Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:17 - ಕನ್ನಡ ಸತ್ಯವೇದವು J.V. (BSI)

17 ಯೆಹೋವನೇ, ಈ ನೀರನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ಜೀವದಾಶೆ ತೊರೆದವರ ರಕ್ತ! ಇದನ್ನು ಕುಡಿಯುವದೇ ಇಲ್ಲ ಎಂದು ಹೇಳಿ ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಮಂದಿಯ ಪರಾಕ್ರಮವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಅವನು ಅದನ್ನು ಕುಡಿಯಲೊಲ್ಲದೆ, “ಯೆಹೋವನೇ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ. ಜೀವದಾಶೆ ತೊರೆದವರ ರಕ್ತವನ್ನು ನಾನು ಕುಡಿಯಬೇಕೆ? ಇದನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ, ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಜನರು ಪರಾಕ್ರಮಶಾಲಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಸರ್ವೇಶ್ವರಾ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ.ಇದು ಜೀವದಾಶೆ ತೊರೆದವರ ರಕ್ತ; ಇದನ್ನು ಕುಡಿಯುವುದೇ ಇಲ್ಲ,” ಎಂದು ಹೇಳಿ ಅದನ್ನು ಸರ್ವೇಶ್ವರನಿಗೆ ಸಮರ್ಪಣೆಯಾಗಿ ಹೊರಗೆ ಹೊಯ್ದುಬಿಟ್ಟನು. ಆ ಮೂರುಮಂದಿ ಪರಾಕ್ರಮಿಗಳ ಕೃತ್ಯಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಯೆಹೋವನೇ, ನಾನು ಈ ನೀರನ್ನು ಕುಡಿಯುವುದಿಲ್ಲ. ನಾನು ಈ ನೀರನ್ನು ಕುಡಿದರೆ, ನನಗಾಗಿ ತಮ್ಮ ಪ್ರಾಣಗಳನ್ನೇ ಆಪತ್ತಿಗೀಡುಮಾಡಿಕೊಂಡಿದ್ದ ಜನರ ರಕ್ತವನ್ನು ಕುಡಿದಂತಾಗುತ್ತದೆ” ಎಂದು ಹೇಳಿದನು. ಈ ಕಾರಣದಿಂದಲೇ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ಮೂವರು ಪರಾಕ್ರಮಿಗಳು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು, “ಯೆಹೋವ ದೇವರೇ, ನಾನು ಇಂಥಾ ಕಾರ್ಯವನ್ನು ಎಂದಿಗೂ ಮಾಡಲು ಸಾಧ್ಯವಿಲ್ಲ. ಇದು ತಮ್ಮ ಪ್ರಾಣದಾಶೆ ತೊರೆದ ಮನುಷ್ಯರ ರಕ್ತವಲ್ಲವೇ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇಂಥಾ ಮಹಾಕಾರ್ಯಗಳನ್ನು ಈ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:17
14 ತಿಳಿವುಗಳ ಹೋಲಿಕೆ  

ಇದಲ್ಲದೆ ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿದ್ದೇವೆ?


ಮತ್ತು ಆತನು ಅವರಿಗೆ - ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ; ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಇದು ನನ್ನ ರಕ್ತ, ಇದು ಒಡಂಬಡಿಕೆಯ ರಕ್ತ, ಇದು ಪಾಪಗಳ ಕ್ಷಮೆಗಾಗಿ ಬಹು ಜನರಿಗೋಸ್ಕರ ಸುರಿಸಲ್ಪಡುವ ರಕ್ತ.


ಕುಯುಕ್ತಿ ಬಲಾತ್ಕಾರಗಳಿಗೆ ತಪ್ಪಿಸಿ ಅವರನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವದು.


ಅದಕ್ಕೆ ನಾಬೋತನು - ನಾನು ಪಿತ್ರಾರ್ಜಿತ ಸ್ವಾಸ್ತ್ಯವನ್ನು ನಿನಗೆ ಮಾರದಂತೆ ಯೆಹೋವನು ನನ್ನನ್ನು ತಡೆಯಲಿ ಎಂದು ಉತ್ತರಕೊಟ್ಟನು.


ಅದಕ್ಕೆ ಯೋವಾಬನು - ನುಂಗಿಬಿಡುವದಾಗಲಿ ಹಾಳುಮಾಡುವದಾಗಲಿ ನನಗೆ ದೂರವಾಗಿರಲಿ; ಅಂಥದು ಬೇಡವೇ ಬೇಡ.


ತನ್ನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ ಎಂದು ಹೇಳಿ


ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು.


ಜೆಬುಲೂನ್ಯರೂ ನಫ್ತಾಲ್ಯರೂ ಅಂಥವರಲ್ಲ; ಅವರು ಬೈಲಿನ ದಿನ್ನೆಗಳಲ್ಲಿ ತಮ್ಮ ಜೀವವನ್ನು ಮರಣಾಪತ್ತಿಗೊಪ್ಪಿಸಿದರು.


ಹಾಗೆ ಎಂದಿಗೂ ಆಗಬಾರದು; ಈ ಪಾತ್ರೆಯು ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವೇ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು ಅಂದನು.


ಆದರೆ ರಕ್ತದಿಂದ ಕೂಡಿರುವ ಮಾಂಸವನ್ನು ನೀವು ತಿನ್ನಬಾರದು; ರಕ್ತವು ಜೀವವಷ್ಟೆ.


ಆದರೆ ಅವನು ಅದನ್ನು ಕುಡಿಯಲೊಲ್ಲದೆ - ತಮ್ಮ ಜೀವವನ್ನು ಸಮರ್ಪಿಸಿದ ಈ ಪುರುಷರ ರಕ್ತವನ್ನು ನಾನು ಕುಡಿಯಲೋ! ನನ್ನ ದೇವರು ಈ ಕಾರ್ಯವನ್ನು ನನಗೆ ದೂರಮಾಡಲಿ. ಅವರು ತಮ್ಮ ಜೀವವನ್ನೇ ಸಮರ್ಪಿಸಿ ಇದನ್ನು ತಂದುಕೊಟ್ಟರು. ನಾನು ಇದನ್ನು ಕುಡಿಯುವದೇ ಇಲ್ಲ ಎಂದು ಹೇಳಿ ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಮಂದಿಯ ಪರಾಕ್ರಮವು ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು