Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:9 - ಕನ್ನಡ ಸತ್ಯವೇದವು J.V. (BSI)

9 ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದವರೆಗಿರುವ ಎಲ್ಲಾ ಇಸ್ರಾಯೇಲ್ಯರಲ್ಲಿಯೂ ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದವರೆಗಿರುವ ಎಲ್ಲ ಇಸ್ರಯೇಲರಲ್ಲೂ ಯೆಹೂದ್ಯರಲ್ಲೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸುವುದಾಗಿ ಸರ್ವೇಶ್ವರನಾದ ದೇವರು ದಾವೀದನಿಗೆ ವಾಗ್ದಾನ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9-10 ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಷೆಬದವರೆಗೆ ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಸೌಲನ ಕುಟುಂಬದಿಂದ ರಾಜ್ಯವನ್ನು ತಪ್ಪಿಸಿ, ಯೆಹೋವ ದೇವರು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:9
16 ತಿಳಿವುಗಳ ಹೋಲಿಕೆ  

ಆಗ ಸಮುವೇಲನು ಅವನಿಗೆ - ಯೆಹೋವನು ಈ ಹೊತ್ತು ಇಸ್ರಾಯೇಲ್‍ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮನಾದ ಇನ್ನೊಬ್ಬನಿಗೆ ಕೊಟ್ಟಿದ್ದಾನೆ.


ಆಕೆಯು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ ಎಂದು ಹೇಳಿಕಳುಹಿಸಿದಳು.


ಯೆಹೋವನ ಆಜ್ಞೆಯಂತೆ ಸೌಲನ ರಾಜ್ಯವನ್ನು ದಾವೀದನಿಗೆ ಒಪ್ಪಿಸುವದಕ್ಕೋಸ್ಕರ ಹೆಬ್ರೋನಿನಲ್ಲಿದ್ದ ಅವನ ಬಳಿಗೆ ಗುಂಪು ಗುಂಪುಗಳಾಗಿ ಬಂದ ಯುದ್ಧಸನ್ನದ್ಧರ ಲೆಕ್ಕ -


ಆತನು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾನೆ; ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾನೆ.


ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂದಳು.


ಅಮಾಸನಿಗೆ - ನೀನೂ ನನ್ನ ರಕ್ತ ಸಂಬಂಧಿಯಾಗಿದ್ದೀ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂಬದಾಗಿಯೂ ತಿಳಿಸಿರಿ ಎಂದು ಹೇಳಿಕಳುಹಿಸಿದನು.


ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು - ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ ಎಂದು ಆಣೆಯಿಟ್ಟು ಹೇಳಿದನು.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ ಎಂದು ಪ್ರತಿಜ್ಞೆಮಾಡಿದ್ದನು.


ಅದಕ್ಕೆ ಸೌಲನು - ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಅನ್ನಲು ಜನರು ಅವನಿಗೆ -


ಆಗ ಏಲಿಯು ಅವನಿಗೆ - ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಬೇಡ; ಮುಚ್ಚಿದರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ ಎಂದು ಹೇಳಲು


ಆಗ ಯೆಹೂದ್ಯರೆಲ್ಲರೂ ಏಕ ಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ - ನೀನೂ ನಿನ್ನ ಎಲ್ಲಾ ಸೇವಕರೂ ತಿರಿಗಿ ಬನ್ನಿರಿ ಎಂದು ಹೇಳಿಕಳುಹಿಸಿದರು.


ಇದಲ್ಲದೆ ಅರಸನಾದ ಸೊಲೊಮೋನನು - ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು