Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:2 - ಕನ್ನಡ ಸತ್ಯವೇದವು J.V. (BSI)

2 ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಆಜ್ಞೆಕೊಟ್ಟು ಮೇಲಣ ಲೋಕವನ್ನೇರಿದ ದಿನದವರೆಗೆ ವಿವರಿಸಿದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಯೇಸುವಿನ ಇಡೀ ಜೀವಮಾನದ ಬಗ್ಗೆ ಅಂದರೆ ಆತನು ಪರಲೋಕಕ್ಕೆ ಏರಿಹೋಗುವವರೆಗೆ ನಡೆದ ಸಂಗತಿಗಳನ್ನು ಬರೆದೆನು. ಯೇಸು ಪರಲೋಕಕ್ಕೆ ಎತ್ತಲ್ಪಡುವದಕ್ಕಿಂತ ಮೊದಲು, ತಾನು ಆರಿಸಿಕೊಂಡಿದ್ದ ಅಪೊಸ್ತಲರೊಂದಿಗೆ ಮಾತಾಡಿದನು; ಅವರು ಮಾಡಬೇಕಾದದ್ದನ್ನು ಪವಿತ್ರಾತ್ಮನ ಸಹಾಯದಿಂದ ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಂದರೆ, ಯೇಸು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮ ದೇವರ ಮುಖಾಂತರ ಆಜ್ಞಾಪಿಸಿದ ದಿನ ಮೊದಲುಗೊಂಡು ಸ್ವರ್ಗಕ್ಕೆ ಏರಿಹೋಗುವ ದಿನದವರೆಗೆ ಮಾಡಿದ್ದೆಲ್ಲವನ್ನೂ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಸರ್ಗಾರ್ ತೆಕಾ ಘೆವ್ನ್ ಗೆಲ್ಲ್ಯಾ ದಿಸಾ ಪತರ್, ಅನಿ ಅಪ್ನಾಚಿ ಅಪೊಸ್ತಲಾ ಮನುನ್ ಎಚುನ್ ಕಾಡಲ್ಲ್ಯಾಕ್ನಿ ಪವಿತ್ರ್ ಆತ್ಮ್ಯಾಚ್ಯಾ ಬಳಾ ವೈನಾ ತೆನಿ ಶಿಕ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:2
50 ತಿಳಿವುಗಳ ಹೋಲಿಕೆ  

ಈ ಮಾತುಗಳನ್ನು ಹೇಳಿದ ಬಳಿಕ ಅವರು ನೋಡುತ್ತಾ ಇದ್ದ ಹಾಗೆ ಆತನು ಏರಿಸಲ್ಪಟ್ಟನು; ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರ ಕಣ್ಣಿಗೆ ಮರೆಯಾದನು.


ಯಾಕಂದರೆ ಕ್ರಿಸ್ತನು ನಿಜವಾದ ದೇವಾಲಯಕ್ಕೆ ಅನುರೂಪ ಮಾತ್ರವಾದದ್ದಾಗಿಯೂ ಕೈಯಿಂದ ಕಟ್ಟಿದ್ದಾಗಿಯೂ ಇರುವ ಆಲಯದಲ್ಲಿ ಪ್ರವೇಶಿಸದೆ ದೇವರ ಸಮ್ಮುಖದಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವದಕ್ಕೆ ಪರಲೋಕದಲ್ಲಿಯೇ ಪ್ರವೇಶಿಸಿದನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಯೇಸು ಅವರಿಗೆ - ನಿಮಗೆ ಸಮಾಧಾನವಾಗಲಿ ಎಂದು ತಿರಿಗಿ ಹೇಳಿ - ತಂದೆ ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ ಅಂದನು.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ; ನಾನು ಆದುಕೊಂಡವರನ್ನು ನಾನು ಬಲ್ಲೆನು; ಆದರೆ - ನನ್ನ ಕೂಡ ಊಟಮಾಡುವವನೇ ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ಯೇಸು ತನ್ನ ಕೈಯಲ್ಲಿ ತಂದೆ ಎಲ್ಲವನ್ನು ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟುಬಂದಿದ್ದು ಮತ್ತೆ ದೇವರ ಬಳಿಗೆ ಹೋಗುತ್ತೇನೆಂತಲೂ ತಿಳುಕೊಂಡವನಾಗಿ ಊಟವನ್ನು ಬಿಟ್ಟು ಎದ್ದು


ನನ್ನ ಬಳಿಗೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, [ಭೂವಿುಯು] ಉಂಟಾದಂದಿನಿಂದ ಅಲ್ಲಿ ಇದ್ದೇನೆ. (ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ.)


ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಯಜ್ಞದ ಕುರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ನೀನು ಬೆಚ್ಚಗೂ ಇಲ್ಲದೆ ತಣ್ಣಗೂ ಇಲ್ಲದೆ ಉಗುರುಬೆಚ್ಚಗಿರುವದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಕಾರುವೆನು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಯೇಸು ಕ್ರಿಸ್ತನ ಪ್ರಕಟನೆಯು. ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ಸೂಚಿಸಿದನು.


ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ಕರ್ತನಾದ ರಕ್ಷಕನು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ಜ್ಞಾಪಕಮಾಡಿಕೊಳ್ಳಬೇಕೆಂದು ಈ ಎರಡು ಪತ್ರಿಕೆಗಳಲ್ಲಿಯೂ ಜ್ಞಾಪಕಕೊಟ್ಟು ನಿಮ್ಮ ಸರಳ ಮನಸ್ಸನ್ನು ಪ್ರೇರಿಸಿದ್ದೇನೆ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ.


ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲೋದ್ಯೋಗವನ್ನು ಹೊಂದಿದ ಪೌಲನೆಂಬ ನಾನೂ


ಅವರು ಅಲ್ಲಿಗೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿಗೆ ಹೋದರು; ಯಾರಾರಂದರೆ - ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, ಯಾಕೋಬನ ಯೂದ, ಇವರೇ.


ಗಲಿಲಾಯದವರೇ, ನೀವು ಯಾಕೆ ಆಕಾಶದ ಕಡೆಗೆ ನೋಡುತ್ತಾ ನಿಂತಿದ್ದೀರಿ? ನಿಮ್ಮ ಬಳಿಯಿಂದ ಆಕಾಶದೊಳಕ್ಕೆ ಸೇರಿಸಲ್ಪಟ್ಟಿರುವ ಈ ಯೇಸು ಯಾವ ರೀತಿಯಲ್ಲಿ ಆಕಾಶದೊಳಕ್ಕೆ ಹೋಗಿರುವದನ್ನು ನೀವು ಕಂಡಿರೋ ಅದೇ ರೀತಿಯಲ್ಲಿ ಬರುವನು ಎಂದು ಹೇಳಿದರು.


ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.


ಆದರೆ ಈಗ ನಿನ್ನ ಬಳಿಗೆ ಬರುವವನಾಗಿದ್ದೇನೆ; ಆದದರಿಂದ ಇವರಲ್ಲಿ ನನ್ನ ಆನಂದವು ಪರಿಪೂರ್ಣವಾಗಿರುವಂತೆ ಲೋಕದಲ್ಲಿದ್ದು ಈ ಮಾತುಗಳನ್ನು ಆಡುತ್ತೇನೆ.


ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ಇನ್ನು ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.


ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ಅದಕ್ಕೆ ಯೇಸು - ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೋ? ನಿಮ್ಮಲ್ಲಿಯೂ ಒಬ್ಬನು ಸೈತಾನನ ಮಗನಾಗಿದ್ದಾನೆ ಅಂದನು.


ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ನಾವೆಲ್ಲರು ಆತನ ಪರಿಪೂರ್ಣತೆಯೊಳಗಿಂದ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು [ಪರಲೋಕಕ್ಕೆ ಒಯ್ಯಲ್ಪಟ್ಟನು].


ಯೇಸು ತಾನು ಪರಲೋಕವನ್ನೇರುವ ದಿವಸಗಳು ತುಂಬುತ್ತಾ ಬರುವಾಗ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸನ್ನು ದೃಢಮಾಡಿಕೊಂಡು


ಇತ್ತಲಾಗಿ ಅಪೊಸ್ತಲರು ಆತನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಎಲ್ಲಾ ಆತನಿಗೆ ತಿಳಿಸಲು ಆತನು ಅವರಿಗೆ -


ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವದಾದರೆ ದೇವರ ರಾಜ್ಯವು ನಿಮ್ಮ ಹತ್ತರಕ್ಕೆ ಬಂತಲ್ಲಾ.


ಯೇಸು ಸ್ನಾನಮಾಡಿಸಿಕೊಂಡ ಕೂಡಲೆ ನೀರಿನಿಂದ ಮೇಲಕ್ಕೆ ಬರಲು ಇಗೋ, ಆತನಿಗೆ ಆಕಾಶವು ತೆರೆಯಿತು; ಮತ್ತು ದೇವರ ಆತ್ಮ ಪಾರಿವಾಳದ ಹಾಗೆ ಇಳಿದು ತನ್ನ ಮೇಲೆ ಬರುವದನ್ನು ಕಂಡನು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು