Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:21 - ಕನ್ನಡ ಸತ್ಯವೇದವು J.V. (BSI)

21 ಕರ್ತನ ಹಸ್ತವು ಅವರಿಗೆ ಸಹಾಯವಾದ್ದರಿಂದ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪ್ರಭುವಿನ ಶಕ್ತಿ ಅವರೊಡನೆ ಇತ್ತು. ಜನರು ಬಹುಸಂಖ್ಯೆಯಲ್ಲಿ ಪ್ರಭುವಿನಲ್ಲಿ ವಿಶ್ವಾಸವಿಟ್ಟು ಅವರ ಭಕ್ತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪ್ರಭುವು ವಿಶ್ವಾಸಿಗಳಿಗೆ ಸಹಾಯ ಮಾಡುತ್ತಿದ್ದನು. ಜನರು ಬಹು ಸಂಖ್ಯೆಯಲ್ಲಿ ಪ್ರಭುವನ್ನು ನಂಬಿಕೊಂಡು ಅನುಸರಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕರ್ತ ಯೇಸುವಿನ ಹಸ್ತವು ಅವರೊಂದಿಗಿತ್ತು ಬಹಳಷ್ಟು ಜನರು ನಂಬಿ ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಧನಿ ದೆವಾಚ್ಯಾ ಲೊಕಾಕ್ನಿ ಮಜ್ಜತ್ ಕರಿತ್ ಹೊತ್ತೊ, ಲೈ ಲೊಕಾ ಧನಿಯಾಚೆರ್ ವಿಶ್ವಾಸ್ ಥವ್ನ್ ತೆಚ್ಯಾ ಸಾರ್ಕೆಚ್ ಚಾಲ್ವುನ್ ಘೆವ್ನ್ ಜಾವ್ಕ್ ಲಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:21
19 ತಿಳಿವುಗಳ ಹೋಲಿಕೆ  

ದೇವರನ್ನು ಕೊಂಡಾಡುವವರಾಗಿಯೂ ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ದಿನಾಲು ಅವರ ಮಂಡಲಿಗೆ ಸೇರಿಸುತ್ತಿದ್ದನು.


ಕೇಳಿದವರೆಲ್ಲರೂ - ಆಹಾ, ಈ ಕೂಸು ಎಂಥವನಾಗುವನೋ ಎಂದು ಈ ಸಂಗತಿಗಳನ್ನು ಮನಸ್ಸಿನಲ್ಲಿಟ್ಟುಕೊಂಡರು ಮತ್ತು ಕರ್ತನ ಹಸ್ತವು ಅದರ ಮೇಲೆ ಇತ್ತು.


ನಾವು ಸಾರಿದ ಸುವಾರ್ತೆಯು ನಿಮ್ಮಲ್ಲಿ ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಬಹು ನಿಶ್ಚಯದೊಡನೆಯೂ ಬಂತೆಂಬದನ್ನೂ ಬಲ್ಲೆವು. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ಬಲ್ಲಿರಿ.


ಮತ್ತು ಲುದ್ದದಲ್ಲಿಯೂ ಸಾರೋನಪ್ರಾಂತ್ಯದಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿದರು, ಮತ್ತು ಅವರು ಕರ್ತನ ಕಡೆಗೆ ತಿರುಗಿಕೊಂಡರು.


ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತೆ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.


ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.


ಮತ್ತು ಇನ್ನು ಎಷ್ಟೋ ಮಂದಿ ಗಂಡಸರೂ ಹೆಂಗಸರೂ ಕರ್ತನಲ್ಲಿ ನಂಬಿಕೆಯಿಡುವವರಾಗಿ ಅವರ ಮಂಡಲಿಯಲ್ಲಿ ಸೇರಿಕೊಳ್ಳುತ್ತಿದ್ದರು.


ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದುಸಾವಿರ ತನಕ ಬೆಳೆಯಿತು.


ನಾವು ಕೇಳಿದ ಸಂಗತಿಯನ್ನು [ನಮ್ಮಲ್ಲಿ] ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?


ಇದಲ್ಲದೆ ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು - ಬನ್ನಿರಿ, ಕಟ್ಟೋಣ ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.


ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೂ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಬೇಕು ಎಂದು ಬಿನ್ನವಿಸಲು ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದದ್ದರಿಂದ


ನಮ್ಮ ದೇವರ ಕೃಪಾಹಸ್ತಪಾಲನೆಯು ನಮಗೆ ದೊರಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಮಂದಿಯನ್ನೂ ಮೆರಾರೀಯರಲ್ಲಿ ಹಷಬ್ಯನನ್ನೂ


ಅವನು ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬಾಬೆಲಿನಿಂದ ಹೊರಟನು; ತನ್ನ ದೇವರ ಕೃಪಾಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇವಿುಗೆ ಸೇರಿದನು.


ಯೆಹೂದ್ಯರಾದರೋ ದೇವರ ಕೃಪಾಹಸ್ತ ಪ್ರೇರಣೆಯಿಂದ ಏಕಮನಸ್ಸುಳ್ಳವರಾಗಿ ಯೆಹೋವನ ಧರ್ಮಶಾಸ್ತ್ರನುಸಾರ ಅರಸನಿಂದಲೂ ಪ್ರಭುಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಹೀಗಿರಲಾಗಿ ನನ್ನ ಅಭಿಪ್ರಾಯ ಏನಂದರೆ - ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು