Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:26 - ಕನ್ನಡ ಸತ್ಯವೇದವು J.V. (BSI)

26 ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅಲ್ಲಿ ಸೌಲನನ್ನು ಭೇಟಿಯಾಗಿ, ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅನಂತರ ಇಡೀ ಒಂದು ವರ್ಷಕಾಲ ಬಾರ್ನಬನು, ಸೌಲನು ಅಲ್ಲಿ ಸಭೆಯವರೊಂದಿಗೆ ಇದ್ದುಕೊಂಡು ಬಹಳ ಜನರಿಗೆ ಬೋಧನೆ ಮಾಡಿದರು. ಶಿಷ್ಯರಿಗೆ ಪ್ರಥಮ ಬಾರಿ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲಿಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಬಾಬಾನ್ ಥೈ ಸಾವ್ಲಾಕ್ ಹುಡ್ಕುನ್ ಕಾಡುನ್ ಅಪ್ಲ್ಯಾ ವಾಂಗ್ಡಾ ತೆಕಾ ಅಂತಿಯೊಕಾಕ್ ಬಲ್ವುನ್ ಹಾಡ್ಲ್ಯಾನ್, ತೆನಿ ದೊಗೆಬಿ ಅಂತಿಯೊಕ್ಯಾತ್ ಎಕ್ ವರ್ಸ್ ಪುರಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಮೊಗಾನ್ ರಾವ್ನ್ ಲೈ ಲೊಕಾಕ್ನಿ ಶಿಕಾಪಾ ಕರ್‍ಲ್ಯಾನಿ, ಜೆಜುಚ್ಯಾ ಗೊಸ್ಟಿಯಾಂಚ್ಯಾ ಸಾರ್ಕೆ ಚಲ್ತಲ್ಯಾ ಲೊಕಾಕ್ನಿ ಕ್ರಿಸ್ತಾಂವಾ ಮನ್ತಲೆ ನಾವ್ ಯೆಲ್ಲೆ ಅಂತಿಯೊಕ್ಯಾತುಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:26
34 ತಿಳಿವುಗಳ ಹೋಲಿಕೆ  

ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.


ಅದಕ್ಕೆ ಅಗ್ರಿಪ್ಪನು - ಅಲ್ಪಪ್ರಯತ್ನದಿಂದ ನನ್ನನ್ನು ಕ್ರೈಸ್ತನಾಗುವದಕ್ಕೆ ಒಡಂಬಡಿಸುತ್ತೀಯಾ? ಎಂದು ಹೇಳಲು


ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶ ಮಾಡುವದು ಅವಶ್ಯವಿಲ್ಲ. ಆತನು ಮಾಡಿದ ಅಭಿಷೇಕವು ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥದಾಗಿದ್ದು ಸತ್ಯವಾಗಿದೆ, ಸುಳ್ಳಲ್ಲ. ಅದು ನಿಮಗೆ ಉಪದೇಶ ಮಾಡಿದ ಪ್ರಕಾರ ಆತನಲ್ಲಿ ನೆಲೆಗೊಂಡಿರ್ರಿ.


ನೀವು ಕ್ರಿಸ್ತನ ಹೆಸರಿನ ನಿವಿುತ್ತ ನಿಂದೆಗೆ ಗುರಿಯಾದರೆ ಧನ್ಯರೇ; ತೇಜೋಮಯವಾದ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ಹೀಗಿರುವಲ್ಲಿ ಸಭೆಯೆಲ್ಲಾ ಒಂದೇ ಸ್ಥಳದಲ್ಲಿ ಕೂಡಿಬಂದಾಗ ಎಲ್ಲರೂ ವಾಣಿಗಳನ್ನಾಡಿದರೆ ಈ ವರವನ್ನು ಹೊಂದದಿರುವ ಸಭೆಯವರು ಅಥವಾ ಕ್ರಿಸ್ತನಂಬಿಕೆಯಿಲ್ಲದವರು ಒಳಗೆ ಬಂದು ನೋಡಿ - ನಿಮಗೆ ಹುಚ್ಚು ಹಿಡಿದದೆ ಎಂದು ಹೇಳುವದಿಲ್ಲವೋ?


ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿರುವದೋ, ಹಾಗೆಯೇ ಕ್ರಿಸ್ತನು.


ಹೇಗಂದರೆ ಮೊದಲನೇದು ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮಲ್ಲಿ ಭೇದಗಳು ಉಂಟಾಗುತ್ತವೆಂದು ಕೇಳುತ್ತೇನೆ; ಮತ್ತು ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.


ಈ ನಿವಿುತ್ತದಿಂದ ಕರ್ತನಲ್ಲಿ ನನ್ನ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನೂ ನಂಬಿಗಸ್ತನೂ ಆಗಿದ್ದಾನೆ. ಅವನು ಕ್ರಿಸ್ತನ ಸೇವೆಯಲ್ಲಿರುವ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮವನ್ನು ನಿಮ್ಮ ನೆನಪಿಗೆ ತರುವನು.


ಅಲ್ಲಿ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆದದ್ದನ್ನೂ ವಿವರವಾಗಿ ಹೇಳಿದರು.


ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ


ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದುಕೊಳ್ಳುವದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇನೆ.


ಇದಲ್ಲದೆ ಪ್ರತಿಸಭೆಯಲ್ಲಿ ಸಭೆಯವರ ಸಮ್ಮತಿಯಿಂದ ಹಿರಿಯರನ್ನು ಗೊತ್ತು ಮಾಡಿ ನೇವಿುಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.


ಆ ಕಾಲದಲ್ಲಿ ಪ್ರವಾದಿಗಳಾಗಿದ್ದ ಕೆಲವರು ಯೆರೂಸಲೇವಿುನಿಂದ ಅಂತಿಯೋಕ್ಯಕ್ಕೆ ಬಂದರು.


ಇವರ ವಿಷಯವಾದ ವರ್ತಮಾನವು ಯೆರೂಸಲೇವಿುನಲ್ಲಿದ್ದ ಸಭೆಯವರ ಕಿವಿಗೆ ಬಿದ್ದಾಗ ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.


ಅವರಲ್ಲಿ ಕುಪ್ರದ್ವೀಪದವರು ಕೆಲವರೂ ಕುರೇನ್ಯದವರು ಕೆಲವರೂ ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡಲೂ ಮಾತಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದರು.


ಈ ಮಾತು ಸರ್ವಮಂಡಲಿಗೆ ಒಳ್ಳೇದೆಂದು ತೋಚಿತು. ಅವರು ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆದ ಸ್ತೆಫನನನ್ನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ, ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು ಅಪೊಸ್ತಲರ ಮುಂದೆ ನಿಲ್ಲಿಸಿದರು.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಯೇಸುವನ್ನೂ ಆತನ ಶಿಷ್ಯರನ್ನೂ ಮದುವೆಗೆ ಕರೆದರು.


ಆ ದಿವಸಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ಸಹೋದರರು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗಂದನು -


ಆ ದಿವಸಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್‍ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ - ದಿನದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವದಿಲ್ಲವೆಂದು ಗುಣುಗುಟ್ಟಿದರು.


ತರುವಾಯ ಊಟಮಾಡಿ ಬಲ ಹೊಂದಿದನು.


ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ - ತಡಮಾಡದೆ ನಮ್ಮ ತನಕ ಬರಬೇಕೆಂದು ಬೇಡಿಕೊಂಡರು.


ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರು ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮ ತಮ್ಮ ಶಕ್ತ್ಯನುಸಾರ ದ್ರವ್ಯ ಸಹಾಯಮಾಡಬೇಕೆಂದು ನಿಶ್ಚಯಿಸಿಕೊಂಡರು.


ಆದರೆ ಶಿಷ್ಯರು ಅವನ ಸುತ್ತಲು ನಿಂತುಕೊಂಡಿರುವಾಗ ಅವನು ಎದ್ದು ಊರೊಳಕ್ಕೆ ಹೋದನು. ಮರುದಿನ ಬಾರ್ನಬನ ಜೊತೆಯಲ್ಲಿ ದೆರ್ಬೆಗೆ ಹೊರಟನು.


ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕೆಂಬದಾಗಿ ಎಚ್ಚರಿಕೆಯ ಮಾತನ್ನು ಹೇಳಿ ಕ್ರಿಸ್ತನಂಬಿಕೆಯಲ್ಲಿ ಸ್ಥಿರವಾಗಿರ್ರಿ ಎಂದು ಅವರನ್ನು ಧೈರ್ಯಗೊಳಿಸಿದರು.


ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.


ಆಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.


ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.


ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಕೂಡ ಕರೆಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.


ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವ್ಯತ್ಯಾಸ ಬೋಧನೆಗಳನ್ನು ಮಾಡಿ ಯೇಸುವಿನ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.


ಅಲ್ಲಿ ಶಿಷ್ಯರನ್ನು ಹುಡುಕಿ ಕಂಡು ಏಳು ದಿವಸ ನಿಂತೆವು. ಅವರು ಆತ್ಮನ ಪ್ರೇರಣೆಯಿಂದ ಪೌಲನಿಗೆ - ನೀನು ಯೆರೂಸಲೇವಿುಗೆ ಕಾಲಿಡಬೇಡವೆಂದು ಹೇಳಿದರು.


ನೀವು ಕರೆಸಿಕೊಳ್ಳುವ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು