Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:11 - ಕನ್ನಡ ಸತ್ಯವೇದವು J.V. (BSI)

11 ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈಹಿಡಿಯುವವರನ್ನು ಹುಡುಕುತ್ತಾ ತಿರುಗಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀನು ಬೆಳಕನ್ನು ಕಾಣದೆ ಕೆಲವು ಕಾಲ ಕುರುಡನಾಗಿರುವೆ,” ಎಂದನು. ಆ ಕ್ಷಣವೇ ಎಲಿಮನ ಕಣ್ಣು ಮಬ್ಬಾಯಿತು; ಕತ್ತಲೆ ಕವಿದಂತಾಯಿತು; ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು. ಆಗ ಎಲಿಮನಿಗೆ ಎಲ್ಲವೂ ಕತ್ತಲಾಯಿತು. ತನ್ನನ್ನು ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸುತ್ತಾ ಸುತ್ತಮುತ್ತ ನಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇಗೋ ಕರ್ತದೇವರ ಹಸ್ತ ನಿನಗೆ ವಿರೋಧವಾಗಿದೆ. ಈಗ ನೀನು ಕುರುಡನಾಗಿ, ಸ್ವಲ್ಪ ಕಾಲ ಸೂರ್ಯನ ಬೆಳಕನ್ನು ಕಾಣದೇ ಹೋಗುವೆ,” ಎಂದನು. ತಕ್ಷಣವೇ ಅವನ ಮೇಲೆ ಮಂಜು ಮುಸುಕಿ ಕತ್ತಲೆ ಆವರಿಸಿತು. ಅವನು ತಡವರಿಸುತ್ತಾ ತನ್ನನ್ನು ಯಾರಾದರೂ ಕೈಹಿಡಿದು ನಡೆಸುವರೋ ಎಂದು ಹುಡುಕಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಬಕ್, ಧನಿಯಾ ಹಾತ್ ತುಕಾ ವೈರ್ ಹೊವ್ನ್ ಉಟೈತಿಲ್,ಉಲ್ಲೊ ಯೆಳ್ ತುಕಾ ಕಾಯ್ಬಿ ದಿಸಿನಾ, ತಿಯಾ ಕುಡ್ಡೊ ಹೊತೈ, ದಿಸಾಚೊ ಉಜ್ವೊಡ್ಬಿ ತಿಯಾ ಬಗುಕ್ ಹೊಯ್ನಾ ಮಟ್ಲ್ಯಾನ್ ತನ್ನಾ ತಾಬೊಡ್ತೊಬ್ ಎಲಿಯಾಕ್ ಸಗ್ಳೆಬಿ ಕಾಳೊಕ್ ಹೊವ್ನ್ ಗೆಲೆ, ಕೊನ್ ತರ್ ಬಿ ಅಪ್ನಾಕ್ ಹಾತ್ ಧರುನ್ ಚಲ್ವುಂದಿತ್ ಮನುನ್ ತಳ್ಮಳ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:11
18 ತಿಳಿವುಗಳ ಹೋಲಿಕೆ  

ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ನೀರಿನಂತೆ ನನ್ನ ಶರೀರದ ಸಾರವೆಲ್ಲಾ ಬತ್ತಿಹೋಯಿತು. ಸೆಲಾ.


ಯೆಹೋವನು ಅಡವಿಯಲ್ಲಿರುವ ನಿನ್ನ ಎಲ್ಲಾ ಪಶುಗಳಿಗೂ ಕುದುರೆ ಕತ್ತೆ ಒಂಟೆ ದನ ಕುರಿ ಆಡು ಇವೆಲ್ಲವುಗಳಿಗೂ ವಿರೋಧವಾಗಿ ತನ್ನ ಕೈಯೆತ್ತಿ ಘೋರವ್ಯಾಧಿಯನ್ನುಂಟುಮಾಡುವನೆಂದು ತಿಳುಕೋ.


ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವದು ಭಯಂಕರವಾದದ್ದು.


ದೇವರ ಹಸ್ತವು ಅವರಿಗೂ ಬಾಧಕವಾಗಿದ್ದದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ಪ್ರಭುಗಳೆಲ್ಲರನ್ನೂ ಕೂಡಿಸಿ ಅವರಿಗೆ - ಇಸ್ರಾಯೇಲ್‍ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿರಿ ಅಂದರು.


ಇವರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮಂಜೂ ಆಗಿದ್ದಾರೆ; ಇಂಥವರ ಪಾಲಿಗೆ ಕಾರ್ಗತ್ತಲೆ ಇಟ್ಟಿರುವದು.


ಆಗ ಯೇಸು - ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ; ಆ ತೀರ್ಪು ಏನಂದರೆ, ಕಣ್ಣಿಲ್ಲದವರಿಗೆ ಕಣ್ಣುಬರುವವು. ಕಣ್ಣಿದ್ದವರು ಕುರುಡರಾಗುವರು ಅಂದನು.


ನನ್ನ ವಿುತ್ರರೇ, ಕರುಣಿಸಿರಿ, ನೀವಾದರೂ ಕರುಣಿಸಿರಿ! ದೇವರ ಕೈ ನನ್ನನ್ನು ಹೊಡೆಯಿತಲ್ಲಾ.


ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬದಾಗಿ ಎಣಿಸಿಕೊಳ್ಳದಂತೆ ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ; ಅದೇನಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವದು;


ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು - ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದನು.


ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಮುಚ್ಚಿ ದಿವ್ಯದರ್ಶಿಗಳೆಂಬ ತಲೆಗಳಿಗೆ ಮುಸುಕು ಹಾಕಿದ್ದಾನಷ್ಟೆ.


ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ.


ಅರಾಮ್ಯರ ಅರಸನು ಇಸ್ರಾಯೇಲ್ಯರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನು. ಅವನು ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ತನ್ನ ಸೇನಾಪತಿಗಳೊಡನೆ ಗೊತ್ತು ಮಾಡುವಷ್ಟು ಸಾರಿ


ಮಂಜೂಷವು ಅಲ್ಲಿ ಹೋದ ಮೇಲೆ ಯೆಹೋವನ ಹಸ್ತವು ಆ ಊರಿನವರಿಗೂ ಬಾಧಕವಾದದರಿಂದ ಅಲ್ಲಿ ದೊಡ್ಡ ಗದ್ದಲವಾಯಿತು. ಯೆಹೋವನು ಊರಿನ ಚಿಕ್ಕವರಲ್ಲಿಯೂ ದೊಡ್ಡವರಲ್ಲಿಯೂ ಗಡ್ಡೆಗಳನ್ನು ಬರಮಾಡಿದನು.


ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಇವರು ಬಾಗಿಲು ಯಾವದೆಂದು ತಿಳಿಯದೆ ಬೇಸರಗೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು