Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:39 - ಕನ್ನಡ ಸತ್ಯವೇದವು J.V. (BSI)

39 ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅವರು ಯೆಹೂದ್ಯರ ಹಳ್ಳಿಪಳ್ಳಿಗಳಲ್ಲೂ ಜೆರುಸಲೇಮಿನಲ್ಲೂ ಎಸಗಿದ ಸಕಲ ಕಾರ್ಯಗಳಿಗೆ ನಾವು ಸಾಕ್ಷಿಗಳು. ಯೆಹೂದ್ಯರು ಆ ಯೇಸುವನ್ನು ಶಿಲುಬೆಮರಕ್ಕೆ ನೇತುಹಾಕಿ ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ಜುದೇಯದಲ್ಲಿ ಮತ್ತು ಜೆರುಸಲೇಮಿನಲ್ಲಿ ಯೇಸು ಮಾಡಿದ ಎಲ್ಲಾ ಕಾರ್ಯಗಳನ್ನು ನಾವು ನೋಡಿದೆವು. ಆ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. ಆದರೆ ಯೇಸು ಕೊಲ್ಲಲ್ಪಟ್ಟನು. ಅವರು ಆತನನ್ನು ಮರದ ಶಿಲುಬೆಗೆ ಏರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ಯೆಹೂದ್ಯರ ನಾಡಿನಲ್ಲಿ ಮತ್ತು ಯೆರೂಸಲೇಮ ಪಟ್ಟಣದಲ್ಲಿಯೂ ಯೇಸು ಮಾಡಿದ ಪ್ರತಿಯೊಂದಕ್ಕೂ ನಾವು ಸಾಕ್ಷಿಗಳು. ಮರದ ಕಂಬಕ್ಕೆ ತೂಗುಹಾಕಿ ಯೇಸುವನ್ನು ನಾಯಕರು ಕೊಂದುಹಾಕಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಇಸ್ರಾಯೆಲಾಂಚ್ಯಾ ದೆಶ್ಯಾತ್ ಅನಿ ಜೆರುಜಲೆಮಾತ್ ಜೆಜುನ್ ಕರಲ್ಲಿ ಸಗ್ಳಿ ಕಾಮಾ ಅಮಿ ಬಗಟ್ಲಾಂವ್, ತ್ಯಾ ಸಗ್ಳ್ಯಾ ಕಾಮಾಕ್ನಿ ಅಮಿ ಸಾಕ್ಷಿ ಹೊವ್ನ್ ಹಾತ್, ಖರೆ ಜೆಜುಕ್ ಜಿವ್ ಕಾಡುನ್ ಹೊಲೆ ತೆನಿ ತೆಕಾ ಕುರ್ಸಾರ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:39
16 ತಿಳಿವುಗಳ ಹೋಲಿಕೆ  

ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ.


ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಪ್ರತ್ಯಕ್ಷನಾಗುವಂತೆ ಮಾಡಿದನು; ಆತನು ಎಲ್ಲರಿಗೆ ಪ್ರತ್ಯಕ್ಷನಾಗದೆ ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಅನ್ನಪಾನಗಳನ್ನು ತಕ್ಕೊಂಡೆವು.


ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಮರಣದ ಕಂಬವನ್ನು ಏರಿದನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.


ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ಮತ್ತು ಆತನು ಗಲಿಲಾಯದಿಂದ ಯೆರೂಸಲೇವಿುಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿವಸಗಳ ಪರಿಯಂತರ ಕಾಣಿಸಿಕೊಂಡನು. ಅವರು ಈಗ ಜನರ ಮುಂದೆ ಆತನಿಗೆ ಸಾಕ್ಷಿಗಳಾಗಿದ್ದಾರೆ.


ಪ್ರವಾದಿಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿ ಸ್ವರೂಪನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.


ನಿಮ್ಮೆಲ್ಲರಿಗೂ ಇಸ್ರಾಯೇಲ್ ಜನರೆಲ್ಲರಿಗೂ ತಿಳಿಯಬೇಕಾದದ್ದೇನಂದರೆ - ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ನಿಮ್ಮೆದುರಿನಲ್ಲಿ ಸ್ವಸ್ಥನಾಗಿ ನಿಂತಿರುತ್ತಾನೆ.


ನೀವು ಮೊದಲಿನಿಂದ ನನ್ನ ಸಂಗಡ ಇದ್ದ ಕಾರಣ ನೀವೂ ಸಾಕ್ಷಿಗಳಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು