Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:4 - ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಸ್ತೋತ್ರಕ್ಕೆ ಅರ್ಹನು; ನಾನು ಆತನಿಗೆ ಮೊರೆಯಿಡಲು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಸ್ತೋತ್ರಕ್ಕೆ ಅರ್ಹನು. ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರನು ಸ್ತುತ್ಯಾರ್ಹನು ಶತ್ರುಗಳಿಂದ ಕಾಪಾಡುವನು, ನಾನವಗೆ ಮೊರೆಯಿಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಸ್ತೋತ್ರಕ್ಕೆ ಅರ್ಹನಾಗಿದ್ದಾನೆ. ನಾನು ಸಹಾಯಕ್ಕಾಗಿ ಆತನನ್ನು ಕರೆಯುವೆನು. ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಸ್ತುತಿ ಪಾತ್ರರಾಗಿರುವ ಯೆಹೋವ ದೇವರನ್ನು ನಾನು ಮೊರೆಯಿಟ್ಟದ್ದರಿಂದ, ಅವರು ನನ್ನ ಶತ್ರುಗಳಿಂದ ನನ್ನನ್ನು ಕಾಪಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:4
20 ತಿಳಿವುಗಳ ಹೋಲಿಕೆ  

ಯೆಹೋವನು ಸ್ತೋತ್ರಕ್ಕೆ ಅರ್ಹನು; ಆತನಿಗೆ ನಾನು ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.


ಅವರ ಸ್ವರವು ನನಗೆ ಕೇಳಿಸಿತು; ಅವರು ಮಹಾ ಶಬ್ದದಿಂದ - ವಧಿತನಾದ ಕುರಿಯಾದಾತನು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನ ಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಹೇಳಿದರು.


ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ಬರೆದದೆ.


ಆತನು ನನ್ನ ವಿಜ್ಞಾಪನೆಗೆ ಕಿವಿಗೊಟ್ಟಿದ್ದಾನೆ; ಜೀವದಿಂದಿರುವವರೆಗೂ ಆತನನ್ನೇ ಪ್ರಾರ್ಥಿಸುವೆನು.


ಯೆಹೋವನು ದೊಡ್ಡವನೂ ಬಹಳವಾಗಿ ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಭಯಂಕರನು.


ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತನಗರದಲ್ಲಿ ಸರ್ವಸ್ತುತಿಪಾತ್ರನಾಗಿದ್ದಾನೆ.


ಕರ್ತನೇ, ನಮ್ಮ ದೇವರೇ, ನೀನು ಪ್ರಭಾವ ಮಾನ ಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಸಮಸ್ತವನ್ನು ಸೃಷ್ಟಿಸಿದಾತನು ನೀನೇ; ಎಲ್ಲವು ನಿನ್ನ ಚಿತ್ತದಿಂದಲೇ ಇದ್ದವು, ನಿನ್ನ ಚಿತ್ತದಿಂದಲೇ ನಿರ್ಮಿತವಾದವು ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾರೆ.


ನಾನು ನಿನಗೆ ಕೃತಜ್ಞತಾಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನಾಮವನ್ನು ಪ್ರಖ್ಯಾತಿಪಡಿಸುವೆನು.


ರಕ್ಷಣಾಪಾತ್ರೆಯನ್ನು ತೆಗೆದುಕೊಂಡು ಯೆಹೋವನಾಮವನ್ನು ಪ್ರಖ್ಯಾತಿಪಡಿಸುವೆನು.


ಆಗ ಯೆಹೋವನ ಹೆಸರು ಹೇಳಿ - ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು ಎಂದು ಪ್ರಾರ್ಥಿಸಿದೆನು.


ಯೆಹೋವನ ಮಹತ್ಕಾರ್ಯಗಳನ್ನು ಯಾರು ವರ್ಣಿಸಬಲ್ಲರು? ಆತನನ್ನು ತಕ್ಕಂತೆ ಕೀರ್ತಿಸುವದು ಯಾರಿಂದಾದೀತು?


ಆತನ ನಾಮದ ಮಹತ್ತನ್ನು ಕೀರ್ತಿಸಿರಿ; ಆತನ ಪ್ರಭಾವವನ್ನು ವರ್ಣಿಸುತ್ತಾ ಕೊಂಡಾಡಿರಿ.


ದೇವರು ನನ್ನ ಸಂಗಡ ಇರುವದು ನಿಶ್ಚಯ; ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಪಲಾಯನ ಮಾಡುವರು.


ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; ಆತನು ನನ್ನನ್ನು ರಕ್ಷಿಸುವನು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು - ಏಳಿರಿ, ನಮ್ಮ ದೇವರಾದ ಯೆಹೋವನಿಗೆ ಯುಗಯುಗಕ್ಕೂ ಸ್ತೋತ್ರವಾಗಲಿ ಅನ್ನಿರಿ ಎಂದು ಹೇಳಿ - ಯೆಹೋವನೇ, ಸರ್ವಸ್ತುತಿಕೀರ್ತನೆಗಳಿಗೆ ವಿುಗಿಲಾಗಿರುವ ನಿನ್ನ ಮಹಾನಾಮಕ್ಕೆ ಕೊಂಡಾಟವಾಗಲಿ,


ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವದಕ್ಕೆ ಪ್ರಾರಂಭಿಸಲು ಯೆಹೋವನು ಯೆಹೂದ್ಯರಿಗೆ ವಿರೋಧವಾಗಿ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತದವರನ್ನೂ ನಶಿಸುವದಕ್ಕೋಸ್ಕರ ಅವರಲ್ಲಿ ಹೊಂಚುಹಾಕುವವರನ್ನು ಇರಿಸಿದ್ದರಿಂದ ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಪೂರ್ಣವಾಗಿ ಸಂಹರಿಸಿಬಿಟ್ಟರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು