Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:11 - ಕನ್ನಡ ಸತ್ಯವೇದವು J.V. (BSI)

11 ಕೆರೂಬಿವಾಹನನಾಗಿ ಹಾರಿ ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕೆರೂಬಿವಾಹನನಾಗಿ ಹಾರಿದನು. ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬಂದಿಳಿದನು ‘ಕೆರೂಬಿ’ ವಾಹನಾರೂಢನಾಗಿ ಕಾಣಿಸಿಕೊಂಡನು ವಾಯುರೆಕ್ಕೆಗಳ ವೇಗದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕೆರೂಬಿಗಳ ಮೇಲೆ ಆಸೀನನಾಗಿ ವಾಯುವೇ ತನ್ನ ರೆಕ್ಕೆಗಳೋ ಎಂಬಂತೆ ಹಾರಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:11
13 ತಿಳಿವುಗಳ ಹೋಲಿಕೆ  

ಜಲರಾಶಿಗಳ ಮೇಲೆ ಉಪ್ಪರಿಗೆಗಳನ್ನು ಕಟ್ಟಿಕೊಂಡಿದ್ದೀ; ಮೋಡಗಳನ್ನು ವಾಹನವಾಗಿ ಮಾಡಿಕೊಂಡಿದ್ದೀ; ವಾಯುವಿನ ರೆಕ್ಕೆಗಳ ಮೇಲೆ ಸಂಚರಿಸುತ್ತೀ.


ಕೆರೂಬಿವಾಹನನಾಗಿ ಹಾರಿ ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಬಂದನು.


ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಪುರುಷನನ್ನು ಯೆಹೋವನು ಕೂಗಿ ಅವನಿಗೆ -


ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡೇನಂದರೆ


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಜನಾಂಗಗಳು ನಡುಗಲಿ. ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನು ಆಳುತ್ತಾನೆ; ಭೂವಿುಯು ಕಂಪಿಸಲಿ.


ಇಸ್ರಾಯೇಲ್ಯರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.


ದೇವರಿಗೆ ಸಹಸ್ರಾರು ಮಾತ್ರವಲ್ಲ, ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ ಸೀನಾಯಿಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾನೆ.


ಅವರು ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೈನ್ಯಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.


ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಕೃಪಾಸನಕ್ಕೆ ಜೋಡಿಸಬೇಕು.


ಅದಲ್ಲದೆ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಆತನು ಏದೆನ್ ವನದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಧಗಧಗನೆ ಪ್ರಜ್ವಲಿಸುತ್ತಾ ಸುತ್ತುವ ಕತ್ತಿಯನ್ನೂ ಇರಿಸಿದನು.


ದೇವರ ಮಂಜೂಷವನ್ನು ತರುವದಕ್ಕಾಗಿ ಅವರೆಲ್ಲರ ಸಹಿತ ಯೆಹೂದದೇಶದ ಬಾಳಾ ಎಂಬಲ್ಲಿಗೆ ಹೋದನು. ಆ ಮಂಜೂಷವು ದೇವನಾಮದಿಂದ ಅಂದರೆ ಕೆರೂಬಿಯರ ನಡುವೆ ಆಸೀನನಾಗಿರುವ ಸೇನಾಧೀಶ್ವರನಾದ ಯೆಹೋವನ ನಾಮದಿಂದ ಪ್ರಸಿದ್ಧವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು