Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:39 - ಕನ್ನಡ ಸತ್ಯವೇದವು J.V. (BSI)

39 ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಯೆಹೋವನೇ ಕೆಡುಕರಿಗೆ ಮುಯ್ಯಿತೀರಿಸಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನಾನು ರಾಜನಾಗಿದ್ದರೂ ಏನೂ ಮಾಡಲಾರದ ಸ್ಥಿತಿಯಲ್ಲಿದ್ದೇನೆ. ಚೆರೂಯಳ ಗಂಡುಮಕ್ಕಳಾದ ಇವರು ನನಗೆ ಬಹಳ ಕೇಡನ್ನು ಮಾಡಿದರು. ಯೆಹೋವನು ಈ ಜನರಿಗೆ ತಕ್ಕ ದಂಡನೆಯನ್ನು ನೀಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:39
30 ತಿಳಿವುಗಳ ಹೋಲಿಕೆ  

ಯೆಹೋವನ ಪಟ್ಟಣದಲ್ಲಿ ಕೆಡುಕರೇ ಉಳಿಯದಂತೆ ಪ್ರತಿದಿನವೂ ಬೆಳಗಿನಲ್ಲಿ ದೇಶದ ದುಷ್ಟರನ್ನು ಸಂಹರಿಸುತ್ತಾ ಬರುವೆನು.


ಅವರ ದುಷ್ಕೃತ್ಯಗಳಿಗೂ ಕೆಡುಕುಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.


ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ. ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದೇವರ ದಂಡನೆಯನ್ನು ವಿಧಿಸುತ್ತಾನೆ.


ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವದು.


ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.


ಅವನಿಗೆ ಈ ಪ್ರಕಾರ ಹೇಳಬೇಕು - ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ! ರೆಚೀನ ಅರಾಮ್ಯರು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಗೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.


ರಾಜನು ನ್ಯಾಯಾಸನಾರೂಢನಾಗಿ ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.


ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ಭಕ್ತರ ಕೊಂಬುಗಳು ಎತ್ತಲ್ಪಡುವವು.


ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ಬುರುಡೆಯ ಮೇಲೆ ಬೀಳುವದು.


ದಾವೀದನು [ತನ್ನ ಮನಸ್ಸಿನಲ್ಲಿ] - ನನ್ನ ಮಗನಾದ ಸೊಲೊಮೋನನು ಎಳೇ ಪ್ರಾಯದವನಾಗಿದ್ದಾನೆ; ಯೆಹೋವನಿಗೋಸ್ಕರ ಕಟ್ಟಿಸತಕ್ಕ ಆಲಯವು ಎಲ್ಲಾ ದೇಶಗಳಲ್ಲಿ ಕೀರ್ತಿ ಘನಗಳನ್ನು ಹೊಂದಬೇಕಾದರೆ ಅದು ಅಧಿಕ ಶೋಭಾಯಮಾನವಾದದ್ದಾಗಿರಬೇಕು; ಆದದರಿಂದ ಅದಕ್ಕೆ ಬೇಕಾಗುವದನ್ನೆಲ್ಲಾ ಸಿದ್ಧಪಡಿಸುವೆನು ಅಂದುಕೊಂಡು ಸಾಯುವದಕ್ಕೆ ಮೊದಲೇ ಬಹಳವಾಗಿ ಸೌರಣೆಮಾಡಿದನು.


ಅಮಾಸನಿಗೆ - ನೀನೂ ನನ್ನ ರಕ್ತ ಸಂಬಂಧಿಯಾಗಿದ್ದೀ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂಬದಾಗಿಯೂ ತಿಳಿಸಿರಿ ಎಂದು ಹೇಳಿಕಳುಹಿಸಿದನು.


ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.


ಅರಸನು ತನ್ನ ಸೇವಕರಿಗೆ - ಈ ಹೊತ್ತು ಇಸ್ರಾಯೇಲ್ಯರಲ್ಲಿ ಹತವಾದವನು ಪ್ರಭುವೂ ಮಹಾಪುರುಷನೂ ಆಗಿದ್ದಾನೆಂಬದು ನಿಮಗೆ ಗೊತ್ತುಂಟಲ್ಲಾ;


ಅದಕ್ಕೆ ಅರಸನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿರಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ ಮೇಲೆ ನೀನು ಹೀಗೇಕೆ ಮಾಡಿದಿ ಎಂದು ಅವನನ್ನು ಯಾರು ಕೇಳಬಹುದು ಎಂದು ಉತ್ತರಕೊಟ್ಟನು.


ಅದಕ್ಕೆ ದಾವೀದನು - ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈಹೊತ್ತು ನನ್ನನ್ನು ಅಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿವಸದಲ್ಲಿ ಇಸ್ರಾಯೇಲ್ಯರಲ್ಲಿ ಒಬ್ಬನಿಗೆ ಮರಣದಂಡನೆಯಾಗುವದು ಸರಿಯೋ? ನಾನು ಇಸ್ರಾಯೇಲ್ಯರ ಅರಸನೆಂಬದು ಈಹೊತ್ತು ಸ್ಪಷ್ಟವಾಗಿ ಗೊತ್ತಾಯಿತು ಎಂದು ನುಡಿದನು.


ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಅಂದರೆ ಇಸ್ರಾಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದಸೇನಾಪತಿಯೂ ಯೆತೆರೆನ ಮಗನೂ ಆದ ಅಮಾಸನನ್ನೂ ಕೊಂದನಲ್ಲಾ.


ತರುವಾಯ ಅರಸನಾದ ದಾವೀದನು - ದೇವರು ನನ್ನ ಮಗನಾದ ಸೊಲೊಮೋನನನ್ನೇ ಆರಿಸಿಕೊಂಡಿದ್ದಾನೆ; ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಅಲ್ಲದೆ ಮನುಷ್ಯನಿಗಾಗಿಯಲ್ಲ;


ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡು ಆ ಸಮಯದಲ್ಲಿ ಎಳೇ ಪ್ರಾಯದವನೂ ಮೃದುಸ್ವಭಾವವುಳ್ಳವನೂ ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನಿಗೆ ಮಾರ್ಮಲೆತು ಬಲಗೊಂಡರು.


ಅದಕ್ಕೆ ಅರಸನಾದ ಚಿದ್ಕೀಯನು - ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡ ಬಂದು ಏನೂ ಮಾಡಬಲ್ಲವನಲ್ಲ ಎಂದು ಹೇಳಲು


ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ - ನೀನು ನಿತ್ಯವೂ ಭಜಿಸುವ ದೇವರು ನಿನ್ನನ್ನುದ್ಧರಿಸಲಿ ಎಂದು ಹರಸಿದನು.


ಆದರೆ ನೀವು ಹಾಗೆ ಮಾಡದೆಹೋದರೆ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ; ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವದು ಎಂದು ತಿಳಿದುಕೊಳ್ಳಿರಿ.


ಶೆಕೆವಿುನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.


ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತನಲ್ಲವೋ! ಅವನ ಮುದಿ ತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂಬದು ನಿನಗೆ ಗೊತ್ತಿರುವದು ಎಂಬದೇ.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ಲಭಿಸುವದಲ್ಲವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು