Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:8 - ಕನ್ನಡ ಸತ್ಯವೇದವು J.V. (BSI)

8 ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲಹೊಂದಿ ಜೆರುಸಲೇಮಿನಲ್ಲಿಯೂ ಇಡೀ ಜುದೇಯದಲ್ಲಿಯೂ ಸಮಾರ್ಯದಲ್ಲಿಯೂ ಮತ್ತು ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಪವಿತ್ರ್ ಆತ್ಮೊ ತುಮ್ಚ್ಯಾ ವರ್‍ತಿ ಯೆತಾ ತನ್ನಾ ತುಮ್ಕಾ ಬಳ್ ಗಾವ್ತಾ. ಮಾನಾ ಜೆರುಜಲೆಮಾಕ್ ,ಸಗ್ಳ್ಯಾ ಜುದೆಯ್ ಪ್ರಾಂತ್ಯಾತ್ ಅನಿ ಸಮರ್ಯಾತ್‍ ಅನಿ ಜಗಾಚ್ಯಾ ಆಕ್ರಿ ಪತರ್ಬಿ ತುಮಿ ಮಾಕಾ ಸಾಕ್ಷಿ ಹೊವ್ನ್ ರ್‍ಹಾತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:8
34 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ಆಮೇಲೆ ಅವರಿಗೆ - ನೀವು ಲೋಕದ ಎಲ್ಲಾ ಕಡೆಗೆ ಹೋಗಿ ಜಗತ್ತಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಪರ್ಯಂತರಕ್ಕೂ ಸುತ್ತಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ನೆರವೇರಿಸಿದ್ದೇನೆ.


ಈ ಕಾರ್ಯಗಳಿಗೆ ನಾವು ಸಾಕ್ಷಿ; ದೇವರು ತನಗೆ ವಿಧೇಯರಾಗಿರುವವರಿಗೆ ದಯಪಾಲಿಸಿರುವ ಪವಿತ್ರಾತ್ಮನೂ ಸಾಕ್ಷಿ ಎಂದು ಹೇಳಿದರು.


ಮತ್ತು ಕರ್ತನಾದ ಯೇಸು ಜೀವಂತನಾಗಿ ಎದ್ದುಬಂದನೆಂಬದಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು. ಬಹಳ ದಯವು ಅವರೆಲ್ಲರ ಮೇಲೆ ಇತ್ತು.


ಸ್ತೆಫನನು ದೇವರ ಕೃಪೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.


ಆದರೂ ಅವರ ಕಿವಿಗೆ ಬೀಳಲಿಲ್ಲವೇನು ಎಂದು ಕೇಳುತ್ತೇನೆ. ಬಿದ್ದದ್ದು ನಿಶ್ಚಯ. ಸಾರುವವರ ಧ್ವನಿಯು ಭೂವಿುಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.


ನೀವು ಮೊದಲಿನಿಂದ ನನ್ನ ಸಂಗಡ ಇದ್ದ ಕಾರಣ ನೀವೂ ಸಾಕ್ಷಿಗಳಾಗಿದ್ದೀರಿ.


ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವದೂ ನಿಮಗೆ ಕೇಡುಮಾಡುವದೇ ಇಲ್ಲ.


ಇದಲ್ಲದೆ ಪರಲೋಕರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲಾಗುವದು; ಆಗ ಅಂತ್ಯವು ಬರುವದು.


ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ


ನೀನು ಕಂಡು ಕೇಳಿದ್ದರ ವಿಷಯದಲ್ಲಿ ಎಲ್ಲಾ ಮನುಷ್ಯರ ಮುಂದೆ ಆತನಿಗೆ ಸಾಕ್ಷಿಯಾಗಿರಬೇಕು.


ನಾನಾದರೋ ಯೆಹೋವನ ಆತ್ಮಾವೇಶದಿಂದ ಬಲಪರಾಕ್ರಮನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ಭೂಮಂಡಲದವರೆಲ್ಲರು ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; [ಯೆಹೋವನೇ,] ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಮತ್ತು ಆತನು ಗಲಿಲಾಯದಿಂದ ಯೆರೂಸಲೇವಿುಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರಿಯಂತರ ಕಾಣಿಸಿಕೊಂಡನು. ಅವರು ಈಗ ಜನರ ಮುಂದೆ ಆತನಿಗೆ ಸಾಕ್ಷಿಗಳಾಗಿದ್ದಾರೆ.


ನಿನ್ನ ಮೇಲೆ ಪವಿತ್ರಾತ್ಮ ಬರುವದು; ಪರಾತ್ಪರನ ಶಕ್ತಿಯ ನೆರಳು ನಿನ್ನ ಮೇಲೆ ಬೀಳುವದು; ಆದದರಿಂದ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವದು.


ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು; ಈ ವಿಷಯದಲ್ಲಿ ನಾವೇ ಸಾಕ್ಷಿಗಳು.


ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ; ಭೂವಿುಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಕಾರ್ಯವನ್ನು ನೋಡುವರು.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪ ನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ಆತನೇ ಈಗ ಹೀಗನ್ನುತ್ತಾನೆ - ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪಕಾರ್ಯವೇ ಸರಿ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.


ಇದನ್ನು ಹೇಳಿ ನಿದ್ರೆಹೋದನು. ಸೌಲನು ಅವನ ಕೊಲೆಗೆ ಸಮ್ಮತಿಸುವವನಾಗಿದ್ದನು. ಆ ದಿವಸದಲ್ಲಿ ಯೆರೂಸಲೇವಿುನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರು ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.


ಸಮುದ್ರಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನಗೀತವನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.


ಆತನು ಇಸ್ರಾಯೇಲನ ಮನೆತನದವರ ಕಡೆಗಿದ್ದ ತನ್ನ ಪ್ರೀತಿಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ ನಮ್ಮ ದೇವರ ರಕ್ಷಾಕಾರ್ಯವನ್ನು ನೋಡಿದ್ದಾರೆ.


ಆದರೆ ಅವರು - ನಮ್ಮ ಸಂಗಡ ಇರು, ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂತು ಎಂದು ಆತನಿಗೆ ಹೇಳಿ ಬಲವಂತಮಾಡಲು ಆತನು ಅವರ ಕೂಡ ಇರುವದಕ್ಕೆ ಊರೊಳಕ್ಕೆ ಹೋದನು.


(ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು