Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:12 - ಕನ್ನಡ ಸತ್ಯವೇದವು J.V. (BSI)

12 ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಹಾಗೆ ನನ್ನ ಹಸ್ತವು ನಿನ್ನ ಸಂಗಡ ಇರುವದು ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಪ್ರಯತ್ನದಲ್ಲಿ ನಾನು ನಿನ್ನ ಸಂಗಡ ಕೈಜೋಡಿಸುತ್ತೇನೆ” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ, “ಈ ನಾಡು ಯಾರದು? ನೀನು ನನ್ನೊಡನೆ ಒಪ್ಪಂದ ಮಾಡಿಕೊಂಡರೆ ಇಸ್ರಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವೆನು. ಹಾಗು ನನ್ನ ಬೆಂಬಲ ನಿನಗಿರುವುದು,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಬ್ನೇರನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿ, “ಈ ದೇಶವನ್ನು ಯಾರು ಆಳಬೇಕೆಂಬದು ನಿನ್ನ ಅಭಿಪ್ರಾಯ? ನನ್ನೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡರೆ, ಇಸ್ರೇಲಿನ ಜನರೆಲ್ಲರನ್ನು ನೀನು ಆಳುವಂತೆ ಮಾಡಲು ನಾನು ಸಹಾಯ ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ತನ್ನ ದೂತರನ್ನು ಕಳುಹಿಸಿ, “ದೇಶವು ಯಾರದು? ಇದಲ್ಲದೆ ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು. ಆಗ ಇಗೋ, ಇಸ್ರಾಯೇಲರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವುದೆಂದು ಹೇಳಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:12
15 ತಿಳಿವುಗಳ ಹೋಲಿಕೆ  

ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಲಘು.


ಆಗ ಇಸ್ರಾಯೇಲ್ಯರೆಲ್ಲರೂ ಅರಸನ ಮುಂದೆ ಬಂದು ಅವನನ್ನು - ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೇ ಹೋಗಿ ಅರಸನನ್ನೂ ಅವನ ಮನೆಯವರನ್ನೂ ಅವನೊಡನೆ ಇದ್ದ ಜನರನ್ನೂ ಯೊರ್ದನ್‍ಹೊಳೆ ದಾಟಿಸಿ ಕರಕೊಂಡು ಬಂದದ್ದೇಕೆ ಎಂದು ಕೇಳಿದರು.


ಆಗ ಯೆಹೂದ್ಯರೆಲ್ಲರೂ ಏಕ ಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ - ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿಕಳುಹಿಸಿದರು.


ನೀನು ಶತ್ರುಗಳನ್ನು ಪ್ರೀತಿಸುವವನೂ ವಿುತ್ರರನ್ನು ದ್ವೇಷಿಸುವವನೂ ಆಗಿದ್ದೀ; ನೀನು ನಿನ್ನ ಸೇನಾಧಿಪತಿಗಳನ್ನೂ ಸೈನಿಕರನ್ನೂ ಲಕ್ಷಿಸುವವನಲ್ಲವೆಂದು ಈಗ ತೋರಿಸಿಕೊಟ್ಟಿ. ಇದರಿಂದ ಈಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೇ ಉಳಿದಿದ್ದರೆ ನಿನಗೆ ಸಂತೋಷವಾಗುತ್ತಿತ್ತೆಂದು ತಿಳಿಯಬೇಕಷ್ಟೆ.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತ ಸಂಭಾಷಣೆಗಾಗಿಯೋ ಎಂಬಂತೆ ಊರು ಬಾಗಲಿನೊಳಗೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಅಬ್ನೇರನು ದಾವೀದನಿಗೆ - ನಾನು ಹೊರಟುಹೋಗಿ ಇಸ್ರಾಯೇಲ್ಯರನ್ನೆಲ್ಲಾ ಕೂಡಿಸಿ ನನ್ನ ಒಡೆಯನಾದ ಅರಸನ ಬಳಿಗೆ ಕರಕೊಂಡುಬರುವೆನು; ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು; ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು ಎಂದು ಹೇಳಲು ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟನು.


ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರ ಕೊಡಲಾರದೆ ಹೋದನು.


ಅದಕ್ಕೆ ದಾವೀದನು - ಒಳ್ಳೇದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಆದರೆ ನೀನು ಒಂದು ಮಾಡಬೇಕು. ನನ್ನನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರಕೊಂಡು ಬರಬೇಕು; ಹಾಗೆ ಕರಕೊಂಡು ಬಾರದಿದ್ದರೆ ನೀನು ನನ್ನ ಮೋರೆಯನ್ನು ನೋಡಕೂಡದು ಎಂದು ಉತ್ತರ ಕೊಟ್ಟನು.


ಅರಸನು ತನ್ನ ಸೇವಕರಿಗೆ - ಈ ಹೊತ್ತು ಇಸ್ರಾಯೇಲ್ಯರಲ್ಲಿ ಹತವಾದವನು ಪ್ರಭುವೂ ಮಹಾಪುರುಷನೂ ಆಗಿದ್ದಾನೆಂಬದು ನಿಮಗೆ ಗೊತ್ತುಂಟಲ್ಲಾ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು