Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:11 - ಕನ್ನಡ ಸತ್ಯವೇದವು J.V. (BSI)

11 ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ ದೇವದಾರುಮರಗಳನ್ನೂ ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ಇವನಿಗೋಸ್ಕರ ಅರಮನೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಟೈರಿನ ರಾಜನಾದ ಹೀರಾಮನು ದಾವೀದನಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಹಾಗು ಶಿಲ್ಪಿಗಳನ್ನು ಕಳುಹಿಸಿದನು. ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಟೈರಿನ ಅರಸನಾದ ಹೀರಾಮನು ದಾವೀದನ ಬಳಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು, ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:11
15 ತಿಳಿವುಗಳ ಹೋಲಿಕೆ  

ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವದಕ್ಕೋಸ್ಕರ ದೂತರನ್ನೂ ದೇವದಾರು ಮರಗಳನ್ನೂ ಶಿಲ್ಪಿಗಳನ್ನೂ ಬಡಗಿಯವರನ್ನೂ ಅವನ ಬಳಿಗೆ ಕಳುಹಿಸಿದನು.


ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವದಕ್ಕಾಗಿ ಬೇಕಾದ ಕಲ್ಲು ಮರಗಳನ್ನು ಸಿದ್ಧಪಡಿಸಿದವರು ಇವರೇ.


ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ದೇವರ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು.


ಇದರಿಂದ ದಾವೀದನು - ಯೆಹೋವನು ನನ್ನನ್ನು ಇಸ್ರಾಯೇಲ್ ರಾಜನನ್ನಾಗಿ ಸ್ಥಿರಪಡಿಸಿ ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಿವಿುತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದನೆಂದು ತಿಳಿದುಕೊಂಡನು.


ಆದರೆ ಪಾರಸಿಯ ರಾಜನಾದ ಕೋರೆಷನಿಂದ ಪಡಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗ ಬಡಗಿ ಇವರಿಗೆ ಹಣವನ್ನೂ ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರುಮರಗಳನ್ನು ತರತಕ್ಕ ಚೀದೋನ್ಯರು, ತೂರ್ಯರು ಇವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.


ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವದಕ್ಕೆ ಅವಕಾಶಕೊಡದೆ ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.


ನರಪುತ್ರನೇ, ತೂರು ಯೆರೂಸಲೇವಿುನ ವಿಷಯವಾಗಿ - ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿಟ್ಟಿದೆ ; ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಅಂದುಕೊಂಡದರಿಂದ


ಅಲ್ಲಿಂದ ಅದು ತಿರುಗಿಕೊಂಡು ರಾಮಾ, ತೂರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತಕ್ಕೆ ಹೋಗಿ ಸಮುದ್ರತೀರದಲ್ಲಿ ಮುಗಿಯುತ್ತದೆ.


ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದಾಗ


ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಮಂದಿ ಹೊರೆಹೊರುವವರೂ ಎಂಭತ್ತು ಸಾವಿರ ಮಂದಿ ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು