Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:1 - ಕನ್ನಡ ಸತ್ಯವೇದವು J.V. (BSI)

1 ದಾವೀದನ ಕಡೇ ಮಾತುಗಳು. ಇಷಯನ ಮಗನಾದ ದಾವೀದನ ನುಡಿಗಳು - ಉನ್ನತಸ್ಥಾನಕ್ಕೆ ಏರಿಸಲ್ಪಟ್ಟವನೂ ಯಾಕೋಬನ ದೇವರಿಂದ ಅಭೀಷೇಕಿಸಲ್ಪಟ್ಟವನೂ ಇಸ್ರಾಯೇಲ್ಯರ ವರಕವಿಯೂ ಆಗಿರುವವನು ಹೇಳಿದ್ದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನ ಕೊನೆಯ ಮಾತುಗಳು - ಇಷಯನ ಮಗನಾದ ದಾವೀದನು, ಉನ್ನತ ಸ್ಥಾನದಲ್ಲಿ ಸ್ಥಾಪಿಸಲ್ಪಟ್ಟವನು, ಯಾಕೋಬನ ದೇವರಿಂದ ಅಭಿಷೇಕಿಸಲ್ಪಟ್ಟವನೂ, ಇಸ್ರಾಯೇಲ್ಯರ ವರಕವಿಯೂ ಆಗಿರುವವನ ನುಡಿಗಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾವೀದನ ಕಡೇ ಮಾತುಗಳಿವು: ಜೆಸ್ಸೆಯನ ಮಗ ದಾವೀದನ ನುಡಿಗಳಿವು: ಉನ್ನತಸ್ಥಾನವನ್ನು ಅಲಂಕರಿಸಿದವನು, ಯಕೋಬ ದೇವರಿಂದ ಅಭಿಷಿಕ್ತನಾದವನು, ಇಸ್ರಯೇಲರ ವರಕವಿ ಆಡಿದ ವಚನಗಳಿವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇವು ಇಷಯನ ಮಗನಾದ ದಾವೀದನ ಕೊನೆಯ ಮಾತುಗಳು: “ದಾವೀದನು ಈ ಹಾಡನ್ನು ಹಾಡಿದನು. ದೇವರಿಂದ ಉನ್ನತಿಗೇರಿಸಲ್ಪಟ್ಟವನ ಸಂದೇಶವಿದು. ಯಾಕೋಬನ ದೇವರಿಂದ ಆರಿಸಲ್ಪಟ್ಟ ರಾಜನೇ ಅವನು. ಅವನು ಇಸ್ರೇಲಿನ ಒಳ್ಳೆಯ ಹಾಡುಗಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನ ಕಡೆಯ ಮಾತುಗಳು: “ಇಷಯನ ಮಗ ದಾವೀದನ ನುಡಿಗಳಿವು: ಉನ್ನತವಾಗಿ ಸಾಗಿದ ಪುರುಷನು ಯಾಕೋಬನ ದೇವರಿಂದ ಅಭಿಷಿಕ್ತನಾದವನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:1
25 ತಿಳಿವುಗಳ ಹೋಲಿಕೆ  

ನನ್ನ ಸೇವಕನಾದ ದಾವೀದನನ್ನು ಕಂಡು ಪರಿಶುದ್ಧತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಸಕಲಜ್ಞಾನದಿಂದ ಕೂಡಿದವರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿಕೊಳ್ಳಿರಿ, ಬುದ್ಧಿಹೇಳಿಕೊಳ್ಳಿರಿ; ಕರ್ತನ ಕೃಪೆಯನ್ನು ನೆನಸಿಕೊಳ್ಳುವವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಗಾನಮಾಡಿರಿ.


ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.


ವೀಣೆಯ ಮೇಲೆ ಮನಸ್ಸುಬಂದಂತೆ ಹಾಡುತ್ತಾರೆ; ದಾವೀದನ ಹಾಗೆ ವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತಾರೆ,


ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ.


ಕೋಪಾವೇಶದಿಂದ ಅವರನ್ನು ಕಳವಳಗೊಳಿಸುವನು.


ಆತನನ್ನು ಕೀರ್ತಿಸಿರಿ, ಭಜಿಸಿರಿ; ಆತನ ಅದ್ಭುತಕೃತ್ಯಗಳನ್ನೆಲ್ಲಾ ಧ್ಯಾನಿಸಿರಿ.


ದಾವೀದನು ಆಸಾಫನನ್ನೂ ಅವನ ಸಹೋದರರನ್ನೂ ಯೆಹೋವ ಕೀರ್ತನೆಗೋಸ್ಕರ ಆ ದಿನದಲ್ಲೇ ಮೊದಲು ನೇವಿುಸಿದನು [ಅವರು ಹಾಡಿದ್ದೇನಂದರೆ] -


ಯೆಹೋವನ ವಿರೋಧಿಗಳು ಮುರಿಯಲ್ಪಡುತ್ತಾರೆ; ಆತನು ಆಕಾಶದಿಂದ ಅವರ ಮೇಲೆ ಗರ್ಜಿಸುತ್ತಾನೆ. ಯೆಹೋವನು ಭೂವಿುಯ ಕಟ್ಟಕಡೆಯಲ್ಲಿರುವವರಿಗೂ ನ್ಯಾಯತೀರಿಸುವನು. ತಾನು ನೇವಿುಸಿದ ಅರಸನಿಗೆ ಬಲವನ್ನು ಅನುಗ್ರಹಿಸುವನು; ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು.


ನಿಮ್ಮಲ್ಲಿ ಬಾಧೆಪಡುವವನು ಇದ್ದಾನೋ? ಅವನು ದೇವರನ್ನು ಪ್ರಾರ್ಥಿಸಲಿ. ನಿಮ್ಮಲ್ಲಿ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆ ಹಾಡಲಿ.


ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದಾಗಿ ಕೀರ್ತನಗ್ರಂಥದಲ್ಲಿ ದಾವೀದನೇ ಹೇಳುತ್ತಾನಷ್ಟೆ.


ದೇವಪುರುಷನಾದ ಮೋಶೆ ದೇಹವನ್ನು ಬಿಡುವದಕ್ಕಿಂತ ಮುಂಚೆ ಇಸ್ರಾಯೇಲ್ಯರ ವಿಷಯವಾಗಿ ಹೇಳಿದ ಆಶೀರ್ವಾದವು ಹೇಗಂದರೆ -


ಯಾಕೋಬನು ತನ್ನ ಮಕ್ಕಳನ್ನು ಕರಸಿ - ನೀವೆಲ್ಲರೂ ಕೂ ಡಿಬನ್ನಿರಿ; ಮುಂದಿನ ಕಾಲದಲ್ಲಿ ನಿಮಗೆ ಸಂಭವಿಸುವದನ್ನು ತಿಳಿಸುತ್ತೇನೆ.


ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನು ಸೌಲನ ಕಾಲದಲ್ಲಿ ಬಹು ವೃದ್ಧನಾಗಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನೆಂಬವನು ಒಬ್ಬನು.


ಅವರು ಪರಸ್ಪರವಾಗಿ - ಸೌಲನು ಸಾವಿರಗಟ್ಟಳೆಯಾಗಿ ಕೊಂದನು; ದಾವೀದನು ಹತ್ತು ಸಾವಿರಗಟ್ಟಳೆಯಾಗಿ ಕೊಂದನು ಎಂದು ಹಾಡಿದರು.


ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ. ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ.


ಆತನು ತಾನು ನೇವಿುಸಿದ ಅರಸನಿಗೋಸ್ಕರ ವಿಶೇಷರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.


ನನ್ನ ಹಸ್ತವು ಅವನ ಮೇಲೆ ಸ್ಥಿರವಾಗಿರುವದು; ನನ್ನ ಭುಜವು ಅವನನ್ನು ಬಲಪಡಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು