Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:38 - ಕನ್ನಡ ಸತ್ಯವೇದವು J.V. (BSI)

38 ಆದದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗುತ್ತದೆಂದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 “ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38-39 “ನನ್ನ ಸಹೋದರರೇ, ನಿಮಗಿದು ತಿಳಿದಿರಲಿ: ಪಾಪಕ್ಷಮೆ ಯೇಸುವಿನ ಮುಖಾಂತರವೇ ಸಾಧ್ಯ ಎಂದು ಸಾರಲಾಗುತ್ತಿದೆ. ಮೋಶೆಯ ನಿಯಮಗಳ ಪಾಲನೆಯ ಮೂಲಕ ಪಾಪಗಳಿಂದ ವಿಮೋಚನೆ ಹೊಂದಲು ನಿಮ್ಮಿಂದಾಗಲಿಲ್ಲ; ಆದರೆ ಯೇಸುವನ್ನು ವಿಶ್ವಾಸಿಸುವ ಪ್ರತಿ ಒಬ್ಬನೂ ಅವೆಲ್ಲವುಗಳಿಂದ ವಿಮೋಚನೆ ಪಡೆಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38-39 ಸಹೋದರರೇ, ಇದು ನಿಮಗೆ ತಿಳಿದಿರಲಿ: ಆತನ ಮೂಲಕವಾಗಿ ನಿಮ್ಮ ಪಾಪಗಳಿಗೆ ಕ್ಷಮೆ ದೊರೆಯುತ್ತದೆ. ಮೋಶೆಯ ಧರ್ಮಶಾಸ್ತ್ರಕ್ಕೆ, ನಿಮ್ಮನ್ನು ನಿಮ್ಮ ಪಾಪಗಳಿಂದ ಬಿಡಿಸಲಾಗಲಿಲ್ಲ. ಆದರೆ ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನು ಆತನ ಮೂಲಕವಾಗಿ ತನ್ನ ಎಲ್ಲಾ ಪಾಪಗಳಿಂದ ಬಿಡುಗಡೆಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 “ಆದ್ದರಿಂದ, ನನ್ನ ಸಹೋದರರೇ, ಯೇಸುವಿನ ಮೂಲಕವೇ ಪಾಪಕ್ಷಮಾಪಣೆ ಸಾಧ್ಯವೆಂದು ನಿಮಗೆ ಸಾರಲಾಗುತ್ತಿದೆಯೆಂದು ನೀವು ತಿಳಿಯಬೇಕೆಂಬುದೇ ನನ್ನ ಅಪೇಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತಸೆಹೊವ್ನ್ ಮಾಜ್ಯಾ ಭಾವಾನು ಅನಿ ಭೆನಿಯಾನು ತುಮ್ಕಾ ಜೆಜುಕ್ನಾಚ್ ಪಾಪಾಕ್ ಕ್ಷಮಾ ಗಾವ್ತಾ ಮನುನ್ ಸಾಂಗುನ್ ಹೊಲಾ ಮನ್ತಲೆ ಮಿಯಾ ತುಮ್ಕಾ ಕಳ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:38
29 ತಿಳಿವುಗಳ ಹೋಲಿಕೆ  

ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಪ್ರಿಯರಾದ ಮಕ್ಕಳೇ, ಕ್ರಿಸ್ತನ ಹೆಸರಿನ ನಿವಿುತ್ತ ನಿಮ್ಮ ಪಾಪಗಳು ಕ್ಷವಿುಸಲ್ಪಟ್ಟಿರುವದರಿಂದ ನಿಮಗೆ ಬರೆಯುತ್ತೇನೆ.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಆ ಕುಮಾರನಲ್ಲಿ ನಮ್ಮ ಪಾಪಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು ಎಂದು ಹೇಳಿದನು.


ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;


ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿಹೇಳಿದ್ದಾರೆ ಅಂದನು.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಧರ್ಮಶಾಸ್ತ್ರದ ಪ್ರಕಾರ ಸ್ವಲ್ಪಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತಧಾರೆಯಿಲ್ಲದೆ ಪಾಪಪರಿಹಾರ ಉಂಟಾಗುವದಿಲ್ಲ.


ಒಬ್ಬರಿಗೊಬ್ಬರು ಉಪಕಾರಿಗಳಾಗಿಯೂ ಕರುಣೆಯುಳ್ಳವರಾಗಿಯೂ ಕ್ಷವಿುಸುವವರಾಗಿಯೂ ಇರ್ರಿ.


ನಿಮ್ಮೆಲ್ಲರಿಗೂ ಇಸ್ರಾಯೇಲ್ ಜನರೆಲ್ಲರಿಗೂ ತಿಳಿಯಬೇಕಾದದ್ದೇನಂದರೆ - ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ನಿಮ್ಮೆದುರಿನಲ್ಲಿ ಸ್ವಸ್ಥನಾಗಿ ನಿಂತಿರುತ್ತಾನೆ.


ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಪ್ರಸಂಗ ಮಾಡಿದನು - ಯೆಹೂದ್ಯರೇ, ಯೆರೂಸಲೇವಿುನಲ್ಲಿ ವಾಸವಾಗಿರುವ ಎಲ್ಲಾ ಜನರೇ, ಈ ಸಂಗತಿಯು ಏನೆಂದು ನಿಮಗೆ ಗೊತ್ತಾಗುವ ಹಾಗೆ ನನ್ನ ಮಾತಿಗೆ ಕಿವಿಗೊಡಿರಿ;


ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ರಕ್ಷಣಕಾರ್ಯವನ್ನು ಮಾಡುವದು ನಿಮ್ಮ ನಿವಿುತ್ತವಲ್ಲವೆಂದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.


ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ಇಸ್ರಾಯೇಲೇ, ಯೆಹೋವನನ್ನು ಮುಂಗಾದಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವದು.


ನೀನು ಪಾಪವನ್ನು ಕ್ಷವಿುಸುವವನಾದ್ದರಿಂದ ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ಯಾವನ ದ್ರೋಹವು ಪರಿಹಾರವಾಗಿದೆಯೋ ಯಾವನ ಪಾಪವು ಕ್ಷವಿುಸಲ್ಪಟ್ಟಿದೆಯೋ ಅವನೇ ಧನ್ಯನು.


ಆದರೆ ಯೇಸು ಅದಕ್ಕಿಂತ ಶ್ರೇಷ್ಠವಾದ ಯಾಜಕೋದ್ಯೋಗವನ್ನು ಹೊಂದಿದವನಾಗಿದ್ದಾನೆ; ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.


ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ಚಿತ್ತವಿಲ್ಲದಿದ್ದರೂ ರಾಜನೇ, ಇದು ನಿನಗೆ ತಿಳಿದಿರಲಿ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವದಿಲ್ಲ ಎಂದುತ್ತರಕೊಟ್ಟರು.


ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು