Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:14 - ಕನ್ನಡ ಸತ್ಯವೇದವು J.V. (BSI)

14 ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅದಕ್ಕೆ ದಾವೀದನು, “ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದಾವೀದನು ಗಾದನಿಗೆ, “ನಾನು ನಿಜವಾಗಿಯೂ ತೊಂದರೆಗೆ ಒಳಗಾದೆ! ಆದರೆ ಯೆಹೋವನು ಕೃಪಾಪೂರ್ಣನಾಗಿದ್ದಾನೆ. ಆದ್ದರಿಂದ ಆತನು ನನ್ನನ್ನು ದಂಡಿಸಲಿ; ಆದರೆ ಅದು ಜನರಿಂದ ಬಾರದಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:14
28 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಕೃಪಾಕಾರ್ಯಗಳು ಬಹಳವಾಗಿವೆ; ನಿನ್ನ ವಿಧಿಗಳಿಗೆ ತಕ್ಕಂತೆ ನನ್ನನ್ನು ಚೈತನ್ಯಗೊಳಿಸು.


ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.


ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಹಸ್ತದಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.


ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.


ಯೆಹೋವನು ಸರ್ವೋಪಕಾರಿಯೂ ತಾನು ನಿರ್ಮಿಸಿದವುಗಳನ್ನೆಲ್ಲಾ ಕರುಣಿಸುವಾತನೂ ಆಗಿದ್ದಾನೆ.


ನೀನು ಪಾಪವನ್ನು ಕ್ಷವಿುಸುವವನಾದ್ದರಿಂದ ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ಕರ್ತನೇ, ನೀನು ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ ನಂಬಿಕೆಯೂ ಉಳ್ಳವನು.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ನಾನು ನನ್ನ ಜನರ ಮೇಲೆ ರೋಷಗೊಂಡು ಅವರನ್ನು ನಿನ್ನ ಕೈವಶ ಮಾಡಿ ನನ್ನ ಸ್ವಾಸ್ತ್ಯವನ್ನು ಹೊಲೆಗೆಡಿಸಿದೆನು; ನೀನು ಅವರನ್ನು ಹೇಗೂ ಕರುಣಿಸದೆ ಮುದುಕರ ಮೇಲೆಯೂ ಬಹುಭಾರವಾದ ನೊಗವನ್ನು ಹೊರಿಸಿದಿ.


ಶಿಷ್ಟನು ತನ್ನ ದನದ ಕ್ಷೇಮವನ್ನು ಲಕ್ಷಿಸುತ್ತಾನೆ; ದುಷ್ಟನ ವಾತ್ಸಲ್ಯವೋ ಕ್ರೂರತನವೇ.


ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವದನ್ನು ಕಂಡು ತನ್ನ ಯಜಮಾನನಿಗೆ - ಅಯ್ಯೋ, ಸ್ವಾಮೀ, ಏನು ಮಾಡೋಣ ಎಂದನು.


ಇಸ್ರಾಯೇಲ್ಯರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;


ಈಗ ನನ್ನ ಪ್ರಾಣವು ತತ್ತರಿಸುತ್ತದೆ; ಮತ್ತು ನಾನೇನು ಹೇಳಲಿ? ತಂದೆಯೇ, ಈ ಕಾಲದೊಳಗಿಂದ ನನ್ನನ್ನು ತಪ್ಪಿಸು. ಆದರೆ ಇದಕ್ಕಾಗಿಯೇ ಈ ಕಾಲ ಸೇರಿದೆನು.


ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನನಗೆ ಬಲು ಸಿಟ್ಟೇರಿದೆ; ನಾನು [ಯೆರೂಸಲೇವಿುನ ಮೇಲೆ] ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಿಸಬೇಕೆಂದಿದ್ದ ಕೇಡಿಗಿಂತ ಅವು ಹೆಚ್ಚಾಗಿ ಮಾಡಿದವಷ್ಟೆ.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.


ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ನೀನು ಸತ್ತ ನಾಯಿಯಂತಿರುವ ನನ್ನನ್ನು ಲಕ್ಷಿಸುವ ಹಾಗೆ ನಿನ್ನ ದಾಸನಾದ ನಾನು ಎಷ್ಟರವನು ಅಂದನು.


ಇಸ್ರಾಯೇಲೇ, ಯೆಹೋವನನ್ನು ಮುಂಗಾದಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವದು.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವದಿಲ್ಲ.


ನಾವು ಉಳಿದಿರುವದು ಯೆಹೋವನ ಕರುಣೆಯೇ; ಆತನ ಕೃಪಾವರಗಳು ನಿಂತುಹೋಗವು.


ಕರ್ತನಾದ ನಮ್ಮ ದೇವರು ಕರುಣಿಸುವವನೂ ಕ್ಷವಿುಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ;


ಆತನು ನಮ್ಮ ಕಡೆಗೆ ತಿರುಗಿಕೊಂಡು ನಮ್ಮನ್ನು ಕನಿಕರಿಸುವನು, ನಮ್ಮ ಅಪರಾಧಗಳನ್ನು ಅಣಗಿಸುವನು. [ದೇವರೇ,] ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬಿಸಾಟುಬಿಡುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು