Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:18 - ಕನ್ನಡ ಸತ್ಯವೇದವು J.V. (BSI)

18 ಸೆರಾಯನು ಲೇಖಕನು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಸಮಾಲೋಚಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:18
18 ತಿಳಿವುಗಳ ಹೋಲಿಕೆ  

ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣಪ್ರಾಂತವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು ಎಂದು ಉತ್ತರಕೊಟ್ಟನು.


ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.


ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾಪತಿ; ಯೆಹೋಯಾದಾವನ ಮಗನಾದ ಬೆನಾಯಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.


ಆಗ ಅವನು ಯೋವಾಬನ ಸೈನಿಕರನ್ನೂ ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳನ್ನೂ ಎಲ್ಲಾ ಶೂರರನ್ನೂ ಕರಕೊಂಡು ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವದಕ್ಕೋಸ್ಕರ ಯೆರೂಸಲೇವಿುನಿಂದ ಹೊರಟನು.


ದಾವೀದನ ಎಲ್ಲಾ ಸೇವಕರೂ ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳೂ ಗತ್ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಮಂದಿ ಗಿತ್ತೀಯರೂ ಅರಸನ ಮುಂದೆ ಹೋದರು.


ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರನ್ನೂ ಕೆರೇತ್ಯ ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರ ಕತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.


ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬವರು ಕೆರೇತ್ಯ ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿ ಗೀಹೋನಿಗೆ ಕರಕೊಂಡು ಹೋದರು.


ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;


ಯೆಹೋಯಾದಾವನ ಮಗನಾದ ಬೆನಾಯನು ಸೇನಾಪತಿ; ಎಬ್ಯಾತಾರ ಚಾದೋಕರು ಯಾಜಕರು;


ಯಾಯೀರಿನವನಾದ ಈರನೂ ದಾವೀದನ ಯಾಜಕನು.


ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ಭಟರೂ ಅವನ ಪಕ್ಷದಲ್ಲಿರಲಿಲ್ಲ.


ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದದರಿಂದ ಅವನು ಹೋಗಿ ಅವನನ್ನು ಹೊಡೆದು ಕೊಂದುಹಾಕಿದನು.


ಅನೇಕ ಶೂರಕೃತ್ಯಗಳನ್ನು ನಡಿಸಿದ ಕಬ್ಜಯೇಲಿನವನಾದ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.


ನಾತಾನನ ಮಗನಾದ ಅಜರ್ಯನು ಪ್ರದೇಶಾಧಿಪತಿಗಳ ಮುಖ್ಯಸ್ಥನು; ನಾತಾನನ ಮಗನಾದ ಜಾಬೂದನು ಯಾಜಕನೂ ಅರಸನ ವಿುತ್ರನೂ ಆಗಿದ್ದನು;


ಏಳನೆಯ ವರುಷದಲ್ಲಿ ಯೆಹೋಯಾದಾವನು ಕಾರಿ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡನಂತರ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು