Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 4:11 - ಕನ್ನಡ ಸತ್ಯವೇದವು J.V. (BSI)

11 ಮಹಾದುಷ್ಟರಾದ ನೀವು ನೀತಿವಂತನ ಮನೆಹೊಕ್ಕು ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿತೀರಿಸುವದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದೇ ಬಿಡುವೆನು ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮಹಾ ದುಷ್ಟರಾದ ನೀವು ನೀತಿವಂತನ ಮನೆಯೊಳಗೆ ನುಗ್ಗಿ, ಅವನನ್ನು ಅವನ ಮಂಚದ ಮೇಲೆಯೇ ಕೊಂದು ಹಾಕಿದ ಮೇಲೆ, ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಯೆಹೋವನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದು ಬಿಡುವೆನು” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮಹಾದುಷ್ಟರಾದ ನೀವು ನೀತಿವಂತನ ಮನೆಹೊಕ್ಕು ಅವನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದ ಮೇಲೆ ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಸರ್ವೇಶ್ವರನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದೇಬಿಡುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದುಷ್ಟರಾದ ನೀವು ಇಂದು ಒಬ್ಬ ನೀತಿವಂತನನ್ನು ಅವನ ಸ್ವಂತ ಮನೆಯಲ್ಲಿ ಅವನ ಸ್ವಂತ ಹಾಸಿಗೆಯ ಮೇಲೆಯೇ ಕೊಂದಿರುವುದರಿಂದ ನಿಮ್ಮನ್ನೂ ನಾನು ಕೊಂದು ನಿರ್ಮೂಲ ಮಾಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹಾಗಾದರೆ, ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನಿರ್ದೋಷಿಯನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲ್ಲಿಸುವೆನು. ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾರಣೆ ಮಾಡಿ, ನಿಮ್ಮನ್ನು ಭೂಮಿಯಿಂದ ತೆಗೆದುಬಿಡುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 4:11
19 ತಿಳಿವುಗಳ ಹೋಲಿಕೆ  

ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಂಡನು.


ಕೆಡುಕನಿಂದ ಹುಟ್ಟಿ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ನಾವು ಇರಬಾರದು. ಯಾವ ಕಾರಣದಿಂದ ಅವನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಗೆ ಸರಿಯಾದವುಗಳೂ ಆಗಿದ್ದದರಿಂದಲೇ.


ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾವಿುಯೇ, ನೀನು ಅನಾದಿಯಿಂದಿದ್ದೀಯಲ್ಲಾ; ನಾವು ಸಾಯೆವು. ಯೆಹೋವನೇ, [ನಮ್ಮ] ನ್ಯಾಯತೀರ್ಪಿಗಾಗಿ ಅವರನ್ನು ನೇವಿುಸಿದ್ದೀ; ಶರಣನೇ, [ನಮ್ಮ] ಶಿಕ್ಷೆಗಾಗಿ ಅವರನ್ನು ನಿಲ್ಲಿಸಿದ್ದೀ.


ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಗದು; ದುಷ್ಟನು ಶಿಷ್ಟನನ್ನು ಸುತ್ತಿಕೊಂಡಿದ್ದಾನೆ, ಆದದರಿಂದ ಸಾಗುವ ನ್ಯಾಯವು ವಕ್ರವೇ.


ನೀವು ಅವುಗಳಿಗೆ - ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂವಿುಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು ಎಂದು ಹೇಳಿರಿ.


ದುಷ್ಟರಿಂದ ಸೋತ ಶಿಷ್ಟನು ಹಾಳು ಬಾವಿ, ತುಳಿದಾಡಿದ ಒರತೆ.


ದುಷ್ಟರಾದರೋ ದೇಶದೊಳಗಿಂದ ಕೀಳಲ್ಪಡುವರು, ದ್ರೋಹಿಗಳು ನಿರ್ಮೂಲರಾಗುವರು.


ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ. ಆತನು ಅವರ ಹೆಸರನ್ನು ಭೂವಿುಯಿಂದ ತೆಗೆದುಹಾಕಲಿ.


ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಅಂದರೆ ಇಸ್ರಾಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದಸೇನಾಪತಿಯೂ ಯೆತೆರೆನ ಮಗನೂ ಆದ ಅಮಾಸನನ್ನೂ ಕೊಂದನಲ್ಲಾ.


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಯೆಹೋವನೇ ಕೆಡುಕರಿಗೆ ಮುಯ್ಯಿತೀರಿಸಲಿ ಎಂದು ಹೇಳಿದನು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತ ಸಂಭಾಷಣೆಗಾಗಿಯೋ ಎಂಬಂತೆ ಊರು ಬಾಗಲಿನೊಳಗೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದು ಕೊಂದನು.


ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣ ಶಿಕ್ಷೆಯಾಗಬೇಕು.


ನಾನು ಕೈಯೆತ್ತಿ ನಿನ್ನನ್ನೂ ನಿನ್ನ ಪ್ರಜೆಗಳನ್ನೂ ಅಂಟುರೋಗದಿಂದ ಸಾಯಿಸಬಹುದಾಗಿತ್ತು; ಆಗ ನೀನು ಈವರೆಗೆ ಭೂವಿುಯಲ್ಲಿ ಇರದಂತೆ ನಿರ್ಮೂಲವಾಗುತ್ತಿದ್ದಿ.


ಮನುಷ್ಯರು ಮೊದಲುಗೊಂಡು ಪಶುಪಕ್ಷಿಕ್ರಿವಿುಗಳವರೆಗೂ ಭೂವಿುಯ ಮೇಲಿದ್ದದ್ದೆಲ್ಲಾ ನಾಶವಾಯಿತು; ಅವು ಭೂವಿುಯ ಮೇಲಿನಿಂದ ಲಯವಾಗಿ ಹೋದವು. ನೋಹನೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳೂ ಮಾತ್ರ ಉಳಿದರು.


ಆಗ ದೇವರು ನೋಹನಿಗೆ - ಎಲ್ಲಾ ದೇಹಿಗಳಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ; ಭೂಲೋಕವು ಅವರ ಅನ್ಯಾಯದಿಂದ ತುಂಬಿ ಅದೆ; ನಾನು ಅವರನ್ನೂ ಭೂವಿುಯ ಮೇಲಿರುವದೆಲ್ಲವನ್ನೂ ಅಳಿಸಿಬಿಡುತ್ತೇನೆ.


ನೀನು ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ಭೂವಿುಯನ್ನು ಬಿಟ್ಟುಹೋಗಬೇಕೆಂದು ನಿನಗೆ ಶಾಪ ಬಂತು.


ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಸಕೊಂಡು ಅವನ ಮನೆಯವರನ್ನು ಕೊಂದದ್ದಕ್ಕಾಗಿ ಯೆಹೋವನು ನಿನಗೆ ಮುಯ್ಯಿ ತೀರಿಸಿದ್ದಾನೆ; ಆತನು ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನಿಗೆ ಕೊಟ್ಟು ಬಿಟ್ಟನು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು