Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:13 - ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ದಾವೀದನು - ಒಳ್ಳೇದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಆದರೆ ನೀನು ಒಂದು ಮಾಡಬೇಕು. ನನ್ನನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರಕೊಂಡು ಬರಬೇಕು; ಹಾಗೆ ಕರಕೊಂಡು ಬಾರದಿದ್ದರೆ ನೀನು ನನ್ನ ಮೋರೆಯನ್ನು ನೋಡಕೂಡದು ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ಆದರೆ ನಿನ್ನಿಂದ ನನಗೆ ಒಂದು ಸಹಾಯ ಬೇಕು. ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ, ನೀನು ನನ್ನ ಮುಖವನ್ನು ನೋಡಕೂಡದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಪ್ಪಂದಮಾಡಿಕೊಳ್ಳುತ್ತೇನೆ; ಆದರೆ ನೀನು ಒಂದು ಕಾರ್ಯವನ್ನು ಮಾಡಬೇಕು; ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ ನೀನು ನನ್ನ ಮುಖವನ್ನು ನೋಡಕೂಡದು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅದಕ್ಕೆ ದಾವೀದನು, “ಒಳ್ಳೆಯದು! ನಾನು ನಿನ್ನೊಡನೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆದರೆ ನೀನು ನನಗಾಗಿ ಒಂದು ಕೆಲಸ ಮಾಡಬೇಕು. ಸೌಲನ ಮಗಳಾದ ಮೀಕಲಳನ್ನು ನನ್ನ ಬಳಿಗೆ ಕರೆತರುವ ತನಕ ನಾನು ನಿನ್ನನ್ನು ಸಂಧಿಸುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ದಾವೀದನು, “ಒಳ್ಳೆಯದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು. ಆದರೆ ನಾನು ನಿನ್ನಲ್ಲಿ ಒಂದನ್ನು ಕೇಳುತ್ತೇನೆ.” ಏನೆಂದರೆ, “ನೀನು ನನ್ನನ್ನು ನೋಡುವುದಕ್ಕೆ ಬರುವಾಗ, ಸೌಲನ ಮಗಳಾದ ಮೀಕಲಳನ್ನು ನೀನು ಕರೆದುಕೊಂಡು ಬಾರದೆ ಹೋದರೆ, ನೀನು ನನ್ನ ಮುಖವನ್ನು ಕಾಣಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:13
8 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೂದನು - ಆ ಮನುಷ್ಯನು ನಮಗೆ, ನಿಮ್ಮ ತಮ್ಮನನ್ನು ಕರಕೊಂಡುಬಂದ ಹೊರತು ನನ್ನ ಮುಖವನ್ನು ನೋಡಕೂಡದು ಎಂದು ಖಂಡಿತವಾಗಿ ಹೇಳಿದನಲ್ಲಾ.


ಯೆಹೋವನ ನಿಬಂಧನ ಮಂಜೂಷವು ದಾವೀದನಗರಕ್ಕೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಹಣಕಿನೋಡಿ ದಾವೀದನು ಕುಣಿಯುತ್ತಾ ಹಾರುತ್ತಾ ಇರುವದನ್ನು ಕಂಡು ಮನಸ್ಸಿನಲ್ಲಿ ಅವನನ್ನು ತಿರಸ್ಕರಿಸಿದಳು.


ತಮ್ಮನು ನಮ್ಮ ಜೊತೆಯಲ್ಲಿ ಇಲ್ಲವಾದರೆ ಆ ಮನುಷ್ಯನ ಮುಖವನ್ನು ನೋಡಲಾಗದು; ತಮ್ಮನು ನಮ್ಮ ಸಂಗಡ ಬಂದರೆ ಹೋಗುತ್ತೇವೆ ಎಂದು ಹೇಳಿದ್ದಕ್ಕೆ ನಿನ್ನ ಸೇವಕನಾದ


ಅದಕ್ಕೆ - ನಿಮ್ಮ ತಮ್ಮನು ಸಂಗಡ ಬಾರದಿದ್ದರೆ ನೀವು ಇನ್ನೊಂದು ಸಾರಿ ನನ್ನ ಮುಖವನ್ನು ನೋಡಕೂಡದು ಎಂದು ಅಪ್ಪಣೆಕೊಟ್ಟಿಯಷ್ಟೆ.


ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ದೇಶವು ಯಾರದು? ನೀನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡರೆ ಇಸ್ರಾಯೇಲ್ಯರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವ ಹಾಗೆ ನನ್ನ ಹಸ್ತವು ನಿನ್ನ ಸಂಗಡ ಇರುವದು ಎಂದು ಹೇಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು