Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:18 - ಕನ್ನಡ ಸತ್ಯವೇದವು J.V. (BSI)

18 ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕೂತುಕೊಂಡು - ಕರ್ತನೇ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದೀಯಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, “ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಬಳಿಕ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ಹೇ ಸರ್ವೇಶ್ವರಾ, ಸರ್ವೇಶ್ವರಾ, ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ರಾಜನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತು, “ನನ್ನ ಒಡೆಯನಾದ ಯೆಹೋವನೇ, ನಾನೆಷ್ಟರವನು? ನನ್ನ ಕುಲ ಎಷ್ಟರದು? ನೀನು ನನ್ನನ್ನೇಕೆ ಇಷ್ಟು ಉದ್ಧರಿಸಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ಸಾರ್ವಭೌಮ ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:18
15 ತಿಳಿವುಗಳ ಹೋಲಿಕೆ  

ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?


ಅನಂತರ ಅರಸನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕೂತುಕೊಂಡು - ದೇವರೇ, ಯೆಹೋವನೇ, ನನ್ನಂಥವನಿಗೆ ನೀನು ಈ ಪದವಿಯನ್ನು ಅನುಗ್ರಹಿಸಿದಿಯೇ! ನಾನೆಷ್ಟರವನು! ನನ್ನ ಮನೆ ಎಷ್ಟರದು! ದೇವರೇ,


ಅದಕ್ಕೆ ದಾವೀದನು - ಅರಸನ ಅಳಿಯನಾಗುವದಕ್ಕೆ ನಾನೆಷ್ಟರವನು? ಇಸ್ರಾಯೇಲ್ಯರಲ್ಲಿ ನನ್ನ ಕುಲವೂ ಕುಟುಂಬವೂ ಎಷ್ಟರವು ಎಂದನು.


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಪಾತ್ರನಾಗಿದ್ದೇನೆ. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಪಾಳೆಯಗಳಿಗೆ ಒಡೆಯನಾಗಿದ್ದೇನೆ.


ಮೋಶೆ ದೇವರಿಗೆ - ಫರೋಹನ ಸನ್ನಿಧಾನಕ್ಕೆ ಹೋಗುವದಕ್ಕೂ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಕರೆದುಕೊಂಡುಬರುವದಕ್ಕೂ ನಾನು ಎಷ್ಟರವನು ಎಂದು ಹೇಳಿದನು.


ಸಮುವೇಲನು - ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಯೆಹೋವನು ನಿನಗೆ ಇಸ್ರಾಯೇಲ್ಯರಲ್ಲಿ ರಾಜ್ಯಾಭಿಷೇಕಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದಿ.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಆಗ ಗಿದ್ಯೋನನು ಆತನಿಗೆ - ಸ್ವಾಮೀ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು ಅನ್ನಲು


ಅದಕ್ಕೆ ಸೌಲನು - ನಾನು ಇಸ್ರಾಯೇಲ್ ಕುಲಗಳಲ್ಲಿ ಅಲ್ಪವಾಗಿರುವ ಬೆನ್ಯಾಮೀನ್ ಕುಲದವನಲ್ಲವೋ? ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಯಾಕೆ ಹೇಳುತ್ತೀ ಎಂದನು.


ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟು


ನಾತಾನನು ತನಗುಂಟಾದ ದರ್ಶನದ ಈ ಎಲ್ಲಾ ಮಾತುಗಳನ್ನು ದಾವೀದನಿಗೆ ಹೇಳಿದನು.


ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಿಯನ್ನೂ ಕೊಲ್ಲುವನೋ ಏನೋ ಎಂದು ನನಗೆ ಭಯವದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.


ರೂತಳು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿ - ಪರದೇಶಿಯಾದ ನನ್ನಲ್ಲಿ ಇಷ್ಟು ಕಟಾಕ್ಷವೇಕೆ ಅನ್ನಲು


ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಸ್ಥಿರವಾಗಿರುತ್ತದಲ್ಲವೋ? ಆತನು ನನ್ನೊಡನೆ ಒಡಂಬಡಿಕೆಮಾಡಿಕೊಂಡಿದ್ದಾನೆ; ಅದು ಎಂದಿಗೂ ಬಿದ್ದು ಹೋಗುವದಿಲ್ಲ, ಎಲ್ಲಾ ವಿಷಯಗಳಲ್ಲಿ ಖಂಡಿತವಾಗಿದೆ. ನನ್ನ ರಕ್ಷಣೆಯ ಮೂಲವೂ ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?


ನಾವು ಈ ಪ್ರಕಾರ ಸ್ವೇಚ್ಫೆಯಿಂದ ಕಾಣಿಕೆಗಳನ್ನು ಸಮರ್ಪಿಸಲು ಶಕ್ತಿಹೊಂದಿದ್ದಕ್ಕೆ ನಾನಾಗಲಿ ನನ್ನ ಪ್ರಜೆಗಳಾಗಲಿ ಎಷ್ಟರವರು? ಸಮಸ್ತವು ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು