Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:11 - ಕನ್ನಡ ಸತ್ಯವೇದವು J.V. (BSI)

11 ಅರಸನಾದ ದಾವೀದನು ಇವುಗಳನ್ನೂ ತನ್ನಿಂದ ಅಪಜಯಹೊಂದಿದ ಅರಾಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬೀ ಸುತ್ತಣ ಜನಾಂಗಗಳಿಂದಲೂ ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಯರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅರಸನಾದ ದಾವೀದನು ಈ ಕಾಣಿಕೆಗಳನ್ನು ಮಾತ್ರವಲ್ಲದೆ, ತನ್ನಿಂದ ಅಪಜಯಹೊಂದಿದ್ದ ಅರಾಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದಲೂ ಮತ್ತು ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದಾವೀದನು ಆ ವಸ್ತುಗಳನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದನು. ಅವನು ಅನ್ಯದೇಶಗಳನ್ನು ಸೋಲಿಸಿದ್ದಾಗ ಯೆಹೋವನಿಗೆ ಸಮರ್ಪಿಸಿದ್ದ ಬೆಳ್ಳಿ ಮತ್ತು ಚಿನ್ನಗಳೊಂದಿಗೆ ಇವುಗಳನ್ನೂ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅರಸನಾದ ದಾವೀದನು ಚಿನ್ನ, ಬೆಳ್ಳಿ ಮತ್ತು ಕಂಚಿನ ಎಲ್ಲಾ ವಸ್ತುಗಳನ್ನು ಯೆಹೋವ ದೇವರಿಗೆ ಸಮರ್ಪಿಸಿದನು. ಜೊತೆಗೆ ಅವನು ಸೋತ ಎಲ್ಲಾ ದೇಶಗಳಿಂದ ವಶಪಡಿಸಿಕೊಂಡ ವಸ್ತುಗಳನ್ನೂ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:11
8 ತಿಳಿವುಗಳ ಹೋಲಿಕೆ  

ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಮಾಡಿಸಿದನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ಚೀಯೋನ್ ನಗರಿಯೇ, ಎದ್ದು ಒಕ್ಕು; ನಾನು ನಿನ್ನ ಕೊಂಬನ್ನು ಕಬ್ಬಿಣವನ್ನಾಗಿಯೂ ನಿನ್ನ ಗೊರಸನ್ನು ತಾಮ್ರವನ್ನಾಗಿಯೂ ಮಾಡುವೆನು; ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ; ಅವುಗಳಿಂದ ಹೊಡೆದ ಕೊಳ್ಳೆಯನ್ನು ಕೇವಲ ಯೆಹೋವನದಾಗಿ ಪ್ರತ್ಯೇಕಿಸುವಿ, ಅವುಗಳ ಆಸ್ತಿಯನ್ನು ಲೋಕದ ಕರ್ತನಿಗೆ ಮೀಸಲುಮಾಡುವಿ.


ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ ಗೋಮೇಧಕ ರತ್ನ, ಕೆತ್ತುವದಕ್ಕೆ ಬೇಕಾಗುವ ರತ್ನ, ಕೆಂಪರಲು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿರಾಶಿಯಾಗಿ ಸಂಗ್ರಹಿಸಿದ್ದೇನೆ.


ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು ಮೋವಾಬ್ಯರು ಅಮ್ಮೋನಿಯರು ಫಿಲಿಷ್ಟಿಯರು ಅಮಾಲೇಕ್ಯರು ಎಂಬೀ ಸುತ್ತಣ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.


(ತೋವಿಗೂ ಹದದೆಜೆರನಿಗೂ ವಿರೋಧವಿತ್ತು.) ದಾವೀದನು ಹದದೆಜೆರನ ಮೇಲೆ ಬಿದ್ದು ಅವನನ್ನು ಸೋಲಿಸಿದದರಿಂದ ತೋವು ದಾವೀದನನ್ನು ವಂದಿಸುವದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ ಬೆಳ್ಳಿ ಬಂಗಾರದ ಪಾತ್ರೆಗಳನ್ನು ತಂದನು.


ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಮುಡುಪಾಗಿಟ್ಟ ಬೆಳ್ಳಿ ಬಂಗಾರವನ್ನೂ ಎಲ್ಲಾ ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು