Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:23 - ಕನ್ನಡ ಸತ್ಯವೇದವು J.V. (BSI)

23 ಆ ಘನವನ್ನು ಅವನು ದೇವರಿಗೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಹೆರೊದಾನ್ ಹಿ ಹೊಗ್ಳಾಪಾ ಸಗ್ಳಿ ಅಪ್ನಾಚಿಚ್ ಕರುನ್ ಘೆಟ್ಲ್ಯಾನ್, ತೆನಿ ದೆವಾಕ್ ಮಹಿಮಾ ಕರುಕ್ ನಾ ತಸೆ ಹೊವ್ನ್ ತನ್ನಾಚ್ ಧನಿಯಾಚ್ಯಾ ದೆವ್ ದುತಾನ್ ತೆಕಾ ರೊಗ್ ಯೆಯ್ ಸಾರ್ಕೆ ಕರ್‍ಲ್ಯಾನ್, ಅನಿ ತೆಚ್ಯಾ ಅಂಗಾತ್ಲಿ ಭುತ್ತುರ್‍ಲಿ ಭಾಗಾ ಕಿಡ್ಯಾನಿ ಖಾವ್ನ್ ತೊ ಮರುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:23
30 ತಿಳಿವುಗಳ ಹೋಲಿಕೆ  

ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿಸತ್ಯತೆಗಳ ನಿವಿುತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.


ಸುಮಾರು ಹತ್ತು ದಿನಗಳಾದ ನಂತರ ನಾಬಾಲನು ಯೆಹೋವನಿಂದ ಹತನಾಗಿ ಸತ್ತನು.


ನರಪುತ್ರನೇ, ನೀನು ತೂರಿನ ಪ್ರಭುವಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಉಬ್ಬಿದ ಮನಸ್ಸುಳ್ಳವನಾಗಿ ಆಹಾ, ನಾನು ದೇವರು, ಸಮುದ್ರ ಮಧ್ಯದಲ್ಲಿ ದೇವರ ಆಸನವನ್ನೇ ಹತ್ತಿದ್ದೇನೆ ಅಂದುಕೊಂಡಿಯಷ್ಟೆ; ನೀನು ನಿನ್ನ ಮನಸ್ಸನ್ನು ದೇವರ ಮನಸ್ಸಿನಷ್ಟು ಹೆಚ್ಚಿಸಿಕೊಂಡದೇನು? ನೀನು ಎಂದಿಗೂ ದೇವರಲ್ಲ, ನೀನು ನರಪ್ರಾಣಿಯೇ.


ಅವರು ಆಚೆ ಹೋಗಿ ನನಗೆ ದ್ರೋಹಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವದಿಲ್ಲ, ಸುಡುವ ಬೆಂಕಿಯು ಆರುವದಿಲ್ಲ; ಅವು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.


ನನ್ನ ರಕ್ಷಣ ಧರ್ಮದ ಕಾರ್ಯವೋ ಶಾಶ್ವತವಾಗಿ ನಿಲ್ಲುವದು, ನನ್ನ ವಿಮೋಚನ ಕ್ರಿಯೆಯು ತಲತಲಾಂತರಕ್ಕೂ ನೆಲೆಯಾಗಿರುವದು.


ಅರ್ಧರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಬಂದಿವಾನನ ಚೊಚ್ಚಲು ಮಗನವರೆಗೂ ಐಗುಪ್ತದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರ ಮಾಡಿದನು.


ನೀನು ನಿನ್ನನ್ನು ಸಂಹರಿಸುವವನೆದುರಿಗೆ ನಾನು ದೇವರು ಎಂದು ಹೇಳುವಿಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ.


ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದಿ? ಯಾರಿಗೆ ವಿರೋಧವಾಗಿ ಬಾಯ್ದೆರೆದು ಒದರಿದಿ? ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾಯೇಲ್ಯರ ಸದಮಲಸ್ವಾವಿುಯನ್ನಲ್ಲವೇ!


ನಿನ್ನ ವೈಭವವೂ ವೀಣಾನಾದವೂ ಪಾತಾಳಕ್ಕೆ ತಳ್ಳಲ್ಪಟ್ಟಿವೆ; ನಿನಗೆ ಹುಳಗಳೇ ಹಾಸಿಗೆ, ಕ್ರಿವಿುಗಳೇ ಹೊದಿಕೆ.


ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ ನಿರ್ದೇಹನಾಗಿ ದೇವರನ್ನು ನೋಡುವೆನು;


ಹುಳಗಳೂ ಮಣ್ಣುಹಕ್ಕಳೆಗಳೂ ನನ್ನ ಮಾಂಸವನ್ನು ಮುಸುಕಿವೆ. [ಬಿರಿದ] ಚರ್ಮವು ಕೂಡುತ್ತಾ ಬಂದು ಬಿರಿಯುತ್ತದೆ.


ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದನು; ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರಮಂದಿ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡುವಲ್ಲಿ ಪಾಳೆಯತುಂಬಾ ಹೆಣಗಳಿದ್ದವು.


ಯೆಹೋವನು ಐಗುಪ್ತ್ಯರನ್ನು ಹತಮಾಡುವದಕ್ಕೆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೇಬಾಗಲಿನ ಮೇಲಣ ಪಟ್ಟಿಯಲ್ಲಿಯೂ ಎರಡು ನಿಲುವು ಕಂಬಗಳಲ್ಲಿಯೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವನು. ನಿಮ್ಮ ಪ್ರಾಣ ತೆಗೆಯುವದಕ್ಕೆ ಸಂಹಾರಕನನ್ನು ನಿಮ್ಮ ಮನೆಗಳಲ್ಲಿ ಬರಗೊಡಿಸುವದೇ ಇಲ್ಲ.


ಆ ರಾತ್ರಿ ನಾನು ಐಗುಪ್ತ ದೇಶದ ನಡುವೆ ಹಾದುಹೋಗಿ ಮನುಷ್ಯರಲ್ಲಾಗಲಿ ಪಶುಗಳಲ್ಲಾಗಲಿ ಚೊಚ್ಚಲಾಗಿರುವದನ್ನೆಲ್ಲಾ ಸಂಹರಿಸುವೆನು; ಐಗುಪ್ತ ದೇಶದ ಸಮಸ್ತ ದೇವತೆಗಳಿಗೂ ಶಿಕ್ಷೆಮಾಡುವೆನು; ನಾನು ಯೆಹೋವನು.


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ನಿನ್ನನ್ನು ಅವರ ಮುಂದೆ ಆಟಂಕವಾಗಿ ಒಡ್ಡುತ್ತೀಯಾ?


ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು -


ಕೂಡಿದ್ದ ಜನರು - ಇದು ಮನುಷ್ಯನ ನುಡಿಯಲ್ಲ, ದೇವರ ನುಡಿಯೇ ಎಂದು ಆರ್ಭಟಿಸಿದರು.


ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು; ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು