Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:21 - ಕನ್ನಡ ಸತ್ಯವೇದವು J.V. (BSI)

21 ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವದಕ್ಕೇನು ಕಾರಣ ಎಂದು ಕೇಳಿದನು. ದಾವೀದನು ಅವನಿಗೆ - ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ವೇದಿಯನ್ನು ಕಟ್ಟುವದಕ್ಕೆ ಬಂದಿದ್ದೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನು, “ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವುದಕ್ಕೆ ಕಾರಣವೇನು?” ಎಂದು ಕೇಳಿದನು. ದಾವೀದನು ಅವನಿಗೆ, “ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟುವುದಕ್ಕೆ ಬಂದಿದ್ದೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ನನ್ನ ಒಡೆಯರಾದ ಅರಸರು ತಮ್ಮ ಸೇವಕನ ಬಳಿಗೆ ಬರುವುದಕ್ಕೇನು ಕಾರಣ?” ಎಂದು ಕೇಳಿದನು. ದಾವೀದನು, “ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಪೀಠವನ್ನು ಕಟ್ಟುವುದಕ್ಕೆ ಬಂದಿದ್ದೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅರೌನನು, “ರಾಜನಾದ ನನ್ನ ಒಡೆಯನೇ, ನನ್ನ ಬಳಿ ಬಂದದ್ದೇಕೆ?” ಎಂದು ಕೇಳಿದನು. ದಾವೀದನು, “ನಿನ್ನಿಂದ ಕಣವನ್ನು ಕೊಂಡುಕೊಳ್ಳುವುದಕ್ಕಾಗಿ ಬಂದೆನು. ನಾನು ಯೆಹೋವನಿಗೆ ಒಂದು ಯಜ್ಞವೇದಿಕೆಯನ್ನು ನಿರ್ಮಿಸುತ್ತೇನೆ. ಆಗ ರೋಗರುಜಿನಗಳು ನಿಲ್ಲುತ್ತವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅರೌನನು, “ಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು?” ಎಂದನು. ಅದಕ್ಕೆ ದಾವೀದನು, “ಈ ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಈ ಕಣವನ್ನು ನಿನ್ನಿಂದ ಕೊಂಡುಕೊಳ್ಳಲು ಬಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:21
11 ತಿಳಿವುಗಳ ಹೋಲಿಕೆ  

ಫಿನೆಹಾಸನು ಎದ್ದು ಅವರನ್ನು ದಂಡಿಸಲು ಆ ವ್ಯಾಧಿಯು ನಿಂತುಹೋಯಿತು.


ದಾವೀದನು ಅವನಿಗೆ - ನಿನ್ನ ಕಣವನ್ನೂ ಭೂವಿುಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಯೆಹೋವನಿಗೋಸ್ಕರ ಒಂದು ವೇದಿಯನ್ನು ಕಟ್ಟಿಸುತ್ತೇನೆ; ಪೂರ್ಣಕ್ರಯ ತೆಗೆದುಕೊಂಡು ಅದನ್ನು ಕೊಡು ಎಂದು ಹೇಳಿದನು.


ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ - ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು ಎಂದು ಹೇಳಿದನು.


ಆಗ ಯೋವಾಬನು ಅರಸನಿಗೆ - ನನ್ನ ಒಡೆಯನಾದ ನಿನ್ನ ಆಯುಷ್ಕಾಲದಲ್ಲೇ ದೇವರಾದ ಯೆಹೋವನು ನಿನ್ನ ಪ್ರಜೆಗಳನ್ನು ಈಗ ಇರುವದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯನಾದ ಅರಸನು ಈ ಕಾರ್ಯಕ್ಕೆ ಮನಸ್ಸು ಮಾಡಿದ್ದೇಕೆ ಅಂದನು.


ಆ ಇಸ್ರಾಯೇಲ್ಯನ ಹಿಂದೆ ಹೋಗಿ ಅವನು ಮಲಗುವ ಕೋಣೆಯನ್ನು ಹೊಕ್ಕು ಅವರಿಬ್ಬರನ್ನೂ ಅಂದರೆ ಆ ಇಸ್ರಾಯೇಲ್ಯನನ್ನೂ ಆ ಸ್ತ್ರೀಯನ್ನೂ ಒಂದೇ ಏಟಿನಿಂದ ಹೊಟ್ಟೆಯಲ್ಲಿ ತಿವಿದು ಕೊಂದನು. ಆಗ ಇಸ್ರಾಯೇಲ್ಯರಿಗುಂಟಾಗಿದ್ದ ವ್ಯಾಧಿ ನಿಂತುಹೋಯಿತು.


ಅವರು ಯೊರ್ದನ್ ಹೊಳೆಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು. ಯೋಸೇಫನು ತನ್ನ ತಂದೆಗೋಸ್ಕರ ಏಳು ದಿನಗಳ ತನಕ ಗೋಳಾಡಿಸಿದನು.


ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರಮಾಡಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು