಲಾಪಿಸುತ್ತದೆ] - ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ತಿಂದು ಹಾಕಿದ್ದಾನೆ, ಒಡೆದುಬಿಟ್ಟಿದ್ದಾನೆ, ಬರೀಪಾತ್ರೆಯನ್ನಾಗಿ ಕುಕ್ಕಿದ್ದಾನೆ, ಘಟಸರ್ಪದ ಹಾಗೆ ನನ್ನನ್ನು ನುಂಗಿದ್ದಾನೆ, ನನ್ನ ರುಚಿಪದಾರ್ಥಗಳಿಂದ ಹೊಟ್ಟೆತುಂಬಿಸಿಕೊಂಡಿದ್ದಾನೆ, ನನ್ನನ್ನು [ಗಂಗಾಳದಂತೆ] ತೊಳೆದು ಬಿಟ್ಟಿದ್ದಾನೆ.


ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು;


ದೆಬೋರಳಾದ ನಾನು ಇಸ್ರಾಯೇಲ್ಯರಲ್ಲಿ ತಾಯಿಯಂತೆ ಎದ್ದು ಬರುವವರೆಗೆ ಇಸ್ರಾಯೇಲ್‍ಗ್ರಾಮಗಳು ಹಾಳು ಬಿದ್ದಿದ್ದವು.


ಇಸ್ರಾಯೇಲ್ಯರು ಮಾತ್ರ ಯೆಹೋವನ ಸ್ವಂತ ಜನರಾದದ್ದೂ; ಯಾಕೋಬ್ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದದ್ದೂ;


ಭೂವಿುಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತಷ್ಟೆ; ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲ್ಯರಿಗೆ ಎಚ್ಚರವುಂಟಾಗುವಂತೆ ಮಾಡಿತಲ್ಲಾ.


ಭೂವಿುಯು ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು;


ಆಗ ಅಬ್ರಹಾಮನು ಹತ್ತಿರಕ್ಕೆ ಬಂದು - ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?


ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.


ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ ನನ್ನ ಮಗನನ್ನೂ ದೇವರ ಸ್ವಾಸ್ತ್ಯದಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.


ಆಗ ಆಕೆಯು - ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳೋಣ ಅಂದುಕೊಂಡು ಅವರ ಆಲೋಚನೆಯ ಮೇರೆಗೆ ತೀರ್ಮಾನಮಾಡಿಕೊಳ್ಳುತ್ತಿದ್ದರು.


ಅದಕ್ಕೆ ಯೋವಾಬನು - ನುಂಗಿಬಿಡುವದಾಗಲಿ ಹಾಳುಮಾಡುವದಾಗಲಿ ನನಗೆ ದೂರವಾಗಿರಲಿ; ಅಂಥದು ಬೇಡವೇ ಬೇಡ.


ಆ ಆಳು ಮುಂದೆ ಹೋದಾಗ ಸಮುವೇಲನು ಎಣ್ಣೇ ಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ - ಯೆಹೋವನು ತನ್ನ ಸ್ವಾಸ್ತ್ಯದ ಮೇಲೆ ಪ್ರಭುವಾಗಿರುವದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


ಕರ್ತನೇ, ಯೆಹೋವನೇ, ನೀನು ನಮ್ಮ ಪಿತೃಗಳನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ - ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ ಸ್ವಕೀಯ ಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ ಎಂದು ದೇವರನ್ನು ಪ್ರಾರ್ಥಿಸಿದನು.


ಯಾವ ಜನರಿಗೆ ಯೆಹೋವನೇ ದೇವರಾಗಿದ್ದಾನೋ ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.


ಮರೀಕುರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವಾಸ್ತ್ಯವಾಗಿರುವ ಇಸ್ರಾಯೇಲ್ಯರನ್ನು ಸಾಕುವದಕ್ಕೆ ನೇವಿುಸಿದನು.


ಆಗ ನೀನು ಆರಿಸಿಕೊಂಡ ಪ್ರಜೆಯ ಏಳಿಗೆಯನ್ನು ನೋಡಿ ನಾನೂ ಅವರೊಂದಿಗೆ ಸಂತೋಷಿಸುವೆನು; ನಿನ್ನ ಸ್ವಕೀಯರೊಂದಿಗೆ ನಾನೂ ಹಿಗ್ಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು