Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 11:8 - ಕನ್ನಡ ಸತ್ಯವೇದವು J.V. (BSI)

8 ನಾನು - ಬೇಡವೇ ಬೇಡ, ಸ್ವಾಮೀ, ಹೊಲೆಯಾದ ಪದಾರ್ಥವಾಗಲಿ ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ನಾನು; “ಬೇಡವೇ ಬೇಡ, ಕರ್ತನೇ, ಹೊಲೆಯಾದ ಪದಾರ್ಥವಾಗಲಿ, ಅಶುದ್ಧ ಪದಾರ್ಥವಾಗಲಿ ಎಂದೂ ನನ್ನ ಬಾಯೊಳಗೆ ಸೇರಿದ್ದಿಲ್ಲ” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ನಾನು, ‘ಬೇಡವೇ ಬೇಡ ಸ್ವಾಮಿ, ಅಶುದ್ಧ ಹಾಗು ಅಸ್ಪೃಶ್ಯವಾದುದು ಯಾವುದೂ ನನ್ನ ಬಾಯನ್ನು ಎಂದೂ ಹೊಕ್ಕಿಲ್ಲ,’ ಎಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಆದರೆ ನಾನು, ‘ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದ ಮತ್ತು ಅಶುದ್ಧವಾದ ಏನನ್ನಾಗಲಿ ನಾನೆಂದೂ ತಿಂದಿಲ್ಲ’ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಅದಕ್ಕೆ ನಾನು, ‘ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,’ ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಮಿಯಾ, ಧನಿಯಾ ಮಿಯಾ ತಸೊ ಕರಿನಾ! ಭ್ರಸ್ಟ್ ಅನಿ ಅಶುದ್ದ್ ಹೊತ್ತೆ ಕಾಯ್ಬಿ ಮಿಯಾ ಖಾಯ್ನಾ ಮನುನ್ ಸಾಂಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 11:8
9 ತಿಳಿವುಗಳ ಹೋಲಿಕೆ  

ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಬಲ್ಲೆನು, ಮತ್ತು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧ.


ಯಾಕಂದರೆ ಕ್ರಿಸ್ತನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯಲ್ಲಿ ದೇವಜನಕ್ಕೆ ಸಂಬಂಧಪಟ್ಟವನಾದನು; ಮತ್ತು ಕ್ರಿಸ್ತನಂಬಿಕೆಯಿಲ್ಲದ ಹೆಂಡತಿಯು ನಮ್ಮ ಸಹೋದರನಾದ ತನ್ನ ಗಂಡನಲ್ಲಿ ದೇವಜನಕ್ಕೆ ಸಂಬಂಧಪಟ್ಟವಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು; ಈಗಲಾದರೋ ಅವರು ದೇವಜನರಲ್ಲಿ ಸೇರಿದವರೇ ಆಗಿದ್ದಾರೆ.


ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ತಿನ್ನುವ ಆಹಾರವು ಹೊಲಸಾಗುವದು.


ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಸಂಪ್ರದಾಯವನ್ನು ಹಿಡಿದು ತಮ್ಮ ಕೈಗಳನ್ನು ಚೆನ್ನಾಗಿ ತೊಳಕೊಳ್ಳದೆ ಆಹಾರ ತೆಗೆದುಕೊಳ್ಳುವದಿಲ್ಲ; ಮತ್ತು ಪೇಟೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಆಹಾರ ತೆಗೆದುಕೊಳ್ಳುವದಿಲ್ಲ; ಇದಲ್ಲದೆ ಅವರಲ್ಲಿ ತಂಬಿಗೆ ಬಟ್ಟಲು ತಪ್ಪಲೆಗಳನ್ನು ಬೆಳಗಿ ತೊಳೆಯುವದೇ ಮೊದಲಾದ ಅನೇಕಾಚಾರಗಳನ್ನು ನಡಿಸುವ ನೇಮಕವುಂಟು. ಆತನ ಶಿಷ್ಯರಲ್ಲಿ ಕೆಲವರು ಮೈಲಿಗೆಯ ಕೈಯಿಂದ, ಅಂದರೆ ಕೈತೊಳಕೊಳ್ಳದೆ ಆಹಾರ ತೆಗೆದುಕೊಳ್ಳುವದನ್ನು ಆ ಫರಿಸಾಯರೂ ಶಾಸ್ತ್ರಿಗಳೂ ಕಂಡು


ಇದರಿಂದ ಶುದ್ಧಾಶುದ್ಧಗಳನ್ನೂ ಭಕ್ಷ್ಯಾಭಕ್ಷ್ಯಗಳನ್ನೂ ವಿವೇಚಿಸುವದಕ್ಕೆ ನಿಮ್ಮಿಂದಾಗುವದು.


ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನೂ ಅಲ್ಲದ ವಸ್ತುಗಳನ್ನೂ ಶುದ್ಧವಾದವುಗಳನ್ನೂ ಅಶುದ್ಧವಾದವುಗಳನ್ನೂ ವಿವೇಚಿಸುವದೂ


ಆಗ - ಪೇತ್ರನೇ, ಎದ್ದು ಕೊಯ್ದು ತಿನ್ನು ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು.


ಅದಕ್ಕೆ - ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದು ಎಂಬದಾಗಿ ಎರಡನೆಯ ಸಾರಿ ಆಕಾಶವಾಣಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು