Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:12 - ಕನ್ನಡ ಸತ್ಯವೇದವು J.V. (BSI)

12 ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನಿಂದ ಹುಟ್ಟುವವನನ್ನು ನೆಲೆಗೊಳಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “‘ನಿನ್ನ ದಿನಗಳು ಮುಗಿದುಹೋಗುತ್ತವೆ; ನೀನು ನಿನ್ನ ಪೂರ್ವಿಕರ ಜೊತೆಯಲ್ಲಿ ಸೇರುತ್ತಿ. ಆ ಸಮಯದಲ್ಲಿ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ರಾಜನನ್ನಾಗಿ ಮಾಡಿ ಅವನ ರಾಜ್ಯವನ್ನು ಭದ್ರಗೊಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನ ಆಯುಷ್ಕಾಲವು ಮುಗಿದ ಮೇಲೆ ನೀನು ನಿನ್ನ ಪಿತೃಗಳ ಜೊತೆ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:12
36 ತಿಳಿವುಗಳ ಹೋಲಿಕೆ  

ಅವನು ಪ್ರವಾದಿಯಾಗಿದ್ದು - ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನೆಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿ


ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್‍ಸಿಂಹಾಸನದ ಮೇಲೆ ಅರಸನಾಗಿ ಕೂತುಕೊಂಡು ಇಸ್ರಾಯೇಲ್‍ದೇವರಾದ ಯೆಹೋವನ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿದೆನು;


ದಾವೀದನ ಅವಸಾನಕಾಲವು ಸಮೀಪಿಸಿದಾಗ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನಂದರೆ -


ದಾವೀದನಾದರೋ ತನ್ನ ಸಕಾಲದವರಿಗೆ ಸೇವೆಮಾಡಿದನಂತರ ದೈವಸಂಕಲ್ಪದಿಂದ ನಿದ್ದೆಹೋಗಿ ತನ್ನ ಪಿತೃಗಳ ಬಳಿಯಲ್ಲಿ ಇಡಲ್ಪಟ್ಟು ಕೊಳೆಯುವ ಅವಸ್ಥೆಯನ್ನು ಅನುಭವಿಸಿದನು.


ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನ ಮಕ್ಕಳಲ್ಲಿ ಒಬ್ಬನನ್ನು ಅಭಿವೃದ್ಧಿಪಡಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಯೆಹೋವನು ಮೋಶೆಗೆ - ನೀನು ಪಿತೃಗಳಲ್ಲಿ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ ದೇವದ್ರೋಹಿಗಳಾಗಿ ತಾವು ಹೋಗುವ ದೇಶದಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಯೇಸು ಸತ್ತು ಜೀವಿತನಾಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬಬೇಕಲ್ಲವೇ.


ಕೇಳಿರಿ, ಇದುವರೆಗೆ ಗುಪ್ತವಾಗಿದ್ದ ಸಂಗತಿಯನ್ನು ನಿಮಗೆ ತಿಳಿಸುತ್ತೇನೆ - ನಾವೆಲ್ಲರೂ ನಿದ್ರೆ ಹೋಗುವದಿಲ್ಲ;


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ಅವನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವದು, ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವದು, ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವದು; ಸೇನಾಧೀಶ್ವರನಾದ ಯೆಹೋವನ ಆಗ್ರಹವು ಇದನ್ನು ನೆರವೇರಿಸುವದು.


ನನ್ನ ಒಡೆಯನೂ ಅರಸನೂ ಆದ ನೀನು ಹಾಗೆ ಮಾಡದೆ ಪಿತೃಗಳ ಬಳಿಗೆ ಸೇರುವದಾದರೆ ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು ಎಂದು ಹೇಳಿದಳು.


ಧೂಳಿನ ನೆಲದೊಳಗೆ ದೀರ್ಘನಿದ್ರೆಮಾಡುವವರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನ ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಅವನ ಸಂತಾನವನ್ನು ಯಾವಾಗಲೂ ಉಳಿಸುವೆನು. ಅವನ ಸಿಂಹಾಸನವು ಆಕಾಶವಿರುವವರೆಗೂ ಇರುವದು.


ಇವನು ನಿನಗೆ ಬಾಧ್ಯಸ್ಥನಾಗುವದಿಲ್ಲ; ನಿನ್ನ ಹೊಟ್ಟೆಯಲ್ಲೇ ಹುಟ್ಟುವವನು ನಿನಗೆ ಬಾಧ್ಯಸ್ಥನಾಗುವನು ಎಂದು ಹೇಳಿ


ಯೇಸು ಕ್ರಿಸ್ತನ ವಂಶಾವಳಿಯು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.


ಆತನು ಮಹಾಪುರುಷನಾಗಿ ಪರಾತ್ಪರನ ಕುಮಾರನೆನಿಸಿಕೊಳ್ಳುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ ಎಂದು ಹೇಳಿದ್ದಾನೆ ಅಂದನು.


ಮತ್ತು ಯೆಹೋವನು - ನಿನ್ನ ಸಂತಾನದವರು ನಂಬಿಗಸ್ತರಾಗಿ ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವದರಲ್ಲಿ ಜಾಗರೂಕರಾಗಿರುವದಾದರೆ ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವರು ಎಂಬದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು.


ಯೆಹೋವನು ನನ್ನ ತಂದೆಯಾದ ದಾವೀದನಿಗೆ - ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.


ಇಸ್ರಾಯೇಲ್‍ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದದ್ದನ್ನು ಆತನ ಹಸ್ತವು ಈಗ ನೆರವೇರಿಸಿಯದೆ.


ಆದರೂ ನೀನು ಅದನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು ಎಂದು ಹೇಳಿದನು.


ಇಸ್ರಾಯೇಲ್ಯರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು; ಇಸ್ರಾಯೇಲ್‍ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕೂತುಕೊಳ್ಳುವರು ಎಂಬದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಆದರೂ ಯೆಹೋವನು ಯೆಹೂದರಾಜ್ಯವನ್ನು ನಾಶಮಾಡಲಿಲ್ಲ. ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವದಿಲ್ಲ ಎಂಬದಾಗಿ ತನ್ನ ಸೇವಕನಾದ ದಾವೀದನಿಗೆ ಮಾಡಿದ ಪ್ರಮಾಣವನ್ನು ನೆನಸಿ ಅದನ್ನು ಉಳಿಸಿದನು.


ಹೀಗಿರಲಾಗಿ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ ನುಡಿದದ್ದು ಸಾರ್ಥಕವಾಗಲಿ; ಭೂವಿುಯ ಧೂಳಿನಷ್ಟು ಅಸಂಖ್ಯವಾದ ಜನಾಂಗದ ಮೇಲೆ ನನ್ನನ್ನು ಅರಸನನ್ನಾಗಿ ನೇವಿುಸಿದ್ದೀ.


ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲ್ಯರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?


ಆದರೂ ಯೆಹೋವನು ದಾವೀದನಿಗೆ - ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವದಿಲ್ಲ ಎಂದು ಪ್ರಮಾಣಮಾಡಿ ಹೇಳಿದ್ದದರಿಂದ ದಾವೀದನ ಮನೆತನದವರನ್ನು ನಾಶಮಾಡುವದಕ್ಕೆ ಇಷ್ಟಪಡಲಿಲ್ಲ.


ಕೂಡಿಬಂದವರೆಲ್ಲರೂ ದೇವಾಲಯದಲ್ಲಿ ಅರಸನೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಯೆಹೋಯಾದನು ಅವರಿಗೆ - ಇಗೋ, ರಾಜಪುತ್ರನು! ಯೆಹೋವನು ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕನುಸಾರವಾಗಿ ಅರಸನಾಗತಕ್ಕವನು ಇವನೇ.


ಆತನು ತಾನು ನೇವಿುಸಿದ ಅರಸನಿಗೋಸ್ಕರ ವಿಶೇಷರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.


ಅನಂತರ ದಾವೀದನು ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ಆದರೂ ನೀನು ಅದನ್ನು ಕಟ್ಟಬಾರದು; ನಿನ್ನಿಂದ ಹುಟ್ಟುವ ಮಗನು ಅದನ್ನು ನನ್ನ ಹೆಸರಿನದಾಗಿ ಕಟ್ಟಬೇಕು ಎಂದು ಹೇಳಿದನು.


ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಕೈಕೊಂಡಿ; ನಿನ್ನ ಬಾಯಿ ನುಡಿದದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿತು.


ಯೆಹೋವನು ಇಂತೆನ್ನುತ್ತಾನೆ - ದಾವೀದನ ವಂಶವು ನಿಂತುಹೋಗದೆ ಆ ಸಂತಾನದವರು ಇಸ್ರಾಯೇಲ್ಯರ ಸಿಂಹಾಸನದಲ್ಲಿ ತಪ್ಪದೆ ಆಸೀನರಾಗುತ್ತಾ ಬರುವರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು