Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:34 - ಕನ್ನಡ ಸತ್ಯವೇದವು J.V. (BSI)

34 ಮಾಕಾ ಊರಿನ ಅಹಸ್ಬೈ ಎಂಬವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ್ ಎಂಬವನ ಮಗನಾದ ಎಲೀಯಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ ಎಂಬುವನ ಮಗನಾದ ಎಲೀಯಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಮಾಕಾ ಊರಿನ ಅಹಸ್ಬೈ ಎಂಬುವನ ಮಗ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ್ ಎಂಬವನ ಮಗ ಎಲೀಯಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಮಾಕಾದ ಅಹಸ್ಬೈನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲನ ಮಗ ಎಲೀಯಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟನು; ಗಿಲೋವಿನ ಅಹೀತೋಫೆಲ್ ಎಂಬವನ ಮಗ ಎಲೀಯಾಮ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:34
10 ತಿಳಿವುಗಳ ಹೋಲಿಕೆ  

ಕೂಡಲೆ ದಾವೀದನು ಒಬ್ಬನನ್ನು ಕರೆದು ಆ ಸ್ತ್ರೀ ಯಾರೆಂದು ಕೇಳಲು ಅವನು - ಆಕೆಯು ಎಲೀಯಾಮನ ಮಗಳೂ ಹಿತ್ತಿಯನಾದ ಊರೀಯನ ಹೆಂಡತಿಯೂ ಆಗಿರುವ ಬತ್ಷೆಬೆಯಲ್ಲವೋ ಎಂದು ಉತ್ತರ ಕೊಟ್ಟನು.


ಇದಲ್ಲದೆ ಅವನು ಸಮಾಧಾನಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಕರೇಕಳುಹಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದರಿಂದ ಒಳಸಂಚು ಬಲವಾಗುತ್ತಾ ಹೋಯಿತು.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದು ಕತ್ತೆಗೆ ತಡಿಹಾಕಿಸಿ ಕೂತುಕೊಂಡು ತನ್ನ ಊರಿಗೆ ಹೋಗಿ ಮನೆಯಲ್ಲಿ ವ್ಯವಸ್ಥೆಮಾಡಿ ಉರ್ಲುಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿದರು.


ಅಬ್ಷಾಲೋಮನ ಸಂಗಡ ಒಳಸಂಚುಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು - ಯೆಹೋವನೇ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು ಎಂದು ಪ್ರಾರ್ಥಿಸಿದನು.


ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಚೋಬಾ, ರೆಹೋಬ್ ಎಂಬ ಸ್ಥಳಗಳ ಅರಾಮ್ಯರೂ ಟೋಬ್ ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳುಕೊಂಡಿದ್ದರು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರು ತಿಳಿದು ಹಣಕೊಟ್ಟು ಬೇತ್‍ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ತರಿಸಿದರು.


ಶೆಬನು ಇಸ್ರಾಯೇಲ್‍ಪ್ರಾಂತಗಳಲ್ಲಿ ಸಂಚರಿಸುತ್ತಾ ಆಬೇಲ್ಬೇತ್ಮಾಕಾ ಎಂಬಲ್ಲಿಗೆ ಬಂದನು. ಬೇರಿಯರೆಲ್ಲರೂ ಕೂಡಿಕೊಂಡು ಅವನೊಡನೆ ಆ ಊರನ್ನು ಸೇರಿದರು.


(ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು.)


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನೂ ಕುರಿತು - ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ ಎಂದು ಕೇಳಿದ್ದಕ್ಕೆ ಅಬೀಷೈಯು - ನಾನು ಬರುತ್ತೇನೆ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು