Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:38 - ಕನ್ನಡ ಸತ್ಯವೇದವು J.V. (BSI)

38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ನಜರೆತಾಚ್ಯಾ ಜೆಜುಚ್ಯಾ ವಿಶಯಾತ್ ತುಮ್ಕಾ ಗೊತ್ತ್ ಹಾಯ್, ದೆವಾನ್ ತೆಕಾ ಪವಿತ್ರ್ ಆತ್ಮೊ ಅನಿ ಬಳ್ ದಿವ್ನ್ ಅಭಿಶೆಕ್ ಕರ್‍ಲ್ಯಾನ್, ತೆನಿ ಸಗ್ಳ್ಯಾಕ್ಡೆ ಲೊಕಾಕ್ನಿ ಬರೆ ಕರ್‍ಲ್ಯಾನ್, ಅನಿ ಮ್ಹಾರು ಧರಲ್ಯಾಕ್ನಿ ಜೆಜುನ್ ಗುನ್ ಕರ್‍ಲ್ಯಾನ್, ಕಶ್ಯಾಕ್ ಮಟ್ಲ್ಯಾರ್, ಜೆಜುಚ್ಯಾ ವಾಂಗ್ಡಾ ದೆವ್ ಹಾಯ್ ಮನ್ತಲೆ ಹೆಚ್ಯಾ ವೈನಾ ದಿಸುನ್ ಯೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:38
40 ತಿಳಿವುಗಳ ಹೋಲಿಕೆ  

ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಲಾಲಿಸಿರಿ - ನಜರೇತಿನ ಯೇಸು ಇದ್ದನಲ್ಲಾ, ದೇವರು ನಿಮಗೂ ತಿಳಿದಿರುವಂತೆ ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ಆ ಅಂಕುರದ ಮೇಲೆ ಜ್ಞಾನವಿವೇಕದಾಯಕ ಆತ್ಮ, ಆಲೋಚನಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆಯನ್ನೂ ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವದು;


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ ಎಂತಲೂ


ನೀನು ಧರ್ಮವನ್ನು ಪ್ರೀತಿಸಿದಿ, ಅಧರ್ಮವನ್ನು ದ್ವೇಷಿಸಿದಿ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಉನ್ನತಸ್ಥಾನಕ್ಕೆ ಏರಿಸಿ ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ - ಗುರುವೇ, ನೀನು ದೇವರ ಕಡೆಯಿಂದ ಬಂದ ಬೋಧಕನೆಂದು ಬಲ್ಲೆವು. ನೀನು ಮಾಡುವಂಥ ಈ ಸೂಚಕಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವದು ಯಾರಿಂದಲೂ ಆಗದು ಎಂದು ಹೇಳಿದನು.


ನಾನು ದೇವರ ಆತ್ಮನ ಬಲದಿಂದಲೇ ದೆವ್ವಗಳನ್ನು ಬಿಡಿಸುವದಾದರೆ ದೇವರ ರಾಜ್ಯವು ನಿಮ್ಮ ಹತ್ತರಕ್ಕೆ ಬಂತಲ್ಲಾ.


ಮತ್ತು ಪವಿತ್ರಾತ್ಮನು ದೇಹಾಕಾರವಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ - ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ; ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ; ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರ ಪಡಿಸುವನು.


ಯೇಸು ಅವರನ್ನು - ತಂದೆಯ ಕಡೆಯಿಂದ ಅನೇಕ ಒಳ್ಳೇ ಕ್ರಿಯೆಗಳನ್ನು ನಿಮಗೆ ತೋರಿಸಿದೆನು; ಅವುಗಳಲ್ಲಿ ಯಾವ ಕ್ರಿಯೆಯ ದೆಸೆಯಿಂದ ನನ್ನ ಮೇಲೆ ಕಲ್ಲೆಸೆಯುತ್ತೀರಿ ಎಂದು ಕೇಳಿದ್ದಕ್ಕೆ


ನೋಡಿರಿ, ನಿಮ್ಮಲ್ಲಿ ಒಬ್ಬೊಬ್ಬನು ತನ್ನತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಕಾಲ ಬರುವದು, ಈಗ ಬಂದಿದೆ. ಆದರೆ ನಾನು ಒಂಟಿಗನಲ್ಲ, ತಂದೆಯು ನನ್ನ ಸಂಗಡ ಇದ್ದಾನೆ.


ಯೆಹೋವನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತಿದ್ದಾರೆ, ಅಧಿಕಾರಿಗಳು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ.


ಪಾಪಮಾಡುವವನು ಸೈತಾನನಿಂದ ಹುಟ್ಟಿದವನಾಗಿದ್ದಾನೆ; ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನಲ್ಲಾ. ಸೈತಾನನ ಕೆಲಸಗಳನ್ನು ಲಯ ಮಾಡುವದಕ್ಕೋಸ್ಕರವೇ ದೇವಕುಮಾರನು ಪ್ರತ್ಯಕ್ಷನಾದನು.


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ಯೇಸು ಎಲ್ಲಾ ಊರುಗಳನ್ನೂ ಹಳ್ಳಿಪಳ್ಳಿಗಳನ್ನೂ ಸುತ್ತಿಕೊಂಡು ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಇವರು ಯೆಹೋವಧರ್ಮಶಾಸ್ತ್ರವನ್ನು ತೆಗೆದುಕೊಂಡು ಯೆಹೂದ ದೇಶದಲ್ಲೆಲ್ಲಾ ಸಂಚಾರಮಾಡಿ ಜನರಿಗೆ ಬೋಧಿಸಿದರು.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಆ ಹುಡುಗನು ಇನ್ನೂ ಬರುತ್ತಿರುವಾಗ ಆ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ಬಹಳವಾಗಿ ಒದ್ದಾಡಿಸಿತು. ಆದರೆ ಯೇಸು ಆ ದೆವ್ವವನ್ನು ಗದರಿಸಿ ಆ ಹುಡುಗನಿಗೆ ವಾಸಿಮಾಡಿ ಅವನ ತಂದೆಯ ಕೈಗೆ ಕೊಟ್ಟನು.


ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟುಹೋದನು.


ಕೋಪಾವೇಶದಿಂದ ಅವರನ್ನು ಕಳವಳಗೊಳಿಸುವನು.


ಅವರು ತನ್ನನ್ನು ನಂಬದೆ ಹೋದದ್ದಕ್ಕೆ ಆತನು ಆಶ್ಚರ್ಯಪಟ್ಟನು.


ಆಗ ಅವರೆಲ್ಲರು ಬೇರೆ ಹಳ್ಳಿಗೆ ಹೋದರು.


ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಯೋಹಾನನು ಸಾರಿದ ತರುವಾಯ ಈ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿತು.


ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ಎಲ್ಲರೂ ತಿಳಿದವರಾಗಿದ್ದೀರಿ.


ಯೇಸು ಎದ್ದು ತನ್ನ ಶಿಷ್ಯರನ್ನು ಕರಕೊಂಡು ಅವನ ಹಿಂದೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು