Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:16 - ಕನ್ನಡ ಸತ್ಯವೇದವು J.V. (BSI)

16 ರೆಫಾಯರಲ್ಲೊಬ್ಬನಾದ ಇಷ್ಬೀಬೆನೋಬ್ ಎಂಬವನು ಕೊಲ್ಲುವದಕ್ಕಿದ್ದನು. ಅವನ ಬರ್ಜಿಯ ತಾಮ್ರವು ಮುನ್ನೂರು ರೂಪಾಯಿ ತೂಕದ್ದು; ಅವನು ಸೊಂಟಕ್ಕೆ ಹೊಸ [ಕತ್ತಿಯನ್ನು] ಕಟ್ಟಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ರೆಫಾಯರಲ್ಲೊಬ್ಬನಾದ ಇಷ್ಬಿಬೆನೋಬ್ ಎಂಬುವನು ದಾವೀದನನ್ನು ಕೊಲ್ಲುಬೇಕೆಂದಿದ್ದನು. ಅವನ ತಾಮ್ರದ ಬರ್ಜಿಯು ಮುನ್ನೂರು ಶೆಕಲ್ (ಬೆಳ್ಳಿನಾಣ್ಯ) ತೂಕದ್ದು. ಅವನು ಸೊಂಟಕ್ಕೆ ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನನ್ನು ರೆಫಾಯರಲ್ಲೊಬ್ಬನಾದ ಇಷ್ಬೀಬೆನೋಬ್ ಎಂಬವನು ಕೊಲ್ಲುವುದಕ್ಕಿದ್ದನು. ಅವನ ಭರ್ಜಿಯ ತಾಮ್ರ ಮುನ್ನೂರು ಬೆಳ್ಳಿ ನಾಣ್ಯದ ತೂಕದ್ದು; ಅವನು ಸೊಂಟಕ್ಕೆ ಒಂದು ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಷ್ಬೀಬೆನೋಬನು ಒಬ್ಬ ರಾಕ್ಷಸನ ಮಗ. ಅವನ ಬರ್ಜಿಯು ಏಳುವರೆ ಪೌಂಡುಗಳಷ್ಟು ತೂಕವಿತ್ತು. ಅವನು ಹೊಸ ಖಡ್ಗವನ್ನು ಹೊಂದಿದ್ದನು. ಅವನು ದಾವೀದನನ್ನು ಕೊಲ್ಲುವುದಕ್ಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆಗ ಮುನ್ನೂರು ಬೆಳ್ಳಿ ನಾಣ್ಯದ ತೂಕದ ಕಂಚು ಈಟಿಯುಳ್ಳ, ಹೊಸ ಖಡ್ಗವನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ರೆಫಾಯನ ಮಕ್ಕಳಲ್ಲಿ ಇಷ್ಬೀಬೆನೋಬನು ದಾವೀದನನ್ನು ಕೊಲ್ಲಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:16
20 ತಿಳಿವುಗಳ ಹೋಲಿಕೆ  

ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನು.


ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.


ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.


ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿಗೆ ಬಂದು ಪಾಳೆಯ ಮಾಡಿಕೊಂಡಿದ್ದಾರೆಂದು ತಿಳಿದು


ಆ ದೇಶದವರು ಅನಾಕ್ಯರೆಂಬ ಬಲಿಷ್ಠರಾದ ಉನ್ನತಪುರುಷರು. ಅವರ ವಿಷಯ ನಿಮಗೆ ತಿಳಿದೇ ಇದೆ; ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ ಎಂಬ ಮಾತನ್ನು ಕೇಳಿದ್ದೀರಷ್ಟೆ.


(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ; ಅಗಲ ನಾಲ್ಕು ಮೊಳ.)


ಅವರು ಬಲಿಷ್ಠರೂ ಬಹುಜನವೂ ಅನಾಕ್ಯರಂತೆ ಉನ್ನತರಾದವರೂ ಆಗಿದ್ದರು.


(ತತ್ಪೂರ್ವದಲ್ಲಿ ಏವಿುಯರು ಆ ದೇಶದಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ ಬಹುಮಂದಿಯೂ ಅನಾಕ್ಯರಂತೆ ಉನ್ನತರೂ ಆಗಿದ್ದರು.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ - ಆ ದೇಶದ ಜನರು ನಮಗಿಂತ ಹೆಚ್ಚಾಗಿಯೂ ಉದ್ದವಾಗಿಯೂ ಇದ್ದಾರೆ; ಅವರಿರುವ ಪಟ್ಟಣಗಳು ದೊಡ್ಡವೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಳ್ಳವೂ ಆಗಿವೆ; ಅಲ್ಲಿ ಉನ್ನತಪುರುಷರನ್ನು ನೋಡಿದೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ ಅಂದುಕೊಳ್ಳುತ್ತಿದ್ದಿರಿ.


ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನಿಗೆ ಸೇರಿದ್ದ ರಾಜರೂ ಬಂದು ಅಷ್ಟರೋತ್ ಕರ್ನಯಿವಿುನಲ್ಲಿ ರೆಫಾಯರನ್ನೂ ಹಾವಿುನಲ್ಲಿ ಜೂಜ್ಯರನ್ನೂ ಶಾವೆಕಿರ್ಯಾತಯಿವಿುನಲ್ಲಿ ಏವಿುಯರನ್ನೂ ಸೋಲಿಸಿದರು.


ಆ ಕಾಲದಲ್ಲಿ ಅಂದರೆ ದೇವಪುತ್ರರು ಮನುಷ್ಯಪುತ್ರಿಯರನ್ನು ಕೂಡಿ ಅವರಲ್ಲಿ ಮಕ್ಕಳನ್ನು ಪಡೆಯುವ ಕಾಲದಲ್ಲಿ ಮಹಾಶರೀರಿಗಳು ಭೂವಿುಯ ಮೇಲಿದ್ದರು; ಅನಂತರದಲ್ಲಿಯೂ ಇದ್ದರು. ಪೂರ್ವದಲ್ಲಿ ಹೆಸರುಗೊಂಡ ಪರಾಕ್ರಮಶಾಲಿಗಳು ಇವರೇ.


ಅವರು ಬೆಟ್ಟವನ್ನು ಹತ್ತಿ ಕಾನಾನ್‍ದೇಶದ ದಕ್ಷಿಣಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರುಷ ಮುಂಚೆ ಕಟ್ಟಲ್ಪಟ್ಟದ್ದು.


ಆದರೆ ಆ ದೇಶದ ನಿವಾಸಿಗಳು ಬಲಿಷ್ಠರು; ಅವರಿರುವ ಪಟ್ಟಣಗಳು ದೊಡ್ಡವಾಗಿಯೂ ಕೋಟೆ ಕೊತ್ತಲುಗಳುಳ್ಳವಾಗಿಯೂ ಅವೆ; ಅದಲ್ಲದೆ ಅಲ್ಲಿ ಉನ್ನತರಾದ ಪುರುಷರನ್ನು ನೋಡಿದೆವು.


ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.


ಅವರು ಅನಾಕ್ಯರಂತೆ ರೆಫಾಯರಿಗೆ ಸೇರಿದವರೆಂದು ಹೇಳುವದುಂಟು; ಆದರೆ ಮೋವಾಬ್ಯರು ಅವರನ್ನು ಏವಿುಯರೆಂದು ಹೇಳುತ್ತಾರೆ.


ಇಸ್ರಾಯೇಲ್ಯರ ಪ್ರಾಂತ್ಯದಲ್ಲಿ ಅಂಥವರು ಯಾರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.


ಅವನ ಬರ್ಜಿಯ ಹಿಡಿಕೆಯು ನೇಯಿಗಾರರ ಕುಂಟೆಯಷ್ಟು ಗಾತ್ರವಾಗಿತ್ತು. ಅದರ ಅಲಗು ಆರುನೂರು ತೊಲೆ ಕಬ್ಬಿಣದಿಂದ ಮಾಡಿದ್ದು. ಅವನ ಗುರಾಣಿಯನ್ನು ಹೊರುವವನು ಅವನ ಮುಂದೆ ಮುಂದೆ ಹೋಗುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು